Homeಅಂಕಣಗಳುಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು

- Advertisement -
- Advertisement -

| ಯಾಹೂ |

ಬಿಜೆಪಿ ಗಳಿಸಿದ ಬಹುಮತಕ್ಕೆ ದೇಶದ ಬುದ್ದಿಜೀವಿಗಳು ಬೆಚ್ಚಿ ಬಿದ್ದಿದ್ದಾರೆ. ಸಾಮಾನ್ಯ ಪ್ರಜೆ ತನ್ನ ಕೆಲಸ ಮುಗಿಸಿದಂತೆ ಸಮಾಧಾನದಿಂದಿದ್ದಾನೆ. ಆದರೆ ಚೆಡ್ಡಿಗಳ ತುರಿಕೆ ಚೇಷ್ಟೆಯನ್ನು ಗ್ರಹಿಸಿದವರು ಈ ದೇಶಕ್ಕೆ ಏನು ಕಾದಿದೆಯೋ ಎಂದು ಹೆದರಿ ಹೋಗಿದ್ದಾರಲ್ಲಾ. ಈ ಸಮಯದಲ್ಲಿ ಬಹು ಗಂಭೀರವಾಗಿ ಚಿಂತಿಸುವುದರ ಬದಲು ನಮ್ಮ ವಾಟಿಸ್ಸೆಗೆ ಫೋನ್ ಮಾಡಿ ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತು. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ಏನು ಮಾಡಿ ಏನು ಬಂತಣ್ಣ, ನಾವೆಲ್ಲ ಕೂಡಿ ಏನು ಮಾಡಿ ಏನು ಬಂತಣ್ಣಾ…..
“ಗುಡ್‍ಮಾರ್ನಿಂಗು ಸಾ.”
“ವಾಟಿಸ್ಸೆ ಎಲ್ಲಿದ್ದೀ.”
“ಇನ್ನೆಲ್ಲಿರನ ಸಾರ್, ಕತ್ತಿಗೆ ಬೇಜಾರಾದ್ರೆ ಹಾಳು ಗ್ವಾಡೆ ಅಂತ ಊರಲ್ಲಿದೀನಿ.”
“ಯಂಗಿದೆ ಊರು.”
“144 ಸೆಕ್ಷೆನ್ ಹಾಕಿದಂಗದೆ.”
“ಯಾಕೆ?”
“ಅಂಥಾ ಬಿಸ್ಲು ಸಾರ್, ಈ ಬಿಸ್ಲು ನೋಡಿ ಮುಂದ್ಲೊರಸಕೂ ಇರಬೇಕಾ ಅನ್ನಿಸಿದೆ.”
“ನಿನ್ನಂಥವನಿಗೆ ಅಂಗನ್ನಸಬಾರ್ದು.”
“ನನ್ನಂಥವುನು ಅಂದ್ರೇನು ಸಾ.”
“ಭಾರತವನ್ನೇ ಬದಲಾಯ್ಸೊ ಶ್ರೀಸಾಮಾನ್ಯ ಅಂತ.”
“ಶ್ರೀಸಾಮಾನ್ಯ ಇನ್ನ ಯಾರ ಮಾತ್ನೂ ಕೇಳದಿಲ್ಲ, ಯಾರಿಗೂ ಸಿಗದಿಲ್ಲ ಸಾ.”
“ಅದನ್ನ ರಾಜಕಾರಣಿಗಳು ಅರ್ಥ ಮಾಡಿಕಳ್ಳಿಲ್ಲವಲ್ಲ ಹೇಳು.”
“ಈಗದೆ ಆಯ್ತಾ ಅದೆ ಸಾ. ಈ ಸಿದ್ರಾಮಯ್ಯ ದ್ಯಾವೇಗೌಡ ಇವುರಿಗ್ಯಲ್ಲ ಈಗರ್ಥ ಆಯ್ತ ಅದೆ.”
“ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ದೇಸದ ಕತೆ ಏನಾರ ಆಗ್ಲಿ. ನಮ್ಮ ಸುಮಲತ ಗೆದ್ಲಲ್ಲ ಸಾ.”
“ಸುಮಲತನ ಗೆಲುವ ಅಷ್ಟು ಸೀರಿಯಸ್ಸಾಗಿ ತಗಂಡಿದ್ಯಾ?”
“ಊ ಸಾ. ನಮ್ಮ ಅಳಿವು ಉಳಿವಿನ ಪ್ರಶ್ನೆ ಆಗಿತ್ತು.”
“ಅಷ್ಟ್ ಗಂಭೀರವಾಗಿತ್ತ.”
“ಅಲ್ವೆ ಮತ್ತೆ, ಅದೆಲ್ಲೊ ಬಾರಲ್ಲಿ ಕುತಗಂಡು ಚಿಲ್ಡ್ ಬೀರು ಕುಡೀತಿದ್ದ ಹುಡುಗನ್ನ ತಂದು ಮಂಡ್ಯಕ್ಕೆ ನಿಲ್ಸಿದ್ರಲ್ಲ. ಇವರಿಗೆ ಎಷ್ಟು ಧೈರ್ಯ ಇರಬೇಕು. ಮಂಡ್ಯ ಜಿಲ್ಲೇನ ಏನನ್ನಕಂಡಿದ್ರು ಸಾ.”
“ಸರಿಯಾದ ಉತ್ರ ಕೊಟ್ರಲ್ಲ ಬುಡಿ.”
“ಬುಡದಲ್ಲ ಸಾ. ದ್ಯಾವೇಗೌಡ್ರು ಅಷ್ಟು ಸುಲಭಕ್ಕೆ ಏನ್ನೂ ಬುಡದಿಲ್ಲ. ಆ ಹುಡುಗನ್ನ ಅಲ್ಲೇ ಇರು ಅಂದುಬುಡ್ತರೆ.”
“ಹಾಗಂತೀಯಾ.”
“ಇತಿಹಾಸ ನೋಡಿಲ್ವಾ ಸಾ. ದ್ಯಾವೇಗೌಡ್ರು ಚುನಾವಣೆಯ ಸೋಲು ಗೆಲುವಿಗೆ ಹೆದರಿದೋರಲ್ಲ. ನಿನ್ನ ಭಾಗಕ್ಕೆ ಮಂಡ್ಯ ಕೊಟ್ಟಿದೀವಿ, ನೀನಲ್ಲೇ ಇರು ಅಂದು ಬುಡ್ತರೆ. ಇದು ನೋಡಿದ್ರೆ ಹೈಲು ಪೈಲುಡುಗ ಮಂಡ್ಯ ಜಿಲ್ಲೆಯನ್ನೆ ಹುಚ್ಚಾಸ್ಪತ್ರೆ ಮಾಡಿಬುಡ್ತನೆ.”
“ಏನೇ ಆದ್ರು ಮಂಡ್ಯದ ಜನಗಳು ಸ್ವಾಭಿಮಾನಿಗಳು ಬುಡು.”
“ಅದು ಜಗತ್ತಿಗೇ ಗೊತ್ತಾಯ್ತು ಸಾ.”
“ಜಗತ್ತಿಗೇ ಗೊತ್ತಾಯ್ತಾ.”
“ಊ ಸಾ. ಅಂಬರೀಶ್‍ಗೆ ಪ್ರಪಂಚದಲ್ಯಲ್ಲ ಸ್ನೇಹಿತರಿದ್ರು, ಪರಿಚಯ ಮಾಡಿಕ್ಯಳದು, ಪಾರ್ಟಿ ಕೊಡದು, ಮುಂದ್ಲು ದೇಸುಕೆ ಹೋಯ್ತಾಯಿರದ. ಅಂಗೆ ದುಬಾಯಿ, ಕುವೈತ್, ಮಸ್ಕಟ್, ಅಮೇರಿಕದಲ್ಯಲ್ಲ ಪ್ರೆಂಡ್ಸಿದ್ರು. ಅವುರ್ಯಲ್ಲ ಮಂಡ್ಯದ ಜನ ಏನು ಮಾಡ್ತರೆ ಅಂತ ನೋಡ್ತಿದ್ರು.”
“ರಾಜ್ಯದ ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ಹೇಳದೇನು ಸಾ. ಯಲ್ಲ ಮುಗಿತಲ್ಲ ಬುಡಿ.”
“ಮುಗೀತು ಅಂತೀಯಾ.”
“ಇನ್ನೇನು ಸಾ. ಬಿಜೆಪಿ ತಲೆಮ್ಯಾಲೆ ಕಲ್ಲಾಕಕ್ಕೆ ಇವುರಿಬ್ರೂ ಒಂದಾಗಿ ಸೈಜಗಲ್ಲ ಹೊತ್ತಗಂಡು ನಿಂತಿದ್ರು. ಅವುರಿಗೆ ಗೊತ್ತಿಲ್ಲದಂಗೆ ಅವುರವುರ ಮ್ಯಾಲೆ ಹಾಯ್ಕಂಡ್ರು ಸಾ.”
“ಏನಂದೆ.”
“ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು.”
“ಅವುರ ನಡುವೆ ಅಷ್ಟು ದ್ವೇಶ ಇತ್ತ.”
“ಇತ್ತು ಸಾ, ಸತತವಾಗಿ ಒಂದೊರ್ಸ ಜಗಳಾಡ್ಯವುರೆ, ಹರಿಯ ಮುರಿಯ ಜಗಳಾಡಿಕಂಡು ಚುನಾವಣೆ ಬಂದೇಟಿಗೆ ತ್ಯಕ್ಕೆ ಬಡಕಂಡು, ನಾವಿಬ್ರು ಒಂದು ಅಂತ ಜನಗಳೆದ್ರಿಗೆ ಹೋಗಿ ನಿಂತ್ರೆ ಜನ ನಗದಿಲವಾ.”
“ಇದೊಂತರ ವಳೇಟು ಅಂಗರೆ.”
“ಓಟು ಮಾಡದೇ ವಳೇಟು ಕೊಡಕ್ಕಲವೆ, ಆಗೊಂದು ಸತಿ ಮಂಡ್ಯದಲ್ಲಿ ಉಪ ಚುನಾವಣೆ ಬತ್ತು. ದಿಢೀರಂತ ಕುಮಾರಸ್ವಾಮಿನೂ ಎಡೂರಪ್ಪನೂ ಗಬುಕ್ಕಂತ ತಬ್ಬಿಕಂಡು ಮುತ್ತು ಕೊಟ್ರು. ಜನ ಪುಟ್ಟರಾಜನ್ನ ಸೋಲಿಸಿ ರಮ್ಯನ್ನ ಗೆಲ್ಲಿಸಿದ್ರು, ಗೊತ್ತ ಸಾ.”
“ಗೊತ್ತು. ಜನ ಅಕ್ರಮ ಸಮಂದ ಸಹಿಸಲ್ಲ ಅಲವೆ.”
“ಸಮಂದ ಮಾಡೋರೂ ದೊಡ್ಡ ಮನುಸರಾಗಿರಬೇಕು, ಉದ್ದೇಶ ವಳ್ಳೆದಿರಬೇಕು, ಅಂಗಿದ್ರೆ ಸಯಿಸಿಗತ್ತರೆ ಸಾ.”
“ಮೋದಿ ಈ ತರ ಗೆಲ್ಲದ ನಿರೀಕ್ಷೆ ಮಾಡಿದ್ಯಾ?.”
“ತಿರಗ ಬರಬವುದು ಅನ್ನಕಂಡಿದ್ದೆ.”
“ಹ್ಯಂಗೇ.”
” ಮನೇಲಿ ಕುತಗಂಡು ಟಿವಿ ನೋಡಿ ನೋಡಿ ಅಂಗಂದಿದ್ದ. ಟಿವಿಲಿರೋ ಹಾದರಕ್ಕುಟ್ಟಿದ ನನ್ನ ಮಕ್ಕಳು ದ್ಯಾವೇಗೌಡನ ಅಭಿಮಾನಿ ಸಿದ್ದೇಗೌಡನ್ನೇ ಬದ್ಲಾಸಿದ್ರು ಅಂದ್ರೆ ಇನ್ನೇನೇಳನಾ.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...