Homeಕರ್ನಾಟಕಜಯನಗರ ಮತಎಣಿಕೆ ವಿವಾದ : ಸೌಮ್ಯ ರೆಡ್ಡಿ ವಿರುದ್ಧದ ಬಿಜೆಪಿ ಶಾಸಕ ರಾಮಮೂರ್ತಿ ಅರ್ಜಿ ವಜಾಗೊಳಿಸಿದ...

ಜಯನಗರ ಮತಎಣಿಕೆ ವಿವಾದ : ಸೌಮ್ಯ ರೆಡ್ಡಿ ವಿರುದ್ಧದ ಬಿಜೆಪಿ ಶಾಸಕ ರಾಮಮೂರ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

- Advertisement -
- Advertisement -

ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿ ಪರಾಜಿತ ಅಭ್ಯರ್ಥಿ ಹಾಗೂ ಅರ್ಜಿದಾರರಾದ ಸೌಮ್ಯ ರೆಡ್ಡಿ ಅವರಿಗೆ ಡಿವಿಡಿ ಮತ್ತು ಇತರ ಕೆಲವು ದಾಖಲೆಗಳನ್ನು ರೆಕಾರ್ಡ್‌ನಲ್ಲಿ ಇರಿಸಲು ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.3) ವಜಾಗೊಳಿಸಿದೆ.

ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ಸಿ.ಕೆ ರಾಮಮೂರ್ತಿ ಅವರಿಗೆ ಲಿಖಿತ ಹೇಳಿಕೆ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದೆ ಎಂದು ವರದಿಯಾಗಿದೆ.

ಶಾಸಕ ಸಿ.ಕೆ ರಾಮಮೂರ್ತಿ ವಿರುದ್ಧ ಸೌಮ್ಯಾರೆಡ್ಡಿ ಅವರು ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧು ಎಂಬುದಾಗಿ ಘೋಷಿಸಬೇಕು ಎಂದು ಕೋರಿದ್ದರು.

ಸೌಮ್ಯರೆಡ್ಡಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಡಿವಿಡಿ ಸೇರಿದಂತೆ 10 ಪ್ರಮುಖ ದಾಖಲೆಗಳನ್ನು ಹಾಜರುಪಡಿಸಲು ಫೆ.14ರಂದು ಅನುಮತಿ ನೀಡಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಿ.ಕೆ ರಾಮಮೂರ್ತಿ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ : 2023ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ, ಜಯನಗರ ಕ್ಷೇತ್ರದಿಂದ ಸಿ.ಕೆ ರಾಮಮೂರ್ತಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಸೌಮ್ಯರೆಡ್ಡಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯರೆಡ್ಡಿ ಕೇವಲ 16 ಮತಗಳಿಂದ ಪರಾಭವಗೊಂಡಿದ್ದರು.

ಈ ಸಂಬಂಧ ಸಿ.ಕೆ ರಾಮಮೂರ್ತಿ ಅವರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಸೌಮ್ಯರೆಡ್ಡಿ, ಮತಎಣಿಕೆ ಪ್ರಕ್ರಿಯೆಯಲ್ಲಿ ಏನೋ ವ್ಯತ್ಯಾಸವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

“ವಿದ್ಯುನ್ಮಾನ ಮತ ಯಂತ್ರಗಳ ಮತ ಎಣಿಕೆಯಲ್ಲಿ ನಾನು ಮುನ್ನಡೆ ಸಾಧಿಸಿದ್ದೆ. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ಒಟ್ಟು 827 ಅಂಚೆ ಮತಗಳಲ್ಲಿ ವ್ಯತ್ಯಾಸವಾಗಿದ್ದು, ಪ್ರತಿ ಬಾರಿ ಮರು ಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿ-ಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಅಂಚೆ ಮೂಲಕ ಬಂದಿದ್ದ ಮತ ಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ” ಎಂದು ಸೌಮ್ಯಾರೆಡ್ಡಿ ಆರೋಪಿಸಿದ್ದರು.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ : ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...