Homeಅಂಕಣಗಳುಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು

- Advertisement -
- Advertisement -

| ಯಾಹೂ |

ಬಿಜೆಪಿ ಗಳಿಸಿದ ಬಹುಮತಕ್ಕೆ ದೇಶದ ಬುದ್ದಿಜೀವಿಗಳು ಬೆಚ್ಚಿ ಬಿದ್ದಿದ್ದಾರೆ. ಸಾಮಾನ್ಯ ಪ್ರಜೆ ತನ್ನ ಕೆಲಸ ಮುಗಿಸಿದಂತೆ ಸಮಾಧಾನದಿಂದಿದ್ದಾನೆ. ಆದರೆ ಚೆಡ್ಡಿಗಳ ತುರಿಕೆ ಚೇಷ್ಟೆಯನ್ನು ಗ್ರಹಿಸಿದವರು ಈ ದೇಶಕ್ಕೆ ಏನು ಕಾದಿದೆಯೋ ಎಂದು ಹೆದರಿ ಹೋಗಿದ್ದಾರಲ್ಲಾ. ಈ ಸಮಯದಲ್ಲಿ ಬಹು ಗಂಭೀರವಾಗಿ ಚಿಂತಿಸುವುದರ ಬದಲು ನಮ್ಮ ವಾಟಿಸ್ಸೆಗೆ ಫೋನ್ ಮಾಡಿ ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತು. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ಏನು ಮಾಡಿ ಏನು ಬಂತಣ್ಣ, ನಾವೆಲ್ಲ ಕೂಡಿ ಏನು ಮಾಡಿ ಏನು ಬಂತಣ್ಣಾ…..
“ಗುಡ್‍ಮಾರ್ನಿಂಗು ಸಾ.”
“ವಾಟಿಸ್ಸೆ ಎಲ್ಲಿದ್ದೀ.”
“ಇನ್ನೆಲ್ಲಿರನ ಸಾರ್, ಕತ್ತಿಗೆ ಬೇಜಾರಾದ್ರೆ ಹಾಳು ಗ್ವಾಡೆ ಅಂತ ಊರಲ್ಲಿದೀನಿ.”
“ಯಂಗಿದೆ ಊರು.”
“144 ಸೆಕ್ಷೆನ್ ಹಾಕಿದಂಗದೆ.”
“ಯಾಕೆ?”
“ಅಂಥಾ ಬಿಸ್ಲು ಸಾರ್, ಈ ಬಿಸ್ಲು ನೋಡಿ ಮುಂದ್ಲೊರಸಕೂ ಇರಬೇಕಾ ಅನ್ನಿಸಿದೆ.”
“ನಿನ್ನಂಥವನಿಗೆ ಅಂಗನ್ನಸಬಾರ್ದು.”
“ನನ್ನಂಥವುನು ಅಂದ್ರೇನು ಸಾ.”
“ಭಾರತವನ್ನೇ ಬದಲಾಯ್ಸೊ ಶ್ರೀಸಾಮಾನ್ಯ ಅಂತ.”
“ಶ್ರೀಸಾಮಾನ್ಯ ಇನ್ನ ಯಾರ ಮಾತ್ನೂ ಕೇಳದಿಲ್ಲ, ಯಾರಿಗೂ ಸಿಗದಿಲ್ಲ ಸಾ.”
“ಅದನ್ನ ರಾಜಕಾರಣಿಗಳು ಅರ್ಥ ಮಾಡಿಕಳ್ಳಿಲ್ಲವಲ್ಲ ಹೇಳು.”
“ಈಗದೆ ಆಯ್ತಾ ಅದೆ ಸಾ. ಈ ಸಿದ್ರಾಮಯ್ಯ ದ್ಯಾವೇಗೌಡ ಇವುರಿಗ್ಯಲ್ಲ ಈಗರ್ಥ ಆಯ್ತ ಅದೆ.”
“ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ದೇಸದ ಕತೆ ಏನಾರ ಆಗ್ಲಿ. ನಮ್ಮ ಸುಮಲತ ಗೆದ್ಲಲ್ಲ ಸಾ.”
“ಸುಮಲತನ ಗೆಲುವ ಅಷ್ಟು ಸೀರಿಯಸ್ಸಾಗಿ ತಗಂಡಿದ್ಯಾ?”
“ಊ ಸಾ. ನಮ್ಮ ಅಳಿವು ಉಳಿವಿನ ಪ್ರಶ್ನೆ ಆಗಿತ್ತು.”
“ಅಷ್ಟ್ ಗಂಭೀರವಾಗಿತ್ತ.”
“ಅಲ್ವೆ ಮತ್ತೆ, ಅದೆಲ್ಲೊ ಬಾರಲ್ಲಿ ಕುತಗಂಡು ಚಿಲ್ಡ್ ಬೀರು ಕುಡೀತಿದ್ದ ಹುಡುಗನ್ನ ತಂದು ಮಂಡ್ಯಕ್ಕೆ ನಿಲ್ಸಿದ್ರಲ್ಲ. ಇವರಿಗೆ ಎಷ್ಟು ಧೈರ್ಯ ಇರಬೇಕು. ಮಂಡ್ಯ ಜಿಲ್ಲೇನ ಏನನ್ನಕಂಡಿದ್ರು ಸಾ.”
“ಸರಿಯಾದ ಉತ್ರ ಕೊಟ್ರಲ್ಲ ಬುಡಿ.”
“ಬುಡದಲ್ಲ ಸಾ. ದ್ಯಾವೇಗೌಡ್ರು ಅಷ್ಟು ಸುಲಭಕ್ಕೆ ಏನ್ನೂ ಬುಡದಿಲ್ಲ. ಆ ಹುಡುಗನ್ನ ಅಲ್ಲೇ ಇರು ಅಂದುಬುಡ್ತರೆ.”
“ಹಾಗಂತೀಯಾ.”
“ಇತಿಹಾಸ ನೋಡಿಲ್ವಾ ಸಾ. ದ್ಯಾವೇಗೌಡ್ರು ಚುನಾವಣೆಯ ಸೋಲು ಗೆಲುವಿಗೆ ಹೆದರಿದೋರಲ್ಲ. ನಿನ್ನ ಭಾಗಕ್ಕೆ ಮಂಡ್ಯ ಕೊಟ್ಟಿದೀವಿ, ನೀನಲ್ಲೇ ಇರು ಅಂದು ಬುಡ್ತರೆ. ಇದು ನೋಡಿದ್ರೆ ಹೈಲು ಪೈಲುಡುಗ ಮಂಡ್ಯ ಜಿಲ್ಲೆಯನ್ನೆ ಹುಚ್ಚಾಸ್ಪತ್ರೆ ಮಾಡಿಬುಡ್ತನೆ.”
“ಏನೇ ಆದ್ರು ಮಂಡ್ಯದ ಜನಗಳು ಸ್ವಾಭಿಮಾನಿಗಳು ಬುಡು.”
“ಅದು ಜಗತ್ತಿಗೇ ಗೊತ್ತಾಯ್ತು ಸಾ.”
“ಜಗತ್ತಿಗೇ ಗೊತ್ತಾಯ್ತಾ.”
“ಊ ಸಾ. ಅಂಬರೀಶ್‍ಗೆ ಪ್ರಪಂಚದಲ್ಯಲ್ಲ ಸ್ನೇಹಿತರಿದ್ರು, ಪರಿಚಯ ಮಾಡಿಕ್ಯಳದು, ಪಾರ್ಟಿ ಕೊಡದು, ಮುಂದ್ಲು ದೇಸುಕೆ ಹೋಯ್ತಾಯಿರದ. ಅಂಗೆ ದುಬಾಯಿ, ಕುವೈತ್, ಮಸ್ಕಟ್, ಅಮೇರಿಕದಲ್ಯಲ್ಲ ಪ್ರೆಂಡ್ಸಿದ್ರು. ಅವುರ್ಯಲ್ಲ ಮಂಡ್ಯದ ಜನ ಏನು ಮಾಡ್ತರೆ ಅಂತ ನೋಡ್ತಿದ್ರು.”
“ರಾಜ್ಯದ ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ಹೇಳದೇನು ಸಾ. ಯಲ್ಲ ಮುಗಿತಲ್ಲ ಬುಡಿ.”
“ಮುಗೀತು ಅಂತೀಯಾ.”
“ಇನ್ನೇನು ಸಾ. ಬಿಜೆಪಿ ತಲೆಮ್ಯಾಲೆ ಕಲ್ಲಾಕಕ್ಕೆ ಇವುರಿಬ್ರೂ ಒಂದಾಗಿ ಸೈಜಗಲ್ಲ ಹೊತ್ತಗಂಡು ನಿಂತಿದ್ರು. ಅವುರಿಗೆ ಗೊತ್ತಿಲ್ಲದಂಗೆ ಅವುರವುರ ಮ್ಯಾಲೆ ಹಾಯ್ಕಂಡ್ರು ಸಾ.”
“ಏನಂದೆ.”
“ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು.”
“ಅವುರ ನಡುವೆ ಅಷ್ಟು ದ್ವೇಶ ಇತ್ತ.”
“ಇತ್ತು ಸಾ, ಸತತವಾಗಿ ಒಂದೊರ್ಸ ಜಗಳಾಡ್ಯವುರೆ, ಹರಿಯ ಮುರಿಯ ಜಗಳಾಡಿಕಂಡು ಚುನಾವಣೆ ಬಂದೇಟಿಗೆ ತ್ಯಕ್ಕೆ ಬಡಕಂಡು, ನಾವಿಬ್ರು ಒಂದು ಅಂತ ಜನಗಳೆದ್ರಿಗೆ ಹೋಗಿ ನಿಂತ್ರೆ ಜನ ನಗದಿಲವಾ.”
“ಇದೊಂತರ ವಳೇಟು ಅಂಗರೆ.”
“ಓಟು ಮಾಡದೇ ವಳೇಟು ಕೊಡಕ್ಕಲವೆ, ಆಗೊಂದು ಸತಿ ಮಂಡ್ಯದಲ್ಲಿ ಉಪ ಚುನಾವಣೆ ಬತ್ತು. ದಿಢೀರಂತ ಕುಮಾರಸ್ವಾಮಿನೂ ಎಡೂರಪ್ಪನೂ ಗಬುಕ್ಕಂತ ತಬ್ಬಿಕಂಡು ಮುತ್ತು ಕೊಟ್ರು. ಜನ ಪುಟ್ಟರಾಜನ್ನ ಸೋಲಿಸಿ ರಮ್ಯನ್ನ ಗೆಲ್ಲಿಸಿದ್ರು, ಗೊತ್ತ ಸಾ.”
“ಗೊತ್ತು. ಜನ ಅಕ್ರಮ ಸಮಂದ ಸಹಿಸಲ್ಲ ಅಲವೆ.”
“ಸಮಂದ ಮಾಡೋರೂ ದೊಡ್ಡ ಮನುಸರಾಗಿರಬೇಕು, ಉದ್ದೇಶ ವಳ್ಳೆದಿರಬೇಕು, ಅಂಗಿದ್ರೆ ಸಯಿಸಿಗತ್ತರೆ ಸಾ.”
“ಮೋದಿ ಈ ತರ ಗೆಲ್ಲದ ನಿರೀಕ್ಷೆ ಮಾಡಿದ್ಯಾ?.”
“ತಿರಗ ಬರಬವುದು ಅನ್ನಕಂಡಿದ್ದೆ.”
“ಹ್ಯಂಗೇ.”
” ಮನೇಲಿ ಕುತಗಂಡು ಟಿವಿ ನೋಡಿ ನೋಡಿ ಅಂಗಂದಿದ್ದ. ಟಿವಿಲಿರೋ ಹಾದರಕ್ಕುಟ್ಟಿದ ನನ್ನ ಮಕ್ಕಳು ದ್ಯಾವೇಗೌಡನ ಅಭಿಮಾನಿ ಸಿದ್ದೇಗೌಡನ್ನೇ ಬದ್ಲಾಸಿದ್ರು ಅಂದ್ರೆ ಇನ್ನೇನೇಳನಾ.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...