Homeಮುಖಪುಟಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಸಿಂಧಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಂಗೇರಿದೆ. ಸಿಂಧಗಿ ಕ್ಷೇತ್ರಕ್ಕೆ ನಾಜಿಯಾ ಶಕೀಲಾ ಅಂಗಡಿ ಅವರನ್ನು, ಹಾನಗಲ್ ಕ್ಷೇತ್ರಕ್ಕೆ ನಿಯಾಜ್ ಶೇಕ್ ಅವರನ್ನು ಜೆಡಿಎಸ್‌ ಕಣಕ್ಕಿಳಿಸಿದ್ದು, “ಮುಸ್ಲಿಂ ಮತಗಳನ್ನು ಒಡೆದು ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ ಯತ್ನಿಸಿದೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ. ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ’ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಸಿಂಧಗಿಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್, ಅಶೋಕ್‌ ಮನಗೂಳಿ ಅವರನ್ನು ಆಯ್ಕೆ ಮಾಡಿದೆ. ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಆಕಾಂಕ್ಷಿಗಳು. ನಾವು ಯಾರಿಗೆ ಟಿಕೆಟ್‌ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. 2–3 ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ’  ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಆರೋಪಕ್ಕೆ ಎಚ್‌ಡಿಕೆ ಪ್ರತಿಕ್ರಿಯೆ

ಸಿಂಧಗಿ, ಹಾನಗಲ್ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಚುನಾವಣೆಯಲ್ಲಿ ಯಾರಿಗಾದರೂ ಟಿಕೆಟ್ ಕೊಡುವುದು ಬಿಡುವುದು ನಮ್ಮ ಪಕ್ಷದ ಆಂತರಿಕ ವಿಚಾರ. ಅವರಿಗೆ ಟಿಕೆಟ್ ಕೊಡಿ, ಇವರಿಗೆ ಟಿಕೆಟ್ ಕೊಡಿ ಎಂದು ಹೇಳಲು ಸಿದ್ದರಾಮಯ್ಯ ಯಾರು? ಹೂ ಈಸ್ ಸಿದ್ದರಾಮಯ್ಯ?” ಎಂದಿದ್ದಾರೆ.

“ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇದು ನಮ್ಮ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ಇದು ನಮ್ಮ ನಿಲುವೂ ಕೂಡ. ಈ ಉಸಾಬರಿ ಸಿದ್ದರಾಮಯ್ಯ ಅವರಿಗೆ ಏಕೆ?” ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಅಭ್ಯರ್ಥಿ ಹಾಕಿದರೆ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಅಂತ ಆರೋಪ ಮಾಡುತ್ತಾರೆ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಜತೆ ಕೈ ಜೋಡಿಸಿದ್ದಾರೆ ಅನ್ನುತ್ತಾರೆ. ಓಬಿಸಿ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಹೊರಟಿದ್ದಾರೆ ಎನ್ನುತ್ತಾರೆ. ಹಾಗಾದರೆ ನಾವು ಯಾರನ್ನು ಅಭ್ಯರ್ಥಿ ಮಾಡಬೇಕು? ಬೇರೆಯವರ ಮರ್ಜಿಗೆ ತಕ್ಕಂತೆ ನಾವು ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕೆ? ಎಂದು ಕೇಳಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಟಿಕೆಟ್ ಕೊಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಆ ಸಮುದಾಯಕ್ಕೆ 20ಕ್ಕೂ ಹೆಚ್ಚು ಟಿಕೆಟ್ ನೀಡುತ್ತೇವೆ. ಯಾರನ್ನು ಅಭ್ಯರ್ಥಿ ಮಾಡಬೇಕು? ಮಾಡಬಾರದು? ಎನ್ನುವುದು ನಮ್ಮ ವಿವೇಚನೆ. ನಮಗೆ ಹಾಗೆ ಮಾಡಿ, ಹೀಗೆ ಮಾಡಿ ಎಂದು ಹೇಳುವುದಕ್ಕೆ ಸಿದ್ದರಾಮಯ್ಯ ಯಾರು ಎಂದಿದ್ದಾರೆ.

ಜಾತಿ ರಾಜಕೀಯ ಮಾಡಬಾರದು ಅಂತ ಅದೇ ಕಾಂಗ್ರೆಸ್ ಪಕ್ಷದವರೇ ಹೇಳುತ್ತಾರೆ. ಇವರು ನೋಡಿದರೆ ಮಾಡೋದು ಜಾತಿ ರಾಜಕೀಯವನ್ನೇ. ಒಕ್ಕಲಿಗ ಸಮುದಾಯದವರು ನಮ್ಮನ್ನು ಕೈ ಬಿಡೋದಿಲ್ಲ. ಇದು ಅವರಿಗೆ ಗೊತ್ತಿರಲಿ. ಈಗ ಮತ್ತೆ ನಮ್ಮ ಸಮುದಾಯದ ನಾಯಕರನ್ನು ಹೈಜಾಕ್ ಮಾಡಲು ಹೊರಟಿದ್ದಾರಲ್ಲ? ಅದನ್ನು ಏನಂತಾರೆ ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...