Homeಅಂಕಣಗಳುಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಅವರವುರ ತಲೆ ಮ್ಯಾಲೆ ಅವರವುರೇ ಕಲ್ಲಾಕಂಡ್ರು ಸಾ!

ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು

- Advertisement -
- Advertisement -

| ಯಾಹೂ |

ಬಿಜೆಪಿ ಗಳಿಸಿದ ಬಹುಮತಕ್ಕೆ ದೇಶದ ಬುದ್ದಿಜೀವಿಗಳು ಬೆಚ್ಚಿ ಬಿದ್ದಿದ್ದಾರೆ. ಸಾಮಾನ್ಯ ಪ್ರಜೆ ತನ್ನ ಕೆಲಸ ಮುಗಿಸಿದಂತೆ ಸಮಾಧಾನದಿಂದಿದ್ದಾನೆ. ಆದರೆ ಚೆಡ್ಡಿಗಳ ತುರಿಕೆ ಚೇಷ್ಟೆಯನ್ನು ಗ್ರಹಿಸಿದವರು ಈ ದೇಶಕ್ಕೆ ಏನು ಕಾದಿದೆಯೋ ಎಂದು ಹೆದರಿ ಹೋಗಿದ್ದಾರಲ್ಲಾ. ಈ ಸಮಯದಲ್ಲಿ ಬಹು ಗಂಭೀರವಾಗಿ ಚಿಂತಿಸುವುದರ ಬದಲು ನಮ್ಮ ವಾಟಿಸ್ಸೆಗೆ ಫೋನ್ ಮಾಡಿ ಮನಸ್ಸನ್ನು ಹಗುರ ಮಾಡಿಕೊಳ್ಳಬೇಕೆನಿಸಿತು. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು.
ರಿಂಗ್ ಟೋನ್: ಏನು ಮಾಡಿ ಏನು ಬಂತಣ್ಣ, ನಾವೆಲ್ಲ ಕೂಡಿ ಏನು ಮಾಡಿ ಏನು ಬಂತಣ್ಣಾ…..
“ಗುಡ್‍ಮಾರ್ನಿಂಗು ಸಾ.”
“ವಾಟಿಸ್ಸೆ ಎಲ್ಲಿದ್ದೀ.”
“ಇನ್ನೆಲ್ಲಿರನ ಸಾರ್, ಕತ್ತಿಗೆ ಬೇಜಾರಾದ್ರೆ ಹಾಳು ಗ್ವಾಡೆ ಅಂತ ಊರಲ್ಲಿದೀನಿ.”
“ಯಂಗಿದೆ ಊರು.”
“144 ಸೆಕ್ಷೆನ್ ಹಾಕಿದಂಗದೆ.”
“ಯಾಕೆ?”
“ಅಂಥಾ ಬಿಸ್ಲು ಸಾರ್, ಈ ಬಿಸ್ಲು ನೋಡಿ ಮುಂದ್ಲೊರಸಕೂ ಇರಬೇಕಾ ಅನ್ನಿಸಿದೆ.”
“ನಿನ್ನಂಥವನಿಗೆ ಅಂಗನ್ನಸಬಾರ್ದು.”
“ನನ್ನಂಥವುನು ಅಂದ್ರೇನು ಸಾ.”
“ಭಾರತವನ್ನೇ ಬದಲಾಯ್ಸೊ ಶ್ರೀಸಾಮಾನ್ಯ ಅಂತ.”
“ಶ್ರೀಸಾಮಾನ್ಯ ಇನ್ನ ಯಾರ ಮಾತ್ನೂ ಕೇಳದಿಲ್ಲ, ಯಾರಿಗೂ ಸಿಗದಿಲ್ಲ ಸಾ.”
“ಅದನ್ನ ರಾಜಕಾರಣಿಗಳು ಅರ್ಥ ಮಾಡಿಕಳ್ಳಿಲ್ಲವಲ್ಲ ಹೇಳು.”
“ಈಗದೆ ಆಯ್ತಾ ಅದೆ ಸಾ. ಈ ಸಿದ್ರಾಮಯ್ಯ ದ್ಯಾವೇಗೌಡ ಇವುರಿಗ್ಯಲ್ಲ ಈಗರ್ಥ ಆಯ್ತ ಅದೆ.”
“ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ದೇಸದ ಕತೆ ಏನಾರ ಆಗ್ಲಿ. ನಮ್ಮ ಸುಮಲತ ಗೆದ್ಲಲ್ಲ ಸಾ.”
“ಸುಮಲತನ ಗೆಲುವ ಅಷ್ಟು ಸೀರಿಯಸ್ಸಾಗಿ ತಗಂಡಿದ್ಯಾ?”
“ಊ ಸಾ. ನಮ್ಮ ಅಳಿವು ಉಳಿವಿನ ಪ್ರಶ್ನೆ ಆಗಿತ್ತು.”
“ಅಷ್ಟ್ ಗಂಭೀರವಾಗಿತ್ತ.”
“ಅಲ್ವೆ ಮತ್ತೆ, ಅದೆಲ್ಲೊ ಬಾರಲ್ಲಿ ಕುತಗಂಡು ಚಿಲ್ಡ್ ಬೀರು ಕುಡೀತಿದ್ದ ಹುಡುಗನ್ನ ತಂದು ಮಂಡ್ಯಕ್ಕೆ ನಿಲ್ಸಿದ್ರಲ್ಲ. ಇವರಿಗೆ ಎಷ್ಟು ಧೈರ್ಯ ಇರಬೇಕು. ಮಂಡ್ಯ ಜಿಲ್ಲೇನ ಏನನ್ನಕಂಡಿದ್ರು ಸಾ.”
“ಸರಿಯಾದ ಉತ್ರ ಕೊಟ್ರಲ್ಲ ಬುಡಿ.”
“ಬುಡದಲ್ಲ ಸಾ. ದ್ಯಾವೇಗೌಡ್ರು ಅಷ್ಟು ಸುಲಭಕ್ಕೆ ಏನ್ನೂ ಬುಡದಿಲ್ಲ. ಆ ಹುಡುಗನ್ನ ಅಲ್ಲೇ ಇರು ಅಂದುಬುಡ್ತರೆ.”
“ಹಾಗಂತೀಯಾ.”
“ಇತಿಹಾಸ ನೋಡಿಲ್ವಾ ಸಾ. ದ್ಯಾವೇಗೌಡ್ರು ಚುನಾವಣೆಯ ಸೋಲು ಗೆಲುವಿಗೆ ಹೆದರಿದೋರಲ್ಲ. ನಿನ್ನ ಭಾಗಕ್ಕೆ ಮಂಡ್ಯ ಕೊಟ್ಟಿದೀವಿ, ನೀನಲ್ಲೇ ಇರು ಅಂದು ಬುಡ್ತರೆ. ಇದು ನೋಡಿದ್ರೆ ಹೈಲು ಪೈಲುಡುಗ ಮಂಡ್ಯ ಜಿಲ್ಲೆಯನ್ನೆ ಹುಚ್ಚಾಸ್ಪತ್ರೆ ಮಾಡಿಬುಡ್ತನೆ.”
“ಏನೇ ಆದ್ರು ಮಂಡ್ಯದ ಜನಗಳು ಸ್ವಾಭಿಮಾನಿಗಳು ಬುಡು.”
“ಅದು ಜಗತ್ತಿಗೇ ಗೊತ್ತಾಯ್ತು ಸಾ.”
“ಜಗತ್ತಿಗೇ ಗೊತ್ತಾಯ್ತಾ.”
“ಊ ಸಾ. ಅಂಬರೀಶ್‍ಗೆ ಪ್ರಪಂಚದಲ್ಯಲ್ಲ ಸ್ನೇಹಿತರಿದ್ರು, ಪರಿಚಯ ಮಾಡಿಕ್ಯಳದು, ಪಾರ್ಟಿ ಕೊಡದು, ಮುಂದ್ಲು ದೇಸುಕೆ ಹೋಯ್ತಾಯಿರದ. ಅಂಗೆ ದುಬಾಯಿ, ಕುವೈತ್, ಮಸ್ಕಟ್, ಅಮೇರಿಕದಲ್ಯಲ್ಲ ಪ್ರೆಂಡ್ಸಿದ್ರು. ಅವುರ್ಯಲ್ಲ ಮಂಡ್ಯದ ಜನ ಏನು ಮಾಡ್ತರೆ ಅಂತ ನೋಡ್ತಿದ್ರು.”
“ರಾಜ್ಯದ ಚುನಾವಣೆ ರಿಜಲ್ಟ್ ಬಗ್ಗೆ ಏನೇಳ್ತಿ.”
“ಹೇಳದೇನು ಸಾ. ಯಲ್ಲ ಮುಗಿತಲ್ಲ ಬುಡಿ.”
“ಮುಗೀತು ಅಂತೀಯಾ.”
“ಇನ್ನೇನು ಸಾ. ಬಿಜೆಪಿ ತಲೆಮ್ಯಾಲೆ ಕಲ್ಲಾಕಕ್ಕೆ ಇವುರಿಬ್ರೂ ಒಂದಾಗಿ ಸೈಜಗಲ್ಲ ಹೊತ್ತಗಂಡು ನಿಂತಿದ್ರು. ಅವುರಿಗೆ ಗೊತ್ತಿಲ್ಲದಂಗೆ ಅವುರವುರ ಮ್ಯಾಲೆ ಹಾಯ್ಕಂಡ್ರು ಸಾ.”
“ಏನಂದೆ.”
“ಕಾಂಗ್ರೆಸ್ ತಲೆಮ್ಯಾಲೆ ಜೆಡಿಎಸ್ ಕಲ್ಲು ಬಿತ್ತು, ಜೆಡಿಎಸ್ ತಲೆಮ್ಯಾಲೆ ಕಾಂಗ್ರೆಸ್ ಕಲ್ಲು ಬಿತ್ತು. ಬಿಜೆಪಿ ನನ ಮಕ್ಕಳು ಸೇಪಾಗಿ ಡೆಲ್ಲಿಗೋದ್ರು.”
“ಅವುರ ನಡುವೆ ಅಷ್ಟು ದ್ವೇಶ ಇತ್ತ.”
“ಇತ್ತು ಸಾ, ಸತತವಾಗಿ ಒಂದೊರ್ಸ ಜಗಳಾಡ್ಯವುರೆ, ಹರಿಯ ಮುರಿಯ ಜಗಳಾಡಿಕಂಡು ಚುನಾವಣೆ ಬಂದೇಟಿಗೆ ತ್ಯಕ್ಕೆ ಬಡಕಂಡು, ನಾವಿಬ್ರು ಒಂದು ಅಂತ ಜನಗಳೆದ್ರಿಗೆ ಹೋಗಿ ನಿಂತ್ರೆ ಜನ ನಗದಿಲವಾ.”
“ಇದೊಂತರ ವಳೇಟು ಅಂಗರೆ.”
“ಓಟು ಮಾಡದೇ ವಳೇಟು ಕೊಡಕ್ಕಲವೆ, ಆಗೊಂದು ಸತಿ ಮಂಡ್ಯದಲ್ಲಿ ಉಪ ಚುನಾವಣೆ ಬತ್ತು. ದಿಢೀರಂತ ಕುಮಾರಸ್ವಾಮಿನೂ ಎಡೂರಪ್ಪನೂ ಗಬುಕ್ಕಂತ ತಬ್ಬಿಕಂಡು ಮುತ್ತು ಕೊಟ್ರು. ಜನ ಪುಟ್ಟರಾಜನ್ನ ಸೋಲಿಸಿ ರಮ್ಯನ್ನ ಗೆಲ್ಲಿಸಿದ್ರು, ಗೊತ್ತ ಸಾ.”
“ಗೊತ್ತು. ಜನ ಅಕ್ರಮ ಸಮಂದ ಸಹಿಸಲ್ಲ ಅಲವೆ.”
“ಸಮಂದ ಮಾಡೋರೂ ದೊಡ್ಡ ಮನುಸರಾಗಿರಬೇಕು, ಉದ್ದೇಶ ವಳ್ಳೆದಿರಬೇಕು, ಅಂಗಿದ್ರೆ ಸಯಿಸಿಗತ್ತರೆ ಸಾ.”
“ಮೋದಿ ಈ ತರ ಗೆಲ್ಲದ ನಿರೀಕ್ಷೆ ಮಾಡಿದ್ಯಾ?.”
“ತಿರಗ ಬರಬವುದು ಅನ್ನಕಂಡಿದ್ದೆ.”
“ಹ್ಯಂಗೇ.”
” ಮನೇಲಿ ಕುತಗಂಡು ಟಿವಿ ನೋಡಿ ನೋಡಿ ಅಂಗಂದಿದ್ದ. ಟಿವಿಲಿರೋ ಹಾದರಕ್ಕುಟ್ಟಿದ ನನ್ನ ಮಕ್ಕಳು ದ್ಯಾವೇಗೌಡನ ಅಭಿಮಾನಿ ಸಿದ್ದೇಗೌಡನ್ನೇ ಬದ್ಲಾಸಿದ್ರು ಅಂದ್ರೆ ಇನ್ನೇನೇಳನಾ.”
“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...