Homeಮುಖಪುಟಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದೆ. ಪ್ರಮುಖ ಪಕ್ಷಗಳ ಟಿಕೆಟ್‌ಗಾಗಿ ದೊಡ್ಡ ಕೋಲಾಹಲವೇ ಏರ್ಪಟ್ಟಿತ್ತು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದ್ದು, 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಮಂಗಳೂರು ಉತ್ತರ, ಚಿತ್ರದುರ್ಗ, ಮೂಡಿಗೆರೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿಯೇ ಈ ವಲಸೆ ನಡೆದಿದೆ. ಆ ಪಟ್ಟಿ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದಾರೆ.

2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದ್ದಾರೆ.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

6. ವರುಣ: ಭಾರತೀ ಶಂಕರ್

7. ಅರಕಲಗೂಡು: ಎ.ಮಂಜು

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪ

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ

11. ಯಾದಗಿರಿ: ಎ.ಬಿ ಮಲಕರೆಡ್ಡಿ

12. ಶಹಾಪುರ: ಗುರುಲಿಂಗಪ್ಪ ಗೌಡ

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್

14. ಕಾರವಾರ: ಚೈತ್ರ ಕೋಟೇಕಾರ್

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಉಲ್ಲಾರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು.

4. ಬಳ್ಳಾರಿ ನಗರ: ಅನಿಲ್ ಲಾಡ್

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ

7. ಹಾನಗಲ್: ಮನೋಹರ್ ತಹಸೀಲ್ದಾರ್

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿ

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ

11. ರಾಯಬಾಗ: ಪ್ರದೀಪ್ ಮಾಳಗಿ

12. ಕುಡಚಿ: ಆನಂದ್ ಮಾಳಗಿ

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ

ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....