Homeಕರ್ನಾಟಕಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

ಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

“ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ

- Advertisement -
- Advertisement -

ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.

ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರು ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆಯೇ ನಾಮಪತ್ರವನ್ನು ಹಿಂಪಡೆದುಕೊಂಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಯು.ಟಿ.ಖಾದರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.

ರಾಜಕೀಯ ಗೊಂದಲ ಬೇಡ ಎಂದು ತೀರ್ಮಾನಿಸಿ ಎ.21 ರಂದು ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರ ಬಳಿಕ ಅವರು ಕೇರಳ ಕಡೆ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ಜೆಡಿಎಸ್‌ನ ಹಿರಿಯ ಮುಖಂಡರೊಬ್ಬರು ತಿಳಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

ಅಲ್ತಾಫ್ ಕುಂಪಲ ಅವರು ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡು ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್‌ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ- ಫಾರಂ ಪಡೆದುಕೊಂಡಿದ್ದರು.

ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು  ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.

ಈ ಕುರಿತು ಎ.22 ರಂದು ನೋಟೀಸ್‌ ಬೋರ್ಡ್‌‌ನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ಮಾಹಿತಿ ನೀಡಿದ್ದರು. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ನಾಪತ್ತೆಯಾಗಿದ್ದ ಅವರು ಅಲ್ತಾಫ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಂಗಳೂರು (ಉಳ್ಳಾಲ) ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

“ನಾನು ಎಲ್ಲೂ ಓಡಿಹೋಗಿಲ್ಲ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ನಗರ ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಿದ್ದೇನೆ” ಎಂದು ಮಾಹಿತಿ ನೀಡಿದ್ದಾರೆ.

ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ, “ಅಲ್ತಾಫ್ ಕುಂಪಲ ಅವರು ಈದ್ ಉಲ್ ಫಿತ್ರ್ ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಿದೆ. ಇದು ಎಲ್ಲರೂ ಚಿಂತಿಸಬೇಕಾದ ವಿಷಯವಾಗಿದೆ. ಜೆಡಿಎಸ್‌ನ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಜನರನ್ನು ಹೇಗೆ ನಡೆಯಿಸಿಕೊಳ್ಳಬಹುದು” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

“ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ಜೆಡಿಎಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸಿಗೆ ಹತ್ತಿರವಾಗಿದ್ದೇವೆ. ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮಗಳನ್ನು ಆಡಳಿತಕ್ಕೆ ಬರುವ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ” ಎಂದು ತಿಳಿಸಿದ್ದಾರೆ. ಮಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಯು.ಟಿ.ಖಾದರ್‌ ಸ್ಪರ್ಧಿಸಿದ್ದಾರೆ.

ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಕಳೆದುಕೊಂಡ ಜೆಡಿಎಸ್

ಅಲ್ತಾಫ್ ಕುಂಪಲ ಅವರು ನಾಮಪತ್ರ ವಾಪಸ್‌ ಪಡೆದಿರುವುದು ಮತ್ತು ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿರುವುದು ರಾಜಕೀಯ ಚರ್ಚೆಗೆ ಕಾರಣಗಿದೆ. ಈ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್‌ನ ಅಭ್ಯರ್ಥಿಗಳು ಇಲ್ಲವಾಗಿ ಇಲ್ಲಿ ಸ್ಪರ್ಧೆಯನ್ನೇ ಜೆಡಿಎಸ್‌ ಕಳೆದುಕೊಂಡಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ಜಫರ್ ಅಲಿ ಮತ್ತು ಆರ್.ಮಂಜುನಾಥರವರ ನಾಮಪತ್ರ ತಿರಸ್ಕೃತಗೊಂಡಿವೆ. ಅಬ್ದುಲ್ ಜಫರ್ ಅಲಿ ಅವರು ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಮತ್ತು ಆರ್.ಮಂಜುನಾಥ್‌ರವರು ತಡವಾಗಿ ನಾಮಪತ್ರ ಸಲ್ಲಿಸಿದ್ದು ಅವರಿಬ್ಬರ ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವಾಗಿದೆ.

ವಿದೇಶದಲ್ಲಿದ್ದ ಕಾರಣ ಅಬ್ದುಲ್ ಜಫರ್ ಅಲಿಯವರ ಹೆಸರು ಮತದಾರರ ಪಟ್ಟಿಯಲ್ಲಿರಲಿಲ್ಲ. ಆನಂತರ ಅವರು ಏಪ್ರಿಲ್ 20 ರಂದು ಮತದಾರರ ಗುರತಿನ ಚೀಟಿಗೆ ಅರ್ಜಿ ಹಾಕಿದ್ದರು. ಆದರೆ ಏಪ್ರಿಲ್ 11 ಕೊನೆಯ ದಿನವಾದ ಕಾರಣ ಅವರ ಹೆಸರು ಸೇರ್ಪಡೆಗೊಂಡಿರಲಿಲ್ಲ.

ಇನ್ನು ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಂಭವವನ್ನು ಅರಿತು ಜೆಡಿಎಸ್‌ನಿಂದ ಆರ್.ಮಂಜುನಾಥ್‌ರವರಿಗೂ ಬಿ ಫಾರಂ ಕೊಟ್ಟು ತರಾತುರಿಯಲ್ಲಿ ನಾಮಪತ್ರ ಸಲ್ಲಿಸಲಾಗಿತ್ತು. ಆದರೆ ಮಧ್ಯಾಹ್ನ 3 ಗಂಟೆ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಕೆಯಾದ ಕಾರಣ ಅದನ್ನೂ ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...