Homeಕರ್ನಾಟಕಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

ಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

“ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ

- Advertisement -
- Advertisement -

ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.

ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರು ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆಯೇ ನಾಮಪತ್ರವನ್ನು ಹಿಂಪಡೆದುಕೊಂಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಯು.ಟಿ.ಖಾದರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.

ರಾಜಕೀಯ ಗೊಂದಲ ಬೇಡ ಎಂದು ತೀರ್ಮಾನಿಸಿ ಎ.21 ರಂದು ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರ ಬಳಿಕ ಅವರು ಕೇರಳ ಕಡೆ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ಜೆಡಿಎಸ್‌ನ ಹಿರಿಯ ಮುಖಂಡರೊಬ್ಬರು ತಿಳಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

ಅಲ್ತಾಫ್ ಕುಂಪಲ ಅವರು ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡು ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್‌ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ- ಫಾರಂ ಪಡೆದುಕೊಂಡಿದ್ದರು.

ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು  ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.

ಈ ಕುರಿತು ಎ.22 ರಂದು ನೋಟೀಸ್‌ ಬೋರ್ಡ್‌‌ನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ಮಾಹಿತಿ ನೀಡಿದ್ದರು. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ನಾಪತ್ತೆಯಾಗಿದ್ದ ಅವರು ಅಲ್ತಾಫ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಂಗಳೂರು (ಉಳ್ಳಾಲ) ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

“ನಾನು ಎಲ್ಲೂ ಓಡಿಹೋಗಿಲ್ಲ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ನಗರ ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಿದ್ದೇನೆ” ಎಂದು ಮಾಹಿತಿ ನೀಡಿದ್ದಾರೆ.

ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ, “ಅಲ್ತಾಫ್ ಕುಂಪಲ ಅವರು ಈದ್ ಉಲ್ ಫಿತ್ರ್ ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಿದೆ. ಇದು ಎಲ್ಲರೂ ಚಿಂತಿಸಬೇಕಾದ ವಿಷಯವಾಗಿದೆ. ಜೆಡಿಎಸ್‌ನ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಜನರನ್ನು ಹೇಗೆ ನಡೆಯಿಸಿಕೊಳ್ಳಬಹುದು” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

“ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ಜೆಡಿಎಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸಿಗೆ ಹತ್ತಿರವಾಗಿದ್ದೇವೆ. ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮಗಳನ್ನು ಆಡಳಿತಕ್ಕೆ ಬರುವ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ” ಎಂದು ತಿಳಿಸಿದ್ದಾರೆ. ಮಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಯು.ಟಿ.ಖಾದರ್‌ ಸ್ಪರ್ಧಿಸಿದ್ದಾರೆ.

ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಕಳೆದುಕೊಂಡ ಜೆಡಿಎಸ್

ಅಲ್ತಾಫ್ ಕುಂಪಲ ಅವರು ನಾಮಪತ್ರ ವಾಪಸ್‌ ಪಡೆದಿರುವುದು ಮತ್ತು ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿರುವುದು ರಾಜಕೀಯ ಚರ್ಚೆಗೆ ಕಾರಣಗಿದೆ. ಈ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್‌ನ ಅಭ್ಯರ್ಥಿಗಳು ಇಲ್ಲವಾಗಿ ಇಲ್ಲಿ ಸ್ಪರ್ಧೆಯನ್ನೇ ಜೆಡಿಎಸ್‌ ಕಳೆದುಕೊಂಡಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ಜಫರ್ ಅಲಿ ಮತ್ತು ಆರ್.ಮಂಜುನಾಥರವರ ನಾಮಪತ್ರ ತಿರಸ್ಕೃತಗೊಂಡಿವೆ. ಅಬ್ದುಲ್ ಜಫರ್ ಅಲಿ ಅವರು ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಮತ್ತು ಆರ್.ಮಂಜುನಾಥ್‌ರವರು ತಡವಾಗಿ ನಾಮಪತ್ರ ಸಲ್ಲಿಸಿದ್ದು ಅವರಿಬ್ಬರ ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವಾಗಿದೆ.

ವಿದೇಶದಲ್ಲಿದ್ದ ಕಾರಣ ಅಬ್ದುಲ್ ಜಫರ್ ಅಲಿಯವರ ಹೆಸರು ಮತದಾರರ ಪಟ್ಟಿಯಲ್ಲಿರಲಿಲ್ಲ. ಆನಂತರ ಅವರು ಏಪ್ರಿಲ್ 20 ರಂದು ಮತದಾರರ ಗುರತಿನ ಚೀಟಿಗೆ ಅರ್ಜಿ ಹಾಕಿದ್ದರು. ಆದರೆ ಏಪ್ರಿಲ್ 11 ಕೊನೆಯ ದಿನವಾದ ಕಾರಣ ಅವರ ಹೆಸರು ಸೇರ್ಪಡೆಗೊಂಡಿರಲಿಲ್ಲ.

ಇನ್ನು ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಂಭವವನ್ನು ಅರಿತು ಜೆಡಿಎಸ್‌ನಿಂದ ಆರ್.ಮಂಜುನಾಥ್‌ರವರಿಗೂ ಬಿ ಫಾರಂ ಕೊಟ್ಟು ತರಾತುರಿಯಲ್ಲಿ ನಾಮಪತ್ರ ಸಲ್ಲಿಸಲಾಗಿತ್ತು. ಆದರೆ ಮಧ್ಯಾಹ್ನ 3 ಗಂಟೆ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಕೆಯಾದ ಕಾರಣ ಅದನ್ನೂ ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...