Homeಮುಖಪುಟಜೆಡಿಎಸ್ ಜೊತೆ ಸಂಬಂಧ ಕೊನೆಗೊಳಿಸಿ ಸ್ವತಂತ್ರವಾಗಿ ಇರುವುದಾಗಿ ಹೇಳಿದ ಕೇರಳ ಜೆಡಿಎಸ್ ಘಟಕ

ಜೆಡಿಎಸ್ ಜೊತೆ ಸಂಬಂಧ ಕೊನೆಗೊಳಿಸಿ ಸ್ವತಂತ್ರವಾಗಿ ಇರುವುದಾಗಿ ಹೇಳಿದ ಕೇರಳ ಜೆಡಿಎಸ್ ಘಟಕ

- Advertisement -
- Advertisement -

ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಜೆಡಿಎಸ್ ವರಿಷ್ಠ ದೇವೇಗೌಡರ ನಿರ್ಧಾರದ ಬೆನ್ನಲ್ಲೇ ಕೇರಳ ರಾಜ್ಯ ಜೆಡಿಎಸ್‌ ಘಟಕವು ಸ್ವತಂತ್ರವಾಗಿ ಇರಲು ನಿರ್ಧರಿಸಿದೆ ಎಂದು ಕೇರಳ ವಿದ್ಯುತ್ ಇಲಾಖೆ ಸಚಿವ ಕೆ ಕೃಷ್ಣನ್‌ಕುಟ್ಟಿ ಭಾನುವಾರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಕೇರಳ ವಿದ್ಯುತ್ ಇಲಾಖೆ ಸಚಿವ ಕೆ ಕೃಷ್ಣನ್‌ಕುಟ್ಟಿ, ನಾನು ಮತ್ತು ರಾಜ್ಯ ಜೆಡಿಎಸ್ ಅಧ್ಯಕ್ಷ ಮ್ಯಾಥ್ಯೂ ಟಿ ಥಾಮಸ್ ಕರ್ನಾಟಕದಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿ ಬಿಜೆಪಿಯೊಂದಿಗೆ ಮೈತ್ರಿ ಸ್ವೀಕಾರಾರ್ಹವಲ್ಲ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಮೈತ್ರಿ ಮಾಡಿದ್ದು ಸರಿಯಲ್ಲ ಎಂದು ನಾವು ಹೇಳಿದ್ದೇವೆ. ನಾವು ಜೆಡಿಎಸ್‌ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುತ್ತಿದ್ದೇವೆ ಮತ್ತು ನಾವು ಸ್ವತಂತ್ರವಾಗಿ ಉಳಿಯುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಾವು ಇಲ್ಲಿ ಸಮಿತಿ ಸಭೆ ನಡೆಸಿದ್ದೇವೆ ಮತ್ತು ಸ್ವತಂತ್ರವಾಗಿ ನಿಲ್ಲಲು ನಿರ್ಧರಿಸಿದ್ದೇವೆ. ಎಲ್ಲರೂ ಅದನ್ನು ಒಪ್ಪಿದ್ದಾರೆ ಮತ್ತು ಅದು ಸರಿಯಾದ ನಿಲುವು ಎಂದು ಕೆ ಕೃಷ್ಣನ್‌ಕುಟ್ಟಿ ಹೇಳಿದ್ದಾರೆ.

ರಾಜ್ಯದಲ್ಲಿ ಆಡಳಿತಾರೂಢ ಸಿಪಿಐ(ಎಂ) ರಾಷ್ಟ್ರಮಟ್ಟದಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿರುವ ಜೆಡಿಎಸ್ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಟೀಕಿಸುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್‌ ಮೈತ್ರಿಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಮ್ಮತಿಸಿದ್ದಾರೆ ಎಂದು ದೇವೇಗೌಡರು ಇತ್ತೀಚೆಗೆ ಹೇಳಿದ್ದರು. ಇದನ್ನು ತಳ್ಳಿಹಾಕಿದ್ದ ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಇದು ಆಧಾರರಹಿತ ಮತ್ತು ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂವಿ ಗೋವಿಂದನ್, ಎಡರಂಗದ ಜೊತೆ ಬಲವಾಗಿ ನಿಲ್ಲುತ್ತೇವೆ ಎಂದು ಜೆಡಿಎಸ್‌ನ ರಾಜ್ಯ ಘಟಕ ಸ್ಪಷ್ಟಪಡಿಸಿರುವುದರಿಂದ ಕೃಷ್ಣನ್‌ಕುಟ್ಟಿ ಅವರನ್ನು ಕೇರಳ ಸಂಪುಟದಿಂದ ವಜಾಗೊಳಿಸುವ ಅಗತ್ಯವಿಲ್ಲ ಎಂದು  ಹೇಳಿದ್ದಾರೆ.

ಇದನ್ನು ಓದಿ: ಜಾತಿ ನಿಂದನೆ ಮಾಡಿದ ಗ್ರಾಮದ ಮುಖ್ಯಸ್ಥ: ಶಾಲಾ ಪ್ರಾಂಶುಪಾಲ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...