Homeಕರ್ನಾಟಕಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

ಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

“ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ

- Advertisement -
- Advertisement -

ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.

ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರು ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆಯೇ ನಾಮಪತ್ರವನ್ನು ಹಿಂಪಡೆದುಕೊಂಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಯು.ಟಿ.ಖಾದರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.

ರಾಜಕೀಯ ಗೊಂದಲ ಬೇಡ ಎಂದು ತೀರ್ಮಾನಿಸಿ ಎ.21 ರಂದು ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರ ಬಳಿಕ ಅವರು ಕೇರಳ ಕಡೆ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ಜೆಡಿಎಸ್‌ನ ಹಿರಿಯ ಮುಖಂಡರೊಬ್ಬರು ತಿಳಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

ಅಲ್ತಾಫ್ ಕುಂಪಲ ಅವರು ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡು ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್‌ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ- ಫಾರಂ ಪಡೆದುಕೊಂಡಿದ್ದರು.

ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು  ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.

ಈ ಕುರಿತು ಎ.22 ರಂದು ನೋಟೀಸ್‌ ಬೋರ್ಡ್‌‌ನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ಮಾಹಿತಿ ನೀಡಿದ್ದರು. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ನಾಪತ್ತೆಯಾಗಿದ್ದ ಅವರು ಅಲ್ತಾಫ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಂಗಳೂರು (ಉಳ್ಳಾಲ) ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

“ನಾನು ಎಲ್ಲೂ ಓಡಿಹೋಗಿಲ್ಲ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ನಗರ ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಿದ್ದೇನೆ” ಎಂದು ಮಾಹಿತಿ ನೀಡಿದ್ದಾರೆ.

ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ, “ಅಲ್ತಾಫ್ ಕುಂಪಲ ಅವರು ಈದ್ ಉಲ್ ಫಿತ್ರ್ ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಿದೆ. ಇದು ಎಲ್ಲರೂ ಚಿಂತಿಸಬೇಕಾದ ವಿಷಯವಾಗಿದೆ. ಜೆಡಿಎಸ್‌ನ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಜನರನ್ನು ಹೇಗೆ ನಡೆಯಿಸಿಕೊಳ್ಳಬಹುದು” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

“ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ಜೆಡಿಎಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸಿಗೆ ಹತ್ತಿರವಾಗಿದ್ದೇವೆ. ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮಗಳನ್ನು ಆಡಳಿತಕ್ಕೆ ಬರುವ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ” ಎಂದು ತಿಳಿಸಿದ್ದಾರೆ. ಮಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಯು.ಟಿ.ಖಾದರ್‌ ಸ್ಪರ್ಧಿಸಿದ್ದಾರೆ.

ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಕಳೆದುಕೊಂಡ ಜೆಡಿಎಸ್

ಅಲ್ತಾಫ್ ಕುಂಪಲ ಅವರು ನಾಮಪತ್ರ ವಾಪಸ್‌ ಪಡೆದಿರುವುದು ಮತ್ತು ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿರುವುದು ರಾಜಕೀಯ ಚರ್ಚೆಗೆ ಕಾರಣಗಿದೆ. ಈ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್‌ನ ಅಭ್ಯರ್ಥಿಗಳು ಇಲ್ಲವಾಗಿ ಇಲ್ಲಿ ಸ್ಪರ್ಧೆಯನ್ನೇ ಜೆಡಿಎಸ್‌ ಕಳೆದುಕೊಂಡಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ಜಫರ್ ಅಲಿ ಮತ್ತು ಆರ್.ಮಂಜುನಾಥರವರ ನಾಮಪತ್ರ ತಿರಸ್ಕೃತಗೊಂಡಿವೆ. ಅಬ್ದುಲ್ ಜಫರ್ ಅಲಿ ಅವರು ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಮತ್ತು ಆರ್.ಮಂಜುನಾಥ್‌ರವರು ತಡವಾಗಿ ನಾಮಪತ್ರ ಸಲ್ಲಿಸಿದ್ದು ಅವರಿಬ್ಬರ ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವಾಗಿದೆ.

ವಿದೇಶದಲ್ಲಿದ್ದ ಕಾರಣ ಅಬ್ದುಲ್ ಜಫರ್ ಅಲಿಯವರ ಹೆಸರು ಮತದಾರರ ಪಟ್ಟಿಯಲ್ಲಿರಲಿಲ್ಲ. ಆನಂತರ ಅವರು ಏಪ್ರಿಲ್ 20 ರಂದು ಮತದಾರರ ಗುರತಿನ ಚೀಟಿಗೆ ಅರ್ಜಿ ಹಾಕಿದ್ದರು. ಆದರೆ ಏಪ್ರಿಲ್ 11 ಕೊನೆಯ ದಿನವಾದ ಕಾರಣ ಅವರ ಹೆಸರು ಸೇರ್ಪಡೆಗೊಂಡಿರಲಿಲ್ಲ.

ಇನ್ನು ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಂಭವವನ್ನು ಅರಿತು ಜೆಡಿಎಸ್‌ನಿಂದ ಆರ್.ಮಂಜುನಾಥ್‌ರವರಿಗೂ ಬಿ ಫಾರಂ ಕೊಟ್ಟು ತರಾತುರಿಯಲ್ಲಿ ನಾಮಪತ್ರ ಸಲ್ಲಿಸಲಾಗಿತ್ತು. ಆದರೆ ಮಧ್ಯಾಹ್ನ 3 ಗಂಟೆ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಕೆಯಾದ ಕಾರಣ ಅದನ್ನೂ ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...