Homeಮುಖಪುಟಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯವಿದೆ, ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮುಯ್ಯ, ಅವರ ಮತಗಳೇ ನಮಗೆ ಬರುತ್ತವೆ ಎಂದು ಹೇಳಿದರು.

ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ನವರಿಗೆ ಅಗತ್ಯ ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ, ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ

‘ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮತದಾನ ಪೂರ್ಣಗೊಂಡ ನಂತರ ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆ ಮಾಡಿದ್ದೇವೆ.
ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು; ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ, ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ; ಆದರೂ ನಿಲ್ಲಿಸಿದ್ದಾರೆ. ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ’ ಎಂದರು.

ಆಮಿಷ ಒಡ್ಡುವ ಪ್ರಮೇಯ ಇಲ್ಲ

ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು. ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದರು.

ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ; ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ’ ಎಂದರು.

ಇದನ್ನೂ ಓದಿ; ದಾರಿ ತಪ್ಪಿಸುವ ಜಾಹೀರಾತು; ಪತಂಜಲಿ ಕಂಪನಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...