Homeಕರ್ನಾಟಕಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲವೂ ಸರಿಯಿಲ್ಲ ಎನ್ನುವುದು ಕಂಡು ಬರುತ್ತಿದೆ. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಬಿಜೆಪಿಗೆ ಸ್ವಪಕ್ಷದೊಳಗಿನ ಬಂಡಾಯದ ಬಿಸಿಯ ಜೊತೆಗೆ ಮೈತ್ರಿ ಪಕ್ಷ ಜೆಡಿಎಸ್‌ನ್ನು ಸಮಾಧಾನಗೊಳಿಸುವ ಸವಾಲು ಎದುರಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್‌ ಹಂಚಿಕೆ ಬಳಿಕ ಬಿಜೆಪಿಯೊಳಗೆ ಭಾರೀ ಬಂಡಾಯ ಭುಗಿಲೆದ್ದಿತ್ತು, ಲೋಕಸಭೆ ಚುನಾವಣೆಗೆ ಟಿಕೆಟ್‌ ಘೋಷಣೆ ಬಳಿಕವೂ ಇದೇ ರೀತಿಯ ಅಸಮಾಧಾನದ ಜ್ವಾಲೆ ಭುಗಿಲೆದ್ದಿದ್ದು, ರಾಜ್ಯ ಬಿಜೆಪಿಗೆ ಬಂಡಾಯ ಶಮನ ದೊಡ್ಡ ಸವಾಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಕೆಲ ಸಂಸದರು ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಪುತ್ರನಿಗೆ ಟಿಕೆಟ್‌ ಸಿಗದ ಹಿನ್ನೆಲೆ  ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ವಿರುದ್ಧ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ತಿಪ್ಪೇಸ್ವಾಮಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಸಿಟಿ ರವಿ, ರೇಣುಕಾಚಾರ್ಯ, ಸದಾನಂದ ಗೌಡ, ಪ್ರತಾಪ್‌ ಸಿಂಹ, ನಳಿನ್‌ ಕುಮಾರ್‌ ಕಟೀಲ್‌ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದು, ಬಿಜೆಪಿಗೆ ಬಂಡಾಯ ಶಮನ ಸವಾಲಾಗಿದೆ.

ಇನ್ನು 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವಾಗ ಸೌಜನ್ಯಕ್ಕಾದರೂ ತಮ್ಮ ಜೊತೆ ಮಾತುಕತೆ ನಡೆಸಿಲ್ಲ ಎಂದು ರಾಜ್ಯದಲ್ಲಿ ಎನ್‌ಡಿಎ ಪಾಲುದಾರ ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಮಾತುಕತೆ ನಡೆದು 6 ತಿಂಗಳು ಕಳೆದರೂ ಈವರೆಗೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಇದಲ್ಲದೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಾಗ ಜೆಡಿಎಸ್‌ ನಾಯಕರ ಜೊತೆಗೆ ಸಮಾಲೋಚನೆಯೇ ನಡೆಸಿಲ್ಲ ಎನ್ನಲಾಗಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈ ಹಿಂದೆ ಸಹಮತ ವ್ಯಕ್ತಪಡಿಸಿದ್ದರು. ಬೆಂಗಳೂರು ಗ್ರಾಮಾಂತರ, ತುಮಕೂರು ಕ್ಷೇತ್ರಕ್ಕೆ ಕುಮಾರಸ್ವಾಮಿ ಪ್ರಸ್ತಾಪ ಮುಂದಿಟ್ಟಿದ್ದರು. ಇದೀಗ ಬೆಂಗಳೂರು ಗ್ರಾಮಾಂತರಕ್ಕೆ ದೇವೇಗೌಡರ ಕುಟುಂಬದ ಡಾ.ಸಿ.ಎನ್‌.ಮಂಜುನಾಥ್ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಲಾಗಿದೆ,  ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯ ಸಂಸದರಿದ್ದು, ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಲವು ಹೊಂದಿಲ್ಲ. ಮಂಡ್ಯ ಕ್ಷೇತ್ರದಲ್ಲೂ ನಿಖಿಲ್‌ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿಗೆ  ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ-ಜೆಡಿಎಸ್‌ ಟಿಕೆಟ್‌ ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿ ಉಳಿದಿದೆ.

ಇನ್ನೊಂದು ಕಡೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಎರಡು ಪಕ್ಷಗಳಲ್ಲಿ ವಿರೋಧ ವ್ಯಕ್ತವಾಗಿತ್ತು.  ಪ್ರೀತಂ ಗೌಡ, ಶರಣುಗೌಡ ಕುಂದಕೂರು, ಕರೆಮ್ಮ ನಾಯಕ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದರು.  ಇನ್ನು ಸಂಘ ಪರಿವಾರದ ನಾಯಕರು, ಕೆಳ ಹಂತದ ಮುಖಂಡರು, ಕಾರ್ಯಕರ್ತರಿಗೆ ಈ ಮೈತ್ರಿ ಬಗ್ಗೆ ಒಮ್ಮತ ಇಲ್ಲ ಎನ್ನಲಾಗಿದೆ. ಮೇಲ್ಮಟ್ಟದಲ್ಲಿ ಏನೇ ಮೈತ್ರಿಯಾದರೂ ಕೆಳ ಹಂತದಲ್ಲಿ ಅದು ಕಾರ್ಯರೂಪಕ್ಕೆ ಬರುವ ಸಾಧ್ಯತೆಗಳು ತೀರಾ ಕಡಿಮೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಮೈತ್ರಿ ನಿರ್ಧಾರವಾಗಿದೆಯಾದರೂ ನಿರೀಕ್ಷಿತ ಚುನಾವಣಾ ಫಲಿತಾಂಶ ಕಷ್ಟ ಎಂದು ಹೇಳಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...