Homeಕರ್ನಾಟಕಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

ಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

- Advertisement -
- Advertisement -

ಬೀದಿ ವ್ಯಾಪಾರಿಗಳಿಗೆ ಜಯನಗರ 4ನೇ ಬ್ಲಾಕ್‌ನಲ್ಲಿ ವ್ಯಾಪಾರ ಮಾಡದಂತೆ ಬಿ.ಬಿ.ಎಂ.ಪಿ ಮಾರ್ಷಲ್ ಗಳು ಹಾಗೂ ಅಧಿಕಾರಿಗಳು ಸೂಚಿಸಿ ಇಂದು ತೆರವು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಬೀದಿ ಬದಿ ವ್ಯಾಪಾರಿಗಳ ಸಂಘ ವಿರೋಧಿಸಿದೆ.

ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿ ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಅಲ್ಲಿ ಸುಮಾರು 400-500 ಬೀದಿ ವ್ಯಾಪಾರಿಗಳಿದ್ದಾರೆ. ಅವರಿಗೆ 2018ರಲ್ಲಿ ಬಿಬಿಎಂಪಿ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರವನ್ನು ನೀಡಿದೆ. ಆದರೆ ನ.4ರಂದು  ಬಿಬಿಎಂಪಿ ಮಾರ್ಷಲ್‌ಗಳು ಹಾಗೂ ಅಧಿಕಾರಿಗಳು ಬಂದು ನ.7ರ ಮಂಗಳವಾರದಿಂದ ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿಯಲ್ಲಿ ವ್ಯಾಪಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಪ್ರಕಟಣೆ ಹೊರಡಿಸಿದ್ದು, ನಮಗೆ ಬಹಳ ಆತಂಕವಾಗಿದೆ. ನಾವು ಯಾವುದೇ ಅಪರಾಧ ಮಾಡಿಲ್ಲ. ನಾವು ಬೀದಿ ವ್ಯಾಪಾರಿಗಳ ಕಾನೂನಿನ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ  ನಮ್ಮಿಂದ ತಪ್ಪಿದ್ದರೆ ದಯವಿಟ್ಟು ಸಭೆ ಕೆರೆದು ತಿಳಿಸಿ, ನಾವು ತಿದ್ದಿಕೊಳ್ಳುತ್ತೇವೆ. ಆದರೆ ಈ ರೀತಿ ದಿಡೀರ್‌ ಎತ್ತಂಗಡಿ ಮಾಡಿದರೆ ಹೇಗೆ? ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಕಲಾಂ 3(3)ರ ಪ್ರಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲಾ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರಿಗೂ ಎತ್ತಂಗಡಿ ಮಾಡುವಂತಿಲ್ಲ. ಹಾಗೆಯೇ ಕಲಾಂ 18ರ ಪ್ರಕಾರ ಲಿಖಿತ ನೋಟಿಸ್ ನೀಡದೆ ಯಾರನ್ನು ಎತ್ತಂಗಡಿ ಮಾಡುವಂತಿಲ್ಲ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ವಿನಯ್‌, ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಎತ್ತಂಗಡಿಗೆ ಬಿಬಿಎಂಪಿ ಸೂಚಿಸಿದೆ. ನಾವು ಇದಕ್ಕೆ ವಿರೋಧವನ್ನು ಬಿಬಿಎಂಪಿಗೆ ಕಳುಹಿಸಿದ್ದೇವೆ. ಬೆಳಿಗ್ಗಿನಿಂದ ತೆರವು ಮಾಡುತ್ತಿದ್ದಾರೆ. ಯಾವುದೇ ಆದೇಶವಿಲ್ಲ. ಮೌಖಿಕವಾಗಿ ಮಾತ್ರವಾಗಿ ಹೇಳಲಾಗಿದೆ. ತುಂಬಾ ಜನ ಇಲ್ಲಿ ಒತ್ತುವರಿ ಮಾಡಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ಯಾಕೆ ಈ ಆದೇಶ ಮಾಡಿದ್ದಾರೆ ಎನ್ನವುದು ಸ್ಪಷ್ಟವಾಗಿ ಹೇಳುತ್ತಿಲ್ಲ. ಅಲ್ಲಿ ವ್ಯಾಪಾರ ಮಾಡುತಿದ್ದ ಎಲ್ಲಾ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರಿಸಲು ಅವಕಾಶ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆ ಆಗದ ರೀತಿ ಸೂಕ್ತ ಆದೇಶ ನೀಡಬೇಕು. ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ
ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಕಾರ್ಯಾಗಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸುಬ್ರಮಣ್ಯ, ನಾವು 35-40ವರ್ಷಗಳಿಂದ ಇದೇ ಬೀದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಡೀರ್‌ ನಮಗೆ ತೆರವಿಗೆ ಆದೇಶ ಬಂದಿದೆ. ಇಂದು ಬೆಳಿಗ್ಗಿನಿಂದಲೇ ತೆರವಿಗೆ ಬಂದಿದ್ದಾರೆ. 150ಕ್ಕೂ ಅಧಿಕ ವ್ಯಾಪಾರಿಗಳ ಜೀವನೋಪಾಯದ ಮೇಲೆ ಇದು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ನಾವು ಈ ಬಗ್ಗೆ ಸ್ಥಳೀಯ ಶಾಸಕರ ಬಳಿ ತೆರಳಿ ಸಮಸ್ಯೆ ಹೇಳಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸೋಮನಾಥನ್, ನಾವು 40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಹೂ, ಹಣ್ಣುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದೆವು. ಎಲ್ಲವನ್ನೂ ತೆಗೆದು ಎಸೆಯುತ್ತಿದ್ದಾರೆ. ನಾವು ಮತ ಹಾಕುವುದಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೋರ್ಟ್‌ ಆದೇಶ ಎಂದು ಹೇಳುತ್ತಿದ್ದಾರೆ. ನಮ್ಮ ಸಮಸ್ಯೆ ಕೇಳುವವರು ಯಾರು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...