Homeಮುಖಪುಟಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಸಿಂಧಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಂಗೇರಿದೆ. ಸಿಂಧಗಿ ಕ್ಷೇತ್ರಕ್ಕೆ ನಾಜಿಯಾ ಶಕೀಲಾ ಅಂಗಡಿ ಅವರನ್ನು, ಹಾನಗಲ್ ಕ್ಷೇತ್ರಕ್ಕೆ ನಿಯಾಜ್ ಶೇಕ್ ಅವರನ್ನು ಜೆಡಿಎಸ್‌ ಕಣಕ್ಕಿಳಿಸಿದ್ದು, “ಮುಸ್ಲಿಂ ಮತಗಳನ್ನು ಒಡೆದು ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ ಯತ್ನಿಸಿದೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ. ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ’ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಸಿಂಧಗಿಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್, ಅಶೋಕ್‌ ಮನಗೂಳಿ ಅವರನ್ನು ಆಯ್ಕೆ ಮಾಡಿದೆ. ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಆಕಾಂಕ್ಷಿಗಳು. ನಾವು ಯಾರಿಗೆ ಟಿಕೆಟ್‌ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. 2–3 ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ’  ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಆರೋಪಕ್ಕೆ ಎಚ್‌ಡಿಕೆ ಪ್ರತಿಕ್ರಿಯೆ

ಸಿಂಧಗಿ, ಹಾನಗಲ್ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಚುನಾವಣೆಯಲ್ಲಿ ಯಾರಿಗಾದರೂ ಟಿಕೆಟ್ ಕೊಡುವುದು ಬಿಡುವುದು ನಮ್ಮ ಪಕ್ಷದ ಆಂತರಿಕ ವಿಚಾರ. ಅವರಿಗೆ ಟಿಕೆಟ್ ಕೊಡಿ, ಇವರಿಗೆ ಟಿಕೆಟ್ ಕೊಡಿ ಎಂದು ಹೇಳಲು ಸಿದ್ದರಾಮಯ್ಯ ಯಾರು? ಹೂ ಈಸ್ ಸಿದ್ದರಾಮಯ್ಯ?” ಎಂದಿದ್ದಾರೆ.

“ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇದು ನಮ್ಮ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ಇದು ನಮ್ಮ ನಿಲುವೂ ಕೂಡ. ಈ ಉಸಾಬರಿ ಸಿದ್ದರಾಮಯ್ಯ ಅವರಿಗೆ ಏಕೆ?” ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಅಭ್ಯರ್ಥಿ ಹಾಕಿದರೆ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಅಂತ ಆರೋಪ ಮಾಡುತ್ತಾರೆ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಜತೆ ಕೈ ಜೋಡಿಸಿದ್ದಾರೆ ಅನ್ನುತ್ತಾರೆ. ಓಬಿಸಿ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಹೊರಟಿದ್ದಾರೆ ಎನ್ನುತ್ತಾರೆ. ಹಾಗಾದರೆ ನಾವು ಯಾರನ್ನು ಅಭ್ಯರ್ಥಿ ಮಾಡಬೇಕು? ಬೇರೆಯವರ ಮರ್ಜಿಗೆ ತಕ್ಕಂತೆ ನಾವು ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕೆ? ಎಂದು ಕೇಳಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಟಿಕೆಟ್ ಕೊಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಆ ಸಮುದಾಯಕ್ಕೆ 20ಕ್ಕೂ ಹೆಚ್ಚು ಟಿಕೆಟ್ ನೀಡುತ್ತೇವೆ. ಯಾರನ್ನು ಅಭ್ಯರ್ಥಿ ಮಾಡಬೇಕು? ಮಾಡಬಾರದು? ಎನ್ನುವುದು ನಮ್ಮ ವಿವೇಚನೆ. ನಮಗೆ ಹಾಗೆ ಮಾಡಿ, ಹೀಗೆ ಮಾಡಿ ಎಂದು ಹೇಳುವುದಕ್ಕೆ ಸಿದ್ದರಾಮಯ್ಯ ಯಾರು ಎಂದಿದ್ದಾರೆ.

ಜಾತಿ ರಾಜಕೀಯ ಮಾಡಬಾರದು ಅಂತ ಅದೇ ಕಾಂಗ್ರೆಸ್ ಪಕ್ಷದವರೇ ಹೇಳುತ್ತಾರೆ. ಇವರು ನೋಡಿದರೆ ಮಾಡೋದು ಜಾತಿ ರಾಜಕೀಯವನ್ನೇ. ಒಕ್ಕಲಿಗ ಸಮುದಾಯದವರು ನಮ್ಮನ್ನು ಕೈ ಬಿಡೋದಿಲ್ಲ. ಇದು ಅವರಿಗೆ ಗೊತ್ತಿರಲಿ. ಈಗ ಮತ್ತೆ ನಮ್ಮ ಸಮುದಾಯದ ನಾಯಕರನ್ನು ಹೈಜಾಕ್ ಮಾಡಲು ಹೊರಟಿದ್ದಾರಲ್ಲ? ಅದನ್ನು ಏನಂತಾರೆ ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...