Homeಮುಖಪುಟಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯವಿದೆ, ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮುಯ್ಯ, ಅವರ ಮತಗಳೇ ನಮಗೆ ಬರುತ್ತವೆ ಎಂದು ಹೇಳಿದರು.

ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ನವರಿಗೆ ಅಗತ್ಯ ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ, ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ

‘ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮತದಾನ ಪೂರ್ಣಗೊಂಡ ನಂತರ ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆ ಮಾಡಿದ್ದೇವೆ.
ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು; ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ, ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ; ಆದರೂ ನಿಲ್ಲಿಸಿದ್ದಾರೆ. ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ’ ಎಂದರು.

ಆಮಿಷ ಒಡ್ಡುವ ಪ್ರಮೇಯ ಇಲ್ಲ

ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು. ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದರು.

ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ; ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ’ ಎಂದರು.

ಇದನ್ನೂ ಓದಿ; ದಾರಿ ತಪ್ಪಿಸುವ ಜಾಹೀರಾತು; ಪತಂಜಲಿ ಕಂಪನಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...