Homeಕರ್ನಾಟಕಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

ಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

- Advertisement -
- Advertisement -

ಬೀದಿ ವ್ಯಾಪಾರಿಗಳಿಗೆ ಜಯನಗರ 4ನೇ ಬ್ಲಾಕ್‌ನಲ್ಲಿ ವ್ಯಾಪಾರ ಮಾಡದಂತೆ ಬಿ.ಬಿ.ಎಂ.ಪಿ ಮಾರ್ಷಲ್ ಗಳು ಹಾಗೂ ಅಧಿಕಾರಿಗಳು ಸೂಚಿಸಿ ಇಂದು ತೆರವು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಬೀದಿ ಬದಿ ವ್ಯಾಪಾರಿಗಳ ಸಂಘ ವಿರೋಧಿಸಿದೆ.

ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿ ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಅಲ್ಲಿ ಸುಮಾರು 400-500 ಬೀದಿ ವ್ಯಾಪಾರಿಗಳಿದ್ದಾರೆ. ಅವರಿಗೆ 2018ರಲ್ಲಿ ಬಿಬಿಎಂಪಿ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರವನ್ನು ನೀಡಿದೆ. ಆದರೆ ನ.4ರಂದು  ಬಿಬಿಎಂಪಿ ಮಾರ್ಷಲ್‌ಗಳು ಹಾಗೂ ಅಧಿಕಾರಿಗಳು ಬಂದು ನ.7ರ ಮಂಗಳವಾರದಿಂದ ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿಯಲ್ಲಿ ವ್ಯಾಪಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಪ್ರಕಟಣೆ ಹೊರಡಿಸಿದ್ದು, ನಮಗೆ ಬಹಳ ಆತಂಕವಾಗಿದೆ. ನಾವು ಯಾವುದೇ ಅಪರಾಧ ಮಾಡಿಲ್ಲ. ನಾವು ಬೀದಿ ವ್ಯಾಪಾರಿಗಳ ಕಾನೂನಿನ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ  ನಮ್ಮಿಂದ ತಪ್ಪಿದ್ದರೆ ದಯವಿಟ್ಟು ಸಭೆ ಕೆರೆದು ತಿಳಿಸಿ, ನಾವು ತಿದ್ದಿಕೊಳ್ಳುತ್ತೇವೆ. ಆದರೆ ಈ ರೀತಿ ದಿಡೀರ್‌ ಎತ್ತಂಗಡಿ ಮಾಡಿದರೆ ಹೇಗೆ? ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಕಲಾಂ 3(3)ರ ಪ್ರಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲಾ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರಿಗೂ ಎತ್ತಂಗಡಿ ಮಾಡುವಂತಿಲ್ಲ. ಹಾಗೆಯೇ ಕಲಾಂ 18ರ ಪ್ರಕಾರ ಲಿಖಿತ ನೋಟಿಸ್ ನೀಡದೆ ಯಾರನ್ನು ಎತ್ತಂಗಡಿ ಮಾಡುವಂತಿಲ್ಲ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ವಿನಯ್‌, ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಎತ್ತಂಗಡಿಗೆ ಬಿಬಿಎಂಪಿ ಸೂಚಿಸಿದೆ. ನಾವು ಇದಕ್ಕೆ ವಿರೋಧವನ್ನು ಬಿಬಿಎಂಪಿಗೆ ಕಳುಹಿಸಿದ್ದೇವೆ. ಬೆಳಿಗ್ಗಿನಿಂದ ತೆರವು ಮಾಡುತ್ತಿದ್ದಾರೆ. ಯಾವುದೇ ಆದೇಶವಿಲ್ಲ. ಮೌಖಿಕವಾಗಿ ಮಾತ್ರವಾಗಿ ಹೇಳಲಾಗಿದೆ. ತುಂಬಾ ಜನ ಇಲ್ಲಿ ಒತ್ತುವರಿ ಮಾಡಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ಯಾಕೆ ಈ ಆದೇಶ ಮಾಡಿದ್ದಾರೆ ಎನ್ನವುದು ಸ್ಪಷ್ಟವಾಗಿ ಹೇಳುತ್ತಿಲ್ಲ. ಅಲ್ಲಿ ವ್ಯಾಪಾರ ಮಾಡುತಿದ್ದ ಎಲ್ಲಾ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರಿಸಲು ಅವಕಾಶ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆ ಆಗದ ರೀತಿ ಸೂಕ್ತ ಆದೇಶ ನೀಡಬೇಕು. ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ
ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಕಾರ್ಯಾಗಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸುಬ್ರಮಣ್ಯ, ನಾವು 35-40ವರ್ಷಗಳಿಂದ ಇದೇ ಬೀದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಡೀರ್‌ ನಮಗೆ ತೆರವಿಗೆ ಆದೇಶ ಬಂದಿದೆ. ಇಂದು ಬೆಳಿಗ್ಗಿನಿಂದಲೇ ತೆರವಿಗೆ ಬಂದಿದ್ದಾರೆ. 150ಕ್ಕೂ ಅಧಿಕ ವ್ಯಾಪಾರಿಗಳ ಜೀವನೋಪಾಯದ ಮೇಲೆ ಇದು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ನಾವು ಈ ಬಗ್ಗೆ ಸ್ಥಳೀಯ ಶಾಸಕರ ಬಳಿ ತೆರಳಿ ಸಮಸ್ಯೆ ಹೇಳಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸೋಮನಾಥನ್, ನಾವು 40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಹೂ, ಹಣ್ಣುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದೆವು. ಎಲ್ಲವನ್ನೂ ತೆಗೆದು ಎಸೆಯುತ್ತಿದ್ದಾರೆ. ನಾವು ಮತ ಹಾಕುವುದಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೋರ್ಟ್‌ ಆದೇಶ ಎಂದು ಹೇಳುತ್ತಿದ್ದಾರೆ. ನಮ್ಮ ಸಮಸ್ಯೆ ಕೇಳುವವರು ಯಾರು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...