Homeಕರ್ನಾಟಕಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲವೂ ಸರಿಯಿಲ್ಲ ಎನ್ನುವುದು ಕಂಡು ಬರುತ್ತಿದೆ. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಬಿಜೆಪಿಗೆ ಸ್ವಪಕ್ಷದೊಳಗಿನ ಬಂಡಾಯದ ಬಿಸಿಯ ಜೊತೆಗೆ ಮೈತ್ರಿ ಪಕ್ಷ ಜೆಡಿಎಸ್‌ನ್ನು ಸಮಾಧಾನಗೊಳಿಸುವ ಸವಾಲು ಎದುರಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್‌ ಹಂಚಿಕೆ ಬಳಿಕ ಬಿಜೆಪಿಯೊಳಗೆ ಭಾರೀ ಬಂಡಾಯ ಭುಗಿಲೆದ್ದಿತ್ತು, ಲೋಕಸಭೆ ಚುನಾವಣೆಗೆ ಟಿಕೆಟ್‌ ಘೋಷಣೆ ಬಳಿಕವೂ ಇದೇ ರೀತಿಯ ಅಸಮಾಧಾನದ ಜ್ವಾಲೆ ಭುಗಿಲೆದ್ದಿದ್ದು, ರಾಜ್ಯ ಬಿಜೆಪಿಗೆ ಬಂಡಾಯ ಶಮನ ದೊಡ್ಡ ಸವಾಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಕೆಲ ಸಂಸದರು ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಪುತ್ರನಿಗೆ ಟಿಕೆಟ್‌ ಸಿಗದ ಹಿನ್ನೆಲೆ  ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ವಿರುದ್ಧ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ತಿಪ್ಪೇಸ್ವಾಮಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಸಿಟಿ ರವಿ, ರೇಣುಕಾಚಾರ್ಯ, ಸದಾನಂದ ಗೌಡ, ಪ್ರತಾಪ್‌ ಸಿಂಹ, ನಳಿನ್‌ ಕುಮಾರ್‌ ಕಟೀಲ್‌ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದು, ಬಿಜೆಪಿಗೆ ಬಂಡಾಯ ಶಮನ ಸವಾಲಾಗಿದೆ.

ಇನ್ನು 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವಾಗ ಸೌಜನ್ಯಕ್ಕಾದರೂ ತಮ್ಮ ಜೊತೆ ಮಾತುಕತೆ ನಡೆಸಿಲ್ಲ ಎಂದು ರಾಜ್ಯದಲ್ಲಿ ಎನ್‌ಡಿಎ ಪಾಲುದಾರ ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಮಾತುಕತೆ ನಡೆದು 6 ತಿಂಗಳು ಕಳೆದರೂ ಈವರೆಗೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಇದಲ್ಲದೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಾಗ ಜೆಡಿಎಸ್‌ ನಾಯಕರ ಜೊತೆಗೆ ಸಮಾಲೋಚನೆಯೇ ನಡೆಸಿಲ್ಲ ಎನ್ನಲಾಗಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈ ಹಿಂದೆ ಸಹಮತ ವ್ಯಕ್ತಪಡಿಸಿದ್ದರು. ಬೆಂಗಳೂರು ಗ್ರಾಮಾಂತರ, ತುಮಕೂರು ಕ್ಷೇತ್ರಕ್ಕೆ ಕುಮಾರಸ್ವಾಮಿ ಪ್ರಸ್ತಾಪ ಮುಂದಿಟ್ಟಿದ್ದರು. ಇದೀಗ ಬೆಂಗಳೂರು ಗ್ರಾಮಾಂತರಕ್ಕೆ ದೇವೇಗೌಡರ ಕುಟುಂಬದ ಡಾ.ಸಿ.ಎನ್‌.ಮಂಜುನಾಥ್ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಲಾಗಿದೆ,  ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯ ಸಂಸದರಿದ್ದು, ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಲವು ಹೊಂದಿಲ್ಲ. ಮಂಡ್ಯ ಕ್ಷೇತ್ರದಲ್ಲೂ ನಿಖಿಲ್‌ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿಗೆ  ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ-ಜೆಡಿಎಸ್‌ ಟಿಕೆಟ್‌ ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿ ಉಳಿದಿದೆ.

ಇನ್ನೊಂದು ಕಡೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಎರಡು ಪಕ್ಷಗಳಲ್ಲಿ ವಿರೋಧ ವ್ಯಕ್ತವಾಗಿತ್ತು.  ಪ್ರೀತಂ ಗೌಡ, ಶರಣುಗೌಡ ಕುಂದಕೂರು, ಕರೆಮ್ಮ ನಾಯಕ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದರು.  ಇನ್ನು ಸಂಘ ಪರಿವಾರದ ನಾಯಕರು, ಕೆಳ ಹಂತದ ಮುಖಂಡರು, ಕಾರ್ಯಕರ್ತರಿಗೆ ಈ ಮೈತ್ರಿ ಬಗ್ಗೆ ಒಮ್ಮತ ಇಲ್ಲ ಎನ್ನಲಾಗಿದೆ. ಮೇಲ್ಮಟ್ಟದಲ್ಲಿ ಏನೇ ಮೈತ್ರಿಯಾದರೂ ಕೆಳ ಹಂತದಲ್ಲಿ ಅದು ಕಾರ್ಯರೂಪಕ್ಕೆ ಬರುವ ಸಾಧ್ಯತೆಗಳು ತೀರಾ ಕಡಿಮೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಮೈತ್ರಿ ನಿರ್ಧಾರವಾಗಿದೆಯಾದರೂ ನಿರೀಕ್ಷಿತ ಚುನಾವಣಾ ಫಲಿತಾಂಶ ಕಷ್ಟ ಎಂದು ಹೇಳಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....