Homeಮುಖಪುಟರಂಗೇರಿದ ಉಪಸಮರ: ಎಚ್‌ಡಿಕೆ- ಡಿ.ಕೆ.ಶಿವಕುಮಾರ್‌ ವಾಕ್ಸಮರ

ರಂಗೇರಿದ ಉಪಸಮರ: ಎಚ್‌ಡಿಕೆ- ಡಿ.ಕೆ.ಶಿವಕುಮಾರ್‌ ವಾಕ್ಸಮರ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಚ್‌ಡಿಕೆ ಅವರ ಸರಣಿ ಟ್ವೀಟ್ ಬಳಿಕ ಡಿ.ಕೆ.ಶಿವಕುಮಾರ್‌ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -
- Advertisement -

ಹಾನಗಲ್‌, ಸಿಂಧಗಿ ಉಪಚುನಾವಣೆ ರಂಗೇರಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ವಾಕ್ಸಮರ ತಾರಕ್ಕೇರುತ್ತಿದೆ. ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಸಿಂಧಗಿ ಶಾಸಕ ಎಂ.ಸಿ.ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಚ್‌ಡಿಕೆ ಅವರ ಸರಣಿ ಟ್ವೀಟ್ ಬಳಿಕ ಡಿ.ಕೆ.ಶಿವಕುಮಾರ್‌ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಎಚ್‌ಡಿಕೆ ತಿರುಗೇಟು

“ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ” ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

“ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ! ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹಾಗಾದರೆ, ಮನಗೂಳಿ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ʼಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆʼ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ ಎಂದು ದೂರಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ’ ಎಂದು ಎಚ್‌ಡಿಕೆ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್‌ ಸಮರ್ಥನೆ

ಎಚ್‌.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, “ಎಂ.ಸಿ. ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ಸತ್ಯ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಶೋಕ್ ಅವರು ನಮ್ಮ ಅಭ್ಯರ್ಥಿ. ಎಂ.ಸಿ. ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರವನ್ನು ಬಹಿರಂಗವಾಗಿ ಹೇಳಿದ್ದೇನೆ. ನಾನು ಮಾತ್ರವಲ್ಲ ಸಿದ್ದರಾಮಯ್ಯ ಕೂಡ ಈ ಪ್ರಸ್ತಾಪಿಸಿದ್ದಾರೆ. ನಾವು ಈ ವಿಚಾರದಲ್ಲಿ ಯಾಕೆ ಸುಳ್ಳು ಹೇಳಬೇಕು? 15 ದಿನಗಳ ಹಿಂದೆ ಭೇಟಿ ಮಾಡಿದ್ದರು ಅಂದರೆ ಕ್ಯಾಲೆಂಡರ್ ತೆಗೆದುಕೊಂಡು ಲೆಕ್ಕಹಾಕಿ ಹೇಳಿಲ್ಲ. ಅವರು ಸಾಯುವ ಸ್ವಲ್ಪ ದಿನಗಳ ಮೊದಲು ಭೇಟಿ ಮಾಡಿದ್ದರು. ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್‌ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ.‌ ಆ ನೋವಿನಿಂದ ಮಾತನಾಡಿದ್ದಾರೆ. ಅದಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ನಾವು ಯಾರನ್ನೂ ಹೈಜಾಕ್ ಮಾಡುವುದಿಲ್ಲ. ನಮ್ಮಲ್ಲಿ ಸಾಕಷ್ಟು ಸಂಖ್ಯಾಬಲ ಇದೆ. ನಮ್ಮ ಪಕ್ಷಕ್ಕೆ ಸ್ವ ಇಚ್ಛೆಯಿಂದ ಬರುವವರನ್ನು ನಾವು ಬೇಡ ಎನ್ನುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.

‘ರಾಜಕಾರಣ ನಿಂತ ನೀರಲ್ಲ ಎಂದು ಕುಮಾರಣ್ಣ ಅವರೇ ಹೇಳಿದ್ದಾರೆ. ಕೆಲವರು ಬಿಜೆಪಿಗೆ ಹೋಗಲು ಸಿದ್ಧರಿರುತ್ತಾರೆ. 17 ಜನ ಸಂಸದರು ಗೆದ್ದು, ದೇವೇಗೌಡರು ದೇಶದ ಪ್ರಧಾನಿ ಆದಾಗ, ನಾವು ಅವರನ್ನು ಹೈಜಾಕ್ ಮಾಡಿ ಕರೆದುಕೊಂಡು ಬಂದಿದ್ದೆವಾ? ಒಂದಲ್ಲಾ ಒಂದು ಕಾರಣದಿಂದ ಬರುವವರು ಬರುತ್ತಾರೆ. ಈ ಹಿಂದೆ ಅನೇಕ ನಾಯಕರು ಕೂಡ ಅವರ ಜತೆ ರಾಜಕೀಯ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್‌ಗೆ ಬಂದಿದ್ದರು. ಅದೇ ರೀತಿ ಮನಗೂಳಿ ಅವರು ಸಾಯುವ ಮುನ್ನ ನನ್ನನ್ನು ಭೇಟಿ ಮಾಡಿದ್ದು ನಿಜ. ಆಗ ಅವರ ಪುತ್ರ ಅಶೋಕ್ ಅವರು ಇದ್ದದ್ದೂ ನಿಜ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಬಿಜೆಪಿ ನಾಯಕರ ಕಾರು ಪಕ್ಕದಲ್ಲಿ ಹೋಗುವಾಗ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...