Homeಅಂಕಣಗಳುಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು

- Advertisement -
- Advertisement -

| ಯಾಹೂ |

ಬಿಜೆಪಿ ಗಳಿಸಿದ ಬಹುಮತಕ್ಕೆ ದೇಶದ ಬುದ್ದಿಜೀವಿಗಳು ಬೆಚ್ಚಿ ಬಿದ್ದಿದ್ದಾರೆ. ಸಾಮಾನ್ಯ ಪ್ರಜೆ ತನ್ನ ಕೆಲಸ ಮುಗಿಸಿದಂತೆ ಸಮಾಧಾನದಿಂದಿದ್ದಾನೆ. ಆದರೆ ಚೆಡ್ಡಿಗಳ ತುರಿಕೆ ಚೇಷ್ಟೆಯನ್ನು ಗ್ರಹಿಸಿದವರು ಈ ದೇಶಕ್ಕೆ ಏನು ಕಾದಿದೆಯೋ ಎಂದು ಹೆದರಿ ಹೋಗಿದ್ದಾರಲ್ಲಾ. ಈ ಸಮಯದಲ್ಲಿ ಬಹು ಗಂಭೀರವಾಗಿ ಚಿಂತಿಸುವುದರ ಬದಲು ನಮ್ಮ ವಾಟಿಸ್ಸೆಗೆ ಫೋನ್ ಮಾಡಿ ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತು. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ಏನು ಮಾಡಿ ಏನು ಬಂತಣ್ಣ, ನಾವೆಲ್ಲ ಕೂಡಿ ಏನು ಮಾಡಿ ಏನು ಬಂತಣ್ಣಾ…..
“ಗುಡ್‍ಮಾರ್ನಿಂಗು ಸಾ.”
“ವಾಟಿಸ್ಸೆ ಎಲ್ಲಿದ್ದೀ.”
“ಇನ್ನೆಲ್ಲಿರನ ಸಾರ್, ಕತ್ತಿಗೆ ಬೇಜಾರಾದ್ರೆ ಹಾಳು ಗ್ವಾಡೆ ಅಂತ ಊರಲ್ಲಿದೀನಿ.”
“ಯಂಗಿದೆ ಊರು.”
“144 ಸೆಕ್ಷೆನ್ ಹಾಕಿದಂಗದೆ.”
“ಯಾಕೆ?”
“ಅಂಥಾ ಬಿಸ್ಲು ಸಾರ್, ಈ ಬಿಸ್ಲು ನೋಡಿ ಮುಂದ್ಲೊರಸಕೂ ಇರಬೇಕಾ ಅನ್ನಿಸಿದೆ.”
“ನಿನ್ನಂಥವನಿಗೆ ಅಂಗನ್ನಸಬಾರ್ದು.”
“ನನ್ನಂಥವುನು ಅಂದ್ರೇನು ಸಾ.”
“ಭಾರತವನ್ನೇ ಬದಲಾಯ್ಸೊ ಶ್ರೀಸಾಮಾನ್ಯ ಅಂತ.”
“ಶ್ರೀಸಾಮಾನ್ಯ ಇನ್ನ ಯಾರ ಮಾತ್ನೂ ಕೇಳದಿಲ್ಲ, ಯಾರಿಗೂ ಸಿಗದಿಲ್ಲ ಸಾ.”
“ಅದನ್ನ ರಾಜಕಾರಣಿಗಳು ಅರ್ಥ ಮಾಡಿಕಳ್ಳಿಲ್ಲವಲ್ಲ ಹೇಳು.”
“ಈಗದೆ ಆಯ್ತಾ ಅದೆ ಸಾ. ಈ ಸಿದ್ರಾಮಯ್ಯ ದ್ಯಾವೇಗೌಡ ಇವುರಿಗ್ಯಲ್ಲ ಈಗರ್ಥ ಆಯ್ತ ಅದೆ.”
“ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ದೇಸದ ಕತೆ ಏನಾರ ಆಗ್ಲಿ. ನಮ್ಮ ಸುಮಲತ ಗೆದ್ಲಲ್ಲ ಸಾ.”
“ಸುಮಲತನ ಗೆಲುವ ಅಷ್ಟು ಸೀರಿಯಸ್ಸಾಗಿ ತಗಂಡಿದ್ಯಾ?”
“ಊ ಸಾ. ನಮ್ಮ ಅಳಿವು ಉಳಿವಿನ ಪ್ರಶ್ನೆ ಆಗಿತ್ತು.”
“ಅಷ್ಟ್ ಗಂಭೀರವಾಗಿತ್ತ.”
“ಅಲ್ವೆ ಮತ್ತೆ, ಅದೆಲ್ಲೊ ಬಾರಲ್ಲಿ ಕುತಗಂಡು ಚಿಲ್ಡ್ ಬೀರು ಕುಡೀತಿದ್ದ ಹುಡುಗನ್ನ ತಂದು ಮಂಡ್ಯಕ್ಕೆ ನಿಲ್ಸಿದ್ರಲ್ಲ. ಇವರಿಗೆ ಎಷ್ಟು ಧೈರ್ಯ ಇರಬೇಕು. ಮಂಡ್ಯ ಜಿಲ್ಲೇನ ಏನನ್ನಕಂಡಿದ್ರು ಸಾ.”
“ಸರಿಯಾದ ಉತ್ರ ಕೊಟ್ರಲ್ಲ ಬುಡಿ.”
“ಬುಡದಲ್ಲ ಸಾ. ದ್ಯಾವೇಗೌಡ್ರು ಅಷ್ಟು ಸುಲಭಕ್ಕೆ ಏನ್ನೂ ಬುಡದಿಲ್ಲ. ಆ ಹುಡುಗನ್ನ ಅಲ್ಲೇ ಇರು ಅಂದುಬುಡ್ತರೆ.”
“ಹಾಗಂತೀಯಾ.”
“ಇತಿಹಾಸ ನೋಡಿಲ್ವಾ ಸಾ. ದ್ಯಾವೇಗೌಡ್ರು ಚುನಾವಣೆಯ ಸೋಲು ಗೆಲುವಿಗೆ ಹೆದರಿದೋರಲ್ಲ. ನಿನ್ನ ಭಾಗಕ್ಕೆ ಮಂಡ್ಯ ಕೊಟ್ಟಿದೀವಿ, ನೀನಲ್ಲೇ ಇರು ಅಂದು ಬುಡ್ತರೆ. ಇದು ನೋಡಿದ್ರೆ ಹೈಲು ಪೈಲುಡುಗ ಮಂಡ್ಯ ಜಿಲ್ಲೆಯನ್ನೆ ಹುಚ್ಚಾಸ್ಪತ್ರೆ ಮಾಡಿಬುಡ್ತನೆ.”
“ಏನೇ ಆದ್ರು ಮಂಡ್ಯದ ಜನಗಳು ಸ್ವಾಭಿಮಾನಿಗಳು ಬುಡು.”
“ಅದು ಜಗತ್ತಿಗೇ ಗೊತ್ತಾಯ್ತು ಸಾ.”
“ಜಗತ್ತಿಗೇ ಗೊತ್ತಾಯ್ತಾ.”
“ಊ ಸಾ. ಅಂಬರೀಶ್‍ಗೆ ಪ್ರಪಂಚದಲ್ಯಲ್ಲ ಸ್ನೇಹಿತರಿದ್ರು, ಪರಿಚಯ ಮಾಡಿಕ್ಯಳದು, ಪಾರ್ಟಿ ಕೊಡದು, ಮುಂದ್ಲು ದೇಸುಕೆ ಹೋಯ್ತಾಯಿರದ. ಅಂಗೆ ದುಬಾಯಿ, ಕುವೈತ್, ಮಸ್ಕಟ್, ಅಮೇರಿಕದಲ್ಯಲ್ಲ ಪ್ರೆಂಡ್ಸಿದ್ರು. ಅವುರ್ಯಲ್ಲ ಮಂಡ್ಯದ ಜನ ಏನು ಮಾಡ್ತರೆ ಅಂತ ನೋಡ್ತಿದ್ರು.”
“ರಾಜ್ಯದ ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ಹೇಳದೇನು ಸಾ. ಯಲ್ಲ ಮುಗಿತಲ್ಲ ಬುಡಿ.”
“ಮುಗೀತು ಅಂತೀಯಾ.”
“ಇನ್ನೇನು ಸಾ. ಬಿಜೆಪಿ ತಲೆಮ್ಯಾಲೆ ಕಲ್ಲಾಕಕ್ಕೆ ಇವುರಿಬ್ರೂ ಒಂದಾಗಿ ಸೈಜಗಲ್ಲ ಹೊತ್ತಗಂಡು ನಿಂತಿದ್ರು. ಅವುರಿಗೆ ಗೊತ್ತಿಲ್ಲದಂಗೆ ಅವುರವುರ ಮ್ಯಾಲೆ ಹಾಯ್ಕಂಡ್ರು ಸಾ.”
“ಏನಂದೆ.”
“ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು.”
“ಅವುರ ನಡುವೆ ಅಷ್ಟು ದ್ವೇಶ ಇತ್ತ.”
“ಇತ್ತು ಸಾ, ಸತತವಾಗಿ ಒಂದೊರ್ಸ ಜಗಳಾಡ್ಯವುರೆ, ಹರಿಯ ಮುರಿಯ ಜಗಳಾಡಿಕಂಡು ಚುನಾವಣೆ ಬಂದೇಟಿಗೆ ತ್ಯಕ್ಕೆ ಬಡಕಂಡು, ನಾವಿಬ್ರು ಒಂದು ಅಂತ ಜನಗಳೆದ್ರಿಗೆ ಹೋಗಿ ನಿಂತ್ರೆ ಜನ ನಗದಿಲವಾ.”
“ಇದೊಂತರ ವಳೇಟು ಅಂಗರೆ.”
“ಓಟು ಮಾಡದೇ ವಳೇಟು ಕೊಡಕ್ಕಲವೆ, ಆಗೊಂದು ಸತಿ ಮಂಡ್ಯದಲ್ಲಿ ಉಪ ಚುನಾವಣೆ ಬತ್ತು. ದಿಢೀರಂತ ಕುಮಾರಸ್ವಾಮಿನೂ ಎಡೂರಪ್ಪನೂ ಗಬುಕ್ಕಂತ ತಬ್ಬಿಕಂಡು ಮುತ್ತು ಕೊಟ್ರು. ಜನ ಪುಟ್ಟರಾಜನ್ನ ಸೋಲಿಸಿ ರಮ್ಯನ್ನ ಗೆಲ್ಲಿಸಿದ್ರು, ಗೊತ್ತ ಸಾ.”
“ಗೊತ್ತು. ಜನ ಅಕ್ರಮ ಸಮಂದ ಸಹಿಸಲ್ಲ ಅಲವೆ.”
“ಸಮಂದ ಮಾಡೋರೂ ದೊಡ್ಡ ಮನುಸರಾಗಿರಬೇಕು, ಉದ್ದೇಶ ವಳ್ಳೆದಿರಬೇಕು, ಅಂಗಿದ್ರೆ ಸಯಿಸಿಗತ್ತರೆ ಸಾ.”
“ಮೋದಿ ಈ ತರ ಗೆಲ್ಲದ ನಿರೀಕ್ಷೆ ಮಾಡಿದ್ಯಾ?.”
“ತಿರಗ ಬರಬವುದು ಅನ್ನಕಂಡಿದ್ದೆ.”
“ಹ್ಯಂಗೇ.”
” ಮನೇಲಿ ಕುತಗಂಡು ಟಿವಿ ನೋಡಿ ನೋಡಿ ಅಂಗಂದಿದ್ದ. ಟಿವಿಲಿರೋ ಹಾದರಕ್ಕುಟ್ಟಿದ ನನ್ನ ಮಕ್ಕಳು ದ್ಯಾವೇಗೌಡನ ಅಭಿಮಾನಿ ಸಿದ್ದೇಗೌಡನ್ನೇ ಬದ್ಲಾಸಿದ್ರು ಅಂದ್ರೆ ಇನ್ನೇನೇಳನಾ.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...