Homeಅಂಕಣಗಳುಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು

- Advertisement -
- Advertisement -

| ಯಾಹೂ |

ಬಿಜೆಪಿ ಗಳಿಸಿದ ಬಹುಮತಕ್ಕೆ ದೇಶದ ಬುದ್ದಿಜೀವಿಗಳು ಬೆಚ್ಚಿ ಬಿದ್ದಿದ್ದಾರೆ. ಸಾಮಾನ್ಯ ಪ್ರಜೆ ತನ್ನ ಕೆಲಸ ಮುಗಿಸಿದಂತೆ ಸಮಾಧಾನದಿಂದಿದ್ದಾನೆ. ಆದರೆ ಚೆಡ್ಡಿಗಳ ತುರಿಕೆ ಚೇಷ್ಟೆಯನ್ನು ಗ್ರಹಿಸಿದವರು ಈ ದೇಶಕ್ಕೆ ಏನು ಕಾದಿದೆಯೋ ಎಂದು ಹೆದರಿ ಹೋಗಿದ್ದಾರಲ್ಲಾ. ಈ ಸಮಯದಲ್ಲಿ ಬಹು ಗಂಭೀರವಾಗಿ ಚಿಂತಿಸುವುದರ ಬದಲು ನಮ್ಮ ವಾಟಿಸ್ಸೆಗೆ ಫೋನ್ ಮಾಡಿ ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತು. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ಏನು ಮಾಡಿ ಏನು ಬಂತಣ್ಣ, ನಾವೆಲ್ಲ ಕೂಡಿ ಏನು ಮಾಡಿ ಏನು ಬಂತಣ್ಣಾ…..
“ಗುಡ್‍ಮಾರ್ನಿಂಗು ಸಾ.”
“ವಾಟಿಸ್ಸೆ ಎಲ್ಲಿದ್ದೀ.”
“ಇನ್ನೆಲ್ಲಿರನ ಸಾರ್, ಕತ್ತಿಗೆ ಬೇಜಾರಾದ್ರೆ ಹಾಳು ಗ್ವಾಡೆ ಅಂತ ಊರಲ್ಲಿದೀನಿ.”
“ಯಂಗಿದೆ ಊರು.”
“144 ಸೆಕ್ಷೆನ್ ಹಾಕಿದಂಗದೆ.”
“ಯಾಕೆ?”
“ಅಂಥಾ ಬಿಸ್ಲು ಸಾರ್, ಈ ಬಿಸ್ಲು ನೋಡಿ ಮುಂದ್ಲೊರಸಕೂ ಇರಬೇಕಾ ಅನ್ನಿಸಿದೆ.”
“ನಿನ್ನಂಥವನಿಗೆ ಅಂಗನ್ನಸಬಾರ್ದು.”
“ನನ್ನಂಥವುನು ಅಂದ್ರೇನು ಸಾ.”
“ಭಾರತವನ್ನೇ ಬದಲಾಯ್ಸೊ ಶ್ರೀಸಾಮಾನ್ಯ ಅಂತ.”
“ಶ್ರೀಸಾಮಾನ್ಯ ಇನ್ನ ಯಾರ ಮಾತ್ನೂ ಕೇಳದಿಲ್ಲ, ಯಾರಿಗೂ ಸಿಗದಿಲ್ಲ ಸಾ.”
“ಅದನ್ನ ರಾಜಕಾರಣಿಗಳು ಅರ್ಥ ಮಾಡಿಕಳ್ಳಿಲ್ಲವಲ್ಲ ಹೇಳು.”
“ಈಗದೆ ಆಯ್ತಾ ಅದೆ ಸಾ. ಈ ಸಿದ್ರಾಮಯ್ಯ ದ್ಯಾವೇಗೌಡ ಇವುರಿಗ್ಯಲ್ಲ ಈಗರ್ಥ ಆಯ್ತ ಅದೆ.”
“ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ದೇಸದ ಕತೆ ಏನಾರ ಆಗ್ಲಿ. ನಮ್ಮ ಸುಮಲತ ಗೆದ್ಲಲ್ಲ ಸಾ.”
“ಸುಮಲತನ ಗೆಲುವ ಅಷ್ಟು ಸೀರಿಯಸ್ಸಾಗಿ ತಗಂಡಿದ್ಯಾ?”
“ಊ ಸಾ. ನಮ್ಮ ಅಳಿವು ಉಳಿವಿನ ಪ್ರಶ್ನೆ ಆಗಿತ್ತು.”
“ಅಷ್ಟ್ ಗಂಭೀರವಾಗಿತ್ತ.”
“ಅಲ್ವೆ ಮತ್ತೆ, ಅದೆಲ್ಲೊ ಬಾರಲ್ಲಿ ಕುತಗಂಡು ಚಿಲ್ಡ್ ಬೀರು ಕುಡೀತಿದ್ದ ಹುಡುಗನ್ನ ತಂದು ಮಂಡ್ಯಕ್ಕೆ ನಿಲ್ಸಿದ್ರಲ್ಲ. ಇವರಿಗೆ ಎಷ್ಟು ಧೈರ್ಯ ಇರಬೇಕು. ಮಂಡ್ಯ ಜಿಲ್ಲೇನ ಏನನ್ನಕಂಡಿದ್ರು ಸಾ.”
“ಸರಿಯಾದ ಉತ್ರ ಕೊಟ್ರಲ್ಲ ಬುಡಿ.”
“ಬುಡದಲ್ಲ ಸಾ. ದ್ಯಾವೇಗೌಡ್ರು ಅಷ್ಟು ಸುಲಭಕ್ಕೆ ಏನ್ನೂ ಬುಡದಿಲ್ಲ. ಆ ಹುಡುಗನ್ನ ಅಲ್ಲೇ ಇರು ಅಂದುಬುಡ್ತರೆ.”
“ಹಾಗಂತೀಯಾ.”
“ಇತಿಹಾಸ ನೋಡಿಲ್ವಾ ಸಾ. ದ್ಯಾವೇಗೌಡ್ರು ಚುನಾವಣೆಯ ಸೋಲು ಗೆಲುವಿಗೆ ಹೆದರಿದೋರಲ್ಲ. ನಿನ್ನ ಭಾಗಕ್ಕೆ ಮಂಡ್ಯ ಕೊಟ್ಟಿದೀವಿ, ನೀನಲ್ಲೇ ಇರು ಅಂದು ಬುಡ್ತರೆ. ಇದು ನೋಡಿದ್ರೆ ಹೈಲು ಪೈಲುಡುಗ ಮಂಡ್ಯ ಜಿಲ್ಲೆಯನ್ನೆ ಹುಚ್ಚಾಸ್ಪತ್ರೆ ಮಾಡಿಬುಡ್ತನೆ.”
“ಏನೇ ಆದ್ರು ಮಂಡ್ಯದ ಜನಗಳು ಸ್ವಾಭಿಮಾನಿಗಳು ಬುಡು.”
“ಅದು ಜಗತ್ತಿಗೇ ಗೊತ್ತಾಯ್ತು ಸಾ.”
“ಜಗತ್ತಿಗೇ ಗೊತ್ತಾಯ್ತಾ.”
“ಊ ಸಾ. ಅಂಬರೀಶ್‍ಗೆ ಪ್ರಪಂಚದಲ್ಯಲ್ಲ ಸ್ನೇಹಿತರಿದ್ರು, ಪರಿಚಯ ಮಾಡಿಕ್ಯಳದು, ಪಾರ್ಟಿ ಕೊಡದು, ಮುಂದ್ಲು ದೇಸುಕೆ ಹೋಯ್ತಾಯಿರದ. ಅಂಗೆ ದುಬಾಯಿ, ಕುವೈತ್, ಮಸ್ಕಟ್, ಅಮೇರಿಕದಲ್ಯಲ್ಲ ಪ್ರೆಂಡ್ಸಿದ್ರು. ಅವುರ್ಯಲ್ಲ ಮಂಡ್ಯದ ಜನ ಏನು ಮಾಡ್ತರೆ ಅಂತ ನೋಡ್ತಿದ್ರು.”
“ರಾಜ್ಯದ ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ಹೇಳದೇನು ಸಾ. ಯಲ್ಲ ಮುಗಿತಲ್ಲ ಬುಡಿ.”
“ಮುಗೀತು ಅಂತೀಯಾ.”
“ಇನ್ನೇನು ಸಾ. ಬಿಜೆಪಿ ತಲೆಮ್ಯಾಲೆ ಕಲ್ಲಾಕಕ್ಕೆ ಇವುರಿಬ್ರೂ ಒಂದಾಗಿ ಸೈಜಗಲ್ಲ ಹೊತ್ತಗಂಡು ನಿಂತಿದ್ರು. ಅವುರಿಗೆ ಗೊತ್ತಿಲ್ಲದಂಗೆ ಅವುರವುರ ಮ್ಯಾಲೆ ಹಾಯ್ಕಂಡ್ರು ಸಾ.”
“ಏನಂದೆ.”
“ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು.”
“ಅವುರ ನಡುವೆ ಅಷ್ಟು ದ್ವೇಶ ಇತ್ತ.”
“ಇತ್ತು ಸಾ, ಸತತವಾಗಿ ಒಂದೊರ್ಸ ಜಗಳಾಡ್ಯವುರೆ, ಹರಿಯ ಮುರಿಯ ಜಗಳಾಡಿಕಂಡು ಚುನಾವಣೆ ಬಂದೇಟಿಗೆ ತ್ಯಕ್ಕೆ ಬಡಕಂಡು, ನಾವಿಬ್ರು ಒಂದು ಅಂತ ಜನಗಳೆದ್ರಿಗೆ ಹೋಗಿ ನಿಂತ್ರೆ ಜನ ನಗದಿಲವಾ.”
“ಇದೊಂತರ ವಳೇಟು ಅಂಗರೆ.”
“ಓಟು ಮಾಡದೇ ವಳೇಟು ಕೊಡಕ್ಕಲವೆ, ಆಗೊಂದು ಸತಿ ಮಂಡ್ಯದಲ್ಲಿ ಉಪ ಚುನಾವಣೆ ಬತ್ತು. ದಿಢೀರಂತ ಕುಮಾರಸ್ವಾಮಿನೂ ಎಡೂರಪ್ಪನೂ ಗಬುಕ್ಕಂತ ತಬ್ಬಿಕಂಡು ಮುತ್ತು ಕೊಟ್ರು. ಜನ ಪುಟ್ಟರಾಜನ್ನ ಸೋಲಿಸಿ ರಮ್ಯನ್ನ ಗೆಲ್ಲಿಸಿದ್ರು, ಗೊತ್ತ ಸಾ.”
“ಗೊತ್ತು. ಜನ ಅಕ್ರಮ ಸಮಂದ ಸಹಿಸಲ್ಲ ಅಲವೆ.”
“ಸಮಂದ ಮಾಡೋರೂ ದೊಡ್ಡ ಮನುಸರಾಗಿರಬೇಕು, ಉದ್ದೇಶ ವಳ್ಳೆದಿರಬೇಕು, ಅಂಗಿದ್ರೆ ಸಯಿಸಿಗತ್ತರೆ ಸಾ.”
“ಮೋದಿ ಈ ತರ ಗೆಲ್ಲದ ನಿರೀಕ್ಷೆ ಮಾಡಿದ್ಯಾ?.”
“ತಿರಗ ಬರಬವುದು ಅನ್ನಕಂಡಿದ್ದೆ.”
“ಹ್ಯಂಗೇ.”
” ಮನೇಲಿ ಕುತಗಂಡು ಟಿವಿ ನೋಡಿ ನೋಡಿ ಅಂಗಂದಿದ್ದ. ಟಿವಿಲಿರೋ ಹಾದರಕ್ಕುಟ್ಟಿದ ನನ್ನ ಮಕ್ಕಳು ದ್ಯಾವೇಗೌಡನ ಅಭಿಮಾನಿ ಸಿದ್ದೇಗೌಡನ್ನೇ ಬದ್ಲಾಸಿದ್ರು ಅಂದ್ರೆ ಇನ್ನೇನೇಳನಾ.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...