Homeಕರ್ನಾಟಕಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

ಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

- Advertisement -
- Advertisement -

ಬೀದಿ ವ್ಯಾಪಾರಿಗಳಿಗೆ ಜಯನಗರ 4ನೇ ಬ್ಲಾಕ್‌ನಲ್ಲಿ ವ್ಯಾಪಾರ ಮಾಡದಂತೆ ಬಿ.ಬಿ.ಎಂ.ಪಿ ಮಾರ್ಷಲ್ ಗಳು ಹಾಗೂ ಅಧಿಕಾರಿಗಳು ಸೂಚಿಸಿ ಇಂದು ತೆರವು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಬೀದಿ ಬದಿ ವ್ಯಾಪಾರಿಗಳ ಸಂಘ ವಿರೋಧಿಸಿದೆ.

ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿ ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಅಲ್ಲಿ ಸುಮಾರು 400-500 ಬೀದಿ ವ್ಯಾಪಾರಿಗಳಿದ್ದಾರೆ. ಅವರಿಗೆ 2018ರಲ್ಲಿ ಬಿಬಿಎಂಪಿ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರವನ್ನು ನೀಡಿದೆ. ಆದರೆ ನ.4ರಂದು  ಬಿಬಿಎಂಪಿ ಮಾರ್ಷಲ್‌ಗಳು ಹಾಗೂ ಅಧಿಕಾರಿಗಳು ಬಂದು ನ.7ರ ಮಂಗಳವಾರದಿಂದ ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿಯಲ್ಲಿ ವ್ಯಾಪಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಪ್ರಕಟಣೆ ಹೊರಡಿಸಿದ್ದು, ನಮಗೆ ಬಹಳ ಆತಂಕವಾಗಿದೆ. ನಾವು ಯಾವುದೇ ಅಪರಾಧ ಮಾಡಿಲ್ಲ. ನಾವು ಬೀದಿ ವ್ಯಾಪಾರಿಗಳ ಕಾನೂನಿನ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ  ನಮ್ಮಿಂದ ತಪ್ಪಿದ್ದರೆ ದಯವಿಟ್ಟು ಸಭೆ ಕೆರೆದು ತಿಳಿಸಿ, ನಾವು ತಿದ್ದಿಕೊಳ್ಳುತ್ತೇವೆ. ಆದರೆ ಈ ರೀತಿ ದಿಡೀರ್‌ ಎತ್ತಂಗಡಿ ಮಾಡಿದರೆ ಹೇಗೆ? ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಕಲಾಂ 3(3)ರ ಪ್ರಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲಾ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರಿಗೂ ಎತ್ತಂಗಡಿ ಮಾಡುವಂತಿಲ್ಲ. ಹಾಗೆಯೇ ಕಲಾಂ 18ರ ಪ್ರಕಾರ ಲಿಖಿತ ನೋಟಿಸ್ ನೀಡದೆ ಯಾರನ್ನು ಎತ್ತಂಗಡಿ ಮಾಡುವಂತಿಲ್ಲ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ವಿನಯ್‌, ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಎತ್ತಂಗಡಿಗೆ ಬಿಬಿಎಂಪಿ ಸೂಚಿಸಿದೆ. ನಾವು ಇದಕ್ಕೆ ವಿರೋಧವನ್ನು ಬಿಬಿಎಂಪಿಗೆ ಕಳುಹಿಸಿದ್ದೇವೆ. ಬೆಳಿಗ್ಗಿನಿಂದ ತೆರವು ಮಾಡುತ್ತಿದ್ದಾರೆ. ಯಾವುದೇ ಆದೇಶವಿಲ್ಲ. ಮೌಖಿಕವಾಗಿ ಮಾತ್ರವಾಗಿ ಹೇಳಲಾಗಿದೆ. ತುಂಬಾ ಜನ ಇಲ್ಲಿ ಒತ್ತುವರಿ ಮಾಡಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ಯಾಕೆ ಈ ಆದೇಶ ಮಾಡಿದ್ದಾರೆ ಎನ್ನವುದು ಸ್ಪಷ್ಟವಾಗಿ ಹೇಳುತ್ತಿಲ್ಲ. ಅಲ್ಲಿ ವ್ಯಾಪಾರ ಮಾಡುತಿದ್ದ ಎಲ್ಲಾ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರಿಸಲು ಅವಕಾಶ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆ ಆಗದ ರೀತಿ ಸೂಕ್ತ ಆದೇಶ ನೀಡಬೇಕು. ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ
ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಕಾರ್ಯಾಗಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸುಬ್ರಮಣ್ಯ, ನಾವು 35-40ವರ್ಷಗಳಿಂದ ಇದೇ ಬೀದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಡೀರ್‌ ನಮಗೆ ತೆರವಿಗೆ ಆದೇಶ ಬಂದಿದೆ. ಇಂದು ಬೆಳಿಗ್ಗಿನಿಂದಲೇ ತೆರವಿಗೆ ಬಂದಿದ್ದಾರೆ. 150ಕ್ಕೂ ಅಧಿಕ ವ್ಯಾಪಾರಿಗಳ ಜೀವನೋಪಾಯದ ಮೇಲೆ ಇದು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ನಾವು ಈ ಬಗ್ಗೆ ಸ್ಥಳೀಯ ಶಾಸಕರ ಬಳಿ ತೆರಳಿ ಸಮಸ್ಯೆ ಹೇಳಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸೋಮನಾಥನ್, ನಾವು 40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಹೂ, ಹಣ್ಣುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದೆವು. ಎಲ್ಲವನ್ನೂ ತೆಗೆದು ಎಸೆಯುತ್ತಿದ್ದಾರೆ. ನಾವು ಮತ ಹಾಕುವುದಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೋರ್ಟ್‌ ಆದೇಶ ಎಂದು ಹೇಳುತ್ತಿದ್ದಾರೆ. ನಮ್ಮ ಸಮಸ್ಯೆ ಕೇಳುವವರು ಯಾರು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...