Homeಕರ್ನಾಟಕಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲವೂ ಸರಿಯಿಲ್ಲ ಎನ್ನುವುದು ಕಂಡು ಬರುತ್ತಿದೆ. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಬಿಜೆಪಿಗೆ ಸ್ವಪಕ್ಷದೊಳಗಿನ ಬಂಡಾಯದ ಬಿಸಿಯ ಜೊತೆಗೆ ಮೈತ್ರಿ ಪಕ್ಷ ಜೆಡಿಎಸ್‌ನ್ನು ಸಮಾಧಾನಗೊಳಿಸುವ ಸವಾಲು ಎದುರಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್‌ ಹಂಚಿಕೆ ಬಳಿಕ ಬಿಜೆಪಿಯೊಳಗೆ ಭಾರೀ ಬಂಡಾಯ ಭುಗಿಲೆದ್ದಿತ್ತು, ಲೋಕಸಭೆ ಚುನಾವಣೆಗೆ ಟಿಕೆಟ್‌ ಘೋಷಣೆ ಬಳಿಕವೂ ಇದೇ ರೀತಿಯ ಅಸಮಾಧಾನದ ಜ್ವಾಲೆ ಭುಗಿಲೆದ್ದಿದ್ದು, ರಾಜ್ಯ ಬಿಜೆಪಿಗೆ ಬಂಡಾಯ ಶಮನ ದೊಡ್ಡ ಸವಾಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಕೆಲ ಸಂಸದರು ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಪುತ್ರನಿಗೆ ಟಿಕೆಟ್‌ ಸಿಗದ ಹಿನ್ನೆಲೆ  ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ವಿರುದ್ಧ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ತಿಪ್ಪೇಸ್ವಾಮಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಸಿಟಿ ರವಿ, ರೇಣುಕಾಚಾರ್ಯ, ಸದಾನಂದ ಗೌಡ, ಪ್ರತಾಪ್‌ ಸಿಂಹ, ನಳಿನ್‌ ಕುಮಾರ್‌ ಕಟೀಲ್‌ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದು, ಬಿಜೆಪಿಗೆ ಬಂಡಾಯ ಶಮನ ಸವಾಲಾಗಿದೆ.

ಇನ್ನು 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವಾಗ ಸೌಜನ್ಯಕ್ಕಾದರೂ ತಮ್ಮ ಜೊತೆ ಮಾತುಕತೆ ನಡೆಸಿಲ್ಲ ಎಂದು ರಾಜ್ಯದಲ್ಲಿ ಎನ್‌ಡಿಎ ಪಾಲುದಾರ ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಮಾತುಕತೆ ನಡೆದು 6 ತಿಂಗಳು ಕಳೆದರೂ ಈವರೆಗೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಇದಲ್ಲದೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಾಗ ಜೆಡಿಎಸ್‌ ನಾಯಕರ ಜೊತೆಗೆ ಸಮಾಲೋಚನೆಯೇ ನಡೆಸಿಲ್ಲ ಎನ್ನಲಾಗಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈ ಹಿಂದೆ ಸಹಮತ ವ್ಯಕ್ತಪಡಿಸಿದ್ದರು. ಬೆಂಗಳೂರು ಗ್ರಾಮಾಂತರ, ತುಮಕೂರು ಕ್ಷೇತ್ರಕ್ಕೆ ಕುಮಾರಸ್ವಾಮಿ ಪ್ರಸ್ತಾಪ ಮುಂದಿಟ್ಟಿದ್ದರು. ಇದೀಗ ಬೆಂಗಳೂರು ಗ್ರಾಮಾಂತರಕ್ಕೆ ದೇವೇಗೌಡರ ಕುಟುಂಬದ ಡಾ.ಸಿ.ಎನ್‌.ಮಂಜುನಾಥ್ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಲಾಗಿದೆ,  ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯ ಸಂಸದರಿದ್ದು, ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಲವು ಹೊಂದಿಲ್ಲ. ಮಂಡ್ಯ ಕ್ಷೇತ್ರದಲ್ಲೂ ನಿಖಿಲ್‌ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿಗೆ  ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ-ಜೆಡಿಎಸ್‌ ಟಿಕೆಟ್‌ ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿ ಉಳಿದಿದೆ.

ಇನ್ನೊಂದು ಕಡೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಎರಡು ಪಕ್ಷಗಳಲ್ಲಿ ವಿರೋಧ ವ್ಯಕ್ತವಾಗಿತ್ತು.  ಪ್ರೀತಂ ಗೌಡ, ಶರಣುಗೌಡ ಕುಂದಕೂರು, ಕರೆಮ್ಮ ನಾಯಕ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದರು.  ಇನ್ನು ಸಂಘ ಪರಿವಾರದ ನಾಯಕರು, ಕೆಳ ಹಂತದ ಮುಖಂಡರು, ಕಾರ್ಯಕರ್ತರಿಗೆ ಈ ಮೈತ್ರಿ ಬಗ್ಗೆ ಒಮ್ಮತ ಇಲ್ಲ ಎನ್ನಲಾಗಿದೆ. ಮೇಲ್ಮಟ್ಟದಲ್ಲಿ ಏನೇ ಮೈತ್ರಿಯಾದರೂ ಕೆಳ ಹಂತದಲ್ಲಿ ಅದು ಕಾರ್ಯರೂಪಕ್ಕೆ ಬರುವ ಸಾಧ್ಯತೆಗಳು ತೀರಾ ಕಡಿಮೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಮೈತ್ರಿ ನಿರ್ಧಾರವಾಗಿದೆಯಾದರೂ ನಿರೀಕ್ಷಿತ ಚುನಾವಣಾ ಫಲಿತಾಂಶ ಕಷ್ಟ ಎಂದು ಹೇಳಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...