Homeಮುಖಪುಟಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯವಿದೆ, ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮುಯ್ಯ, ಅವರ ಮತಗಳೇ ನಮಗೆ ಬರುತ್ತವೆ ಎಂದು ಹೇಳಿದರು.

ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ನವರಿಗೆ ಅಗತ್ಯ ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ, ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ

‘ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮತದಾನ ಪೂರ್ಣಗೊಂಡ ನಂತರ ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆ ಮಾಡಿದ್ದೇವೆ.
ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು; ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ, ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ; ಆದರೂ ನಿಲ್ಲಿಸಿದ್ದಾರೆ. ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ’ ಎಂದರು.

ಆಮಿಷ ಒಡ್ಡುವ ಪ್ರಮೇಯ ಇಲ್ಲ

ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು. ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದರು.

ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ; ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ’ ಎಂದರು.

ಇದನ್ನೂ ಓದಿ; ದಾರಿ ತಪ್ಪಿಸುವ ಜಾಹೀರಾತು; ಪತಂಜಲಿ ಕಂಪನಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...