Homeಕರ್ನಾಟಕಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

ಬೆಂಗಳೂರು: ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು; ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳ ಸಂಘ

- Advertisement -
- Advertisement -

ಬೀದಿ ವ್ಯಾಪಾರಿಗಳಿಗೆ ಜಯನಗರ 4ನೇ ಬ್ಲಾಕ್‌ನಲ್ಲಿ ವ್ಯಾಪಾರ ಮಾಡದಂತೆ ಬಿ.ಬಿ.ಎಂ.ಪಿ ಮಾರ್ಷಲ್ ಗಳು ಹಾಗೂ ಅಧಿಕಾರಿಗಳು ಸೂಚಿಸಿ ಇಂದು ತೆರವು ಕಾರ್ಯಾಚರಣೆ ನಡೆಸಿದ್ದು, ಇದಕ್ಕೆ ಬೀದಿ ಬದಿ ವ್ಯಾಪಾರಿಗಳ ಸಂಘ ವಿರೋಧಿಸಿದೆ.

ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿ ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಅಲ್ಲಿ ಸುಮಾರು 400-500 ಬೀದಿ ವ್ಯಾಪಾರಿಗಳಿದ್ದಾರೆ. ಅವರಿಗೆ 2018ರಲ್ಲಿ ಬಿಬಿಎಂಪಿ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರವನ್ನು ನೀಡಿದೆ. ಆದರೆ ನ.4ರಂದು  ಬಿಬಿಎಂಪಿ ಮಾರ್ಷಲ್‌ಗಳು ಹಾಗೂ ಅಧಿಕಾರಿಗಳು ಬಂದು ನ.7ರ ಮಂಗಳವಾರದಿಂದ ಜಯನಗರ 4ನೆ ಬ್ಲಾಕ್‌ ಕಾಂಪ್ಲೆಕ್ಸ್‌ ಸುತ್ತಲಿನ ಬೀದಿಯಲ್ಲಿ ವ್ಯಾಪಾರ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಪ್ರಕಟಣೆ ಹೊರಡಿಸಿದ್ದು, ನಮಗೆ ಬಹಳ ಆತಂಕವಾಗಿದೆ. ನಾವು ಯಾವುದೇ ಅಪರಾಧ ಮಾಡಿಲ್ಲ. ನಾವು ಬೀದಿ ವ್ಯಾಪಾರಿಗಳ ಕಾನೂನಿನ ಪ್ರಕಾರ ವ್ಯಾಪಾರ ಮಾಡುತ್ತಿದ್ದೇವೆ  ನಮ್ಮಿಂದ ತಪ್ಪಿದ್ದರೆ ದಯವಿಟ್ಟು ಸಭೆ ಕೆರೆದು ತಿಳಿಸಿ, ನಾವು ತಿದ್ದಿಕೊಳ್ಳುತ್ತೇವೆ. ಆದರೆ ಈ ರೀತಿ ದಿಡೀರ್‌ ಎತ್ತಂಗಡಿ ಮಾಡಿದರೆ ಹೇಗೆ? ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಕಲಾಂ 3(3)ರ ಪ್ರಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲಾ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರಿಗೂ ಎತ್ತಂಗಡಿ ಮಾಡುವಂತಿಲ್ಲ. ಹಾಗೆಯೇ ಕಲಾಂ 18ರ ಪ್ರಕಾರ ಲಿಖಿತ ನೋಟಿಸ್ ನೀಡದೆ ಯಾರನ್ನು ಎತ್ತಂಗಡಿ ಮಾಡುವಂತಿಲ್ಲ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ವಿನಯ್‌, ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಎತ್ತಂಗಡಿಗೆ ಬಿಬಿಎಂಪಿ ಸೂಚಿಸಿದೆ. ನಾವು ಇದಕ್ಕೆ ವಿರೋಧವನ್ನು ಬಿಬಿಎಂಪಿಗೆ ಕಳುಹಿಸಿದ್ದೇವೆ. ಬೆಳಿಗ್ಗಿನಿಂದ ತೆರವು ಮಾಡುತ್ತಿದ್ದಾರೆ. ಯಾವುದೇ ಆದೇಶವಿಲ್ಲ. ಮೌಖಿಕವಾಗಿ ಮಾತ್ರವಾಗಿ ಹೇಳಲಾಗಿದೆ. ತುಂಬಾ ಜನ ಇಲ್ಲಿ ಒತ್ತುವರಿ ಮಾಡಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ಯಾಕೆ ಈ ಆದೇಶ ಮಾಡಿದ್ದಾರೆ ಎನ್ನವುದು ಸ್ಪಷ್ಟವಾಗಿ ಹೇಳುತ್ತಿಲ್ಲ. ಅಲ್ಲಿ ವ್ಯಾಪಾರ ಮಾಡುತಿದ್ದ ಎಲ್ಲಾ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರಿಸಲು ಅವಕಾಶ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆ ಆಗದ ರೀತಿ ಸೂಕ್ತ ಆದೇಶ ನೀಡಬೇಕು. ಬೀದಿ ವ್ಯಾಪಾರಿಗಳ (ಜೀವನೋ ಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ
ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಕಾರ್ಯಾಗಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸುಬ್ರಮಣ್ಯ, ನಾವು 35-40ವರ್ಷಗಳಿಂದ ಇದೇ ಬೀದಿಯಲ್ಲಿ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಡೀರ್‌ ನಮಗೆ ತೆರವಿಗೆ ಆದೇಶ ಬಂದಿದೆ. ಇಂದು ಬೆಳಿಗ್ಗಿನಿಂದಲೇ ತೆರವಿಗೆ ಬಂದಿದ್ದಾರೆ. 150ಕ್ಕೂ ಅಧಿಕ ವ್ಯಾಪಾರಿಗಳ ಜೀವನೋಪಾಯದ ಮೇಲೆ ಇದು ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ನಾವು ಈ ಬಗ್ಗೆ ಸ್ಥಳೀಯ ಶಾಸಕರ ಬಳಿ ತೆರಳಿ ಸಮಸ್ಯೆ ಹೇಳಿದ್ದೇವೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಬೀದಿ ಬದಿ ವ್ಯಾಪಾರಿ ಸೋಮನಾಥನ್, ನಾವು 40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಹೂ, ಹಣ್ಣುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದೆವು. ಎಲ್ಲವನ್ನೂ ತೆಗೆದು ಎಸೆಯುತ್ತಿದ್ದಾರೆ. ನಾವು ಮತ ಹಾಕುವುದಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕೋರ್ಟ್‌ ಆದೇಶ ಎಂದು ಹೇಳುತ್ತಿದ್ದಾರೆ. ನಮ್ಮ ಸಮಸ್ಯೆ ಕೇಳುವವರು ಯಾರು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...