Homeಕರ್ನಾಟಕಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಸಿದ ಜಯ ಪ್ರಕಾಶ್ ಹೆಗ್ಡೆ

ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಸಿದ ಜಯ ಪ್ರಕಾಶ್ ಹೆಗ್ಡೆ

- Advertisement -
- Advertisement -

ಕರ್ನಾಟಕದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನ ಗಣತಿ) ವರದಿಯನ್ನು ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಭೇಟಿಯಾದ ಜಯಪ್ರಕಾಶ್ ಹೆಗ್ಡೆ, 2015ರಲ್ಲಿ ನಡೆಸಿದ್ದ ಸಮೀಕ್ಷೆಯ ವರದಿ ಸಲ್ಲಿಕೆ ಮಾಡಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ಯಾವುದೇ ದಾಖಲೆಗಳು ಕಳೆದು ಹೋಗಿಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ. ವರದಿಯ ಅಂಶಗಳನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ಅದು ಸರ್ಕಾರದ ಕೆಲಸ” ಎಂದರು.

ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಹಾಗೂ ಶಿಫಾರಸುಗಳನ್ನು ಒಳಗೊಂಡ 200 ಪುಟಗಳ ಪ್ರಧಾನ ವರದಿ ಮತ್ತು 48 ಸಂಪುಟಗಳಷ್ಟಿರುವ ದತ್ತಾಂಶದ ವಿವರಗಳನ್ನು ಮುಖ್ಯಮಂತ್ರಿಗೆ ಹಸ್ತಾಂತರ ಮಾಡಲಾಗಿದೆ.

ವರದಿ ಸ್ವೀಕರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಹೆಚ್. ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ರಾಜ್ಯ ವಿವಿಧ ಸಮುದಾಯಗಳ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ನಡೆಸಿತ್ತು. ಇದಕ್ಕಾಗಿ ಸರ್ಕಾರ 158.47 ಕೋಟಿ ರೂಪಾಯಿ ವೆಚ್ಚ ಮಾಡಿತ್ತು. ಆದರೆ, ಕಾಂತರಾಜು ಆಯೋಗದ ಅವಧಿ ಮುಕ್ತಾಯಗೊಳ್ಳುವ ಮುನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.

ನಂತರ ಬಿಜೆಪಿ ಸರ್ಕಾರ ಬಂದಿದ್ದರಿಂದ ಸಮೀಕ್ಷೆಯ ವರದಿಯ ಸಲ್ಲಿಸುವ ಕಾರ್ಯ ನಡೆದಿರಲಿಲ್ಲ. ಇದೀಗ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದಿದ್ದು, ಅಂದಿನ ಸಮೀಕ್ಷೆಯ ವರದಿಯನ್ನು ಪಡೆದುಕೊಂಡಿದೆ.

ಜಯಪ್ರಕಾಶ್ ಹೆಗ್ಡೆ ಅವಧಿ ವಿಸ್ತರಣೆ:

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಮತ್ತು ಸದಸ್ಯರ ಅವಧಿ ಕಳೆದ ನವೆಂಬರ್‌ನಲ್ಲಿ ಮುಗಿದಿತ್ತು. ಪರಿಷ್ಕೃತ ಸಮಗ್ರ ವರದಿ ಅಂತಿಮಗೊಳಿಸಲು ಕಾಲಾವಕಾಶ ಅಗತ್ಯವಿದೆ ಎಂಬ ಕಾರಣಕ್ಕೆ ಸರ್ಕಾರ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು.

ವರದಿ ಅಂತಿಮಗೊಳಿಸುವ ಹಾಗೂ ಮುದ್ರಣಕ್ಕೆ ಕಾಲಾವಕಾಶದ ಕಾರಣಕ್ಕೆ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿಯನ್ನು 2ನೇ ಬಾರಿಗೆ ಫೆಬ್ರವರಿ 29ರವರೆಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ತಮ್ಮ ಅಧಿಕಾರಾವಧಿಯ ಕೊನೆಯ ದಿನ ಜಾತಿ ಗಣತಿ ವರದಿಯನ್ನು ಜಯಪ್ರಕಾಶ್‌ ಹೆಗ್ಡೆ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ವಿರೋಧದ ನಡುವೆ ವರದಿ ಸಲ್ಲಿಕೆ:

ಜಾತಿ ಜನಗಣತಿ ಸ್ವೀಕಾರ ಆಕ್ಷೇಪಿಸಿ ಲಿಂಗಾಯತ ಸ್ವಾಮೀಗಳು, ಒಕ್ಕಲಿಗ ಸ್ವಾಮೀಜಿಗಳು, ಮುಖಂಡರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಉಪಮುಖ್ಯಮಂತ್ರಿ ಹಾಗೂ ಒಕ್ಕಲಿಗ ಸಮುದಾಯದ ಮುಖಂಡ ಡಿ.ಕೆ.ಶಿವಕುಮಾರ್ ಅವರ ಸಹಿ ಈ ಪತ್ರದಲ್ಲಿ ಇತ್ತು. ಇದು ಪರ ವಿರೋಧಕ್ಕೆ ಎಡೆಮಾಡಿಕೊಟ್ಟಿತ್ತು. ಹಾಗೆಯೇ ಕಾಂಗ್ರೆಸ್‌ ಲಿಂಗಾಯತ ನಾಯಕರೂ ಕೂಡ ವರದಿಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದರು.

ಇದಾದ ನಂತರ ಹಲವು ವೇದಿಕೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿ ಸ್ವೀಕಾರಕ್ಕೆ ಬದ್ಧ ಎಂದು ಹೇಳಿದ್ದರು. ಈಚೆಗಷ್ಟೇ ಸ್ವತಃ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಕೂಡ, “ವರದಿ ಸ್ವೀಕರಿಸುವ ಬಗ್ಗೆ ಸರಕಾರಕ್ಕೆ ಬದ್ಧತೆ ಇದೆ. ಸ್ವೀಕರಿಸಿಯೇ ತೀರುತ್ತೇವೆ. ಪಲಾಯನದ ಪ್ರಶ್ನೆ ಇಲ್ಲ. ಫೆ. 29ರವರೆಗೆ ಕಾಯಿರಿ” ಎಂದು ಸುಳಿವು ನೀಡಿದ್ದರು.

ಇದನ್ನೂ ಓದಿ : ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...