Homeಮುಖಪುಟಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಸಿಂಧಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಂಗೇರಿದೆ. ಸಿಂಧಗಿ ಕ್ಷೇತ್ರಕ್ಕೆ ನಾಜಿಯಾ ಶಕೀಲಾ ಅಂಗಡಿ ಅವರನ್ನು, ಹಾನಗಲ್ ಕ್ಷೇತ್ರಕ್ಕೆ ನಿಯಾಜ್ ಶೇಕ್ ಅವರನ್ನು ಜೆಡಿಎಸ್‌ ಕಣಕ್ಕಿಳಿಸಿದ್ದು, “ಮುಸ್ಲಿಂ ಮತಗಳನ್ನು ಒಡೆದು ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ ಯತ್ನಿಸಿದೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ. ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ’ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಸಿಂಧಗಿಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್, ಅಶೋಕ್‌ ಮನಗೂಳಿ ಅವರನ್ನು ಆಯ್ಕೆ ಮಾಡಿದೆ. ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಆಕಾಂಕ್ಷಿಗಳು. ನಾವು ಯಾರಿಗೆ ಟಿಕೆಟ್‌ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. 2–3 ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ’  ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಆರೋಪಕ್ಕೆ ಎಚ್‌ಡಿಕೆ ಪ್ರತಿಕ್ರಿಯೆ

ಸಿಂಧಗಿ, ಹಾನಗಲ್ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಚುನಾವಣೆಯಲ್ಲಿ ಯಾರಿಗಾದರೂ ಟಿಕೆಟ್ ಕೊಡುವುದು ಬಿಡುವುದು ನಮ್ಮ ಪಕ್ಷದ ಆಂತರಿಕ ವಿಚಾರ. ಅವರಿಗೆ ಟಿಕೆಟ್ ಕೊಡಿ, ಇವರಿಗೆ ಟಿಕೆಟ್ ಕೊಡಿ ಎಂದು ಹೇಳಲು ಸಿದ್ದರಾಮಯ್ಯ ಯಾರು? ಹೂ ಈಸ್ ಸಿದ್ದರಾಮಯ್ಯ?” ಎಂದಿದ್ದಾರೆ.

“ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇದು ನಮ್ಮ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ಇದು ನಮ್ಮ ನಿಲುವೂ ಕೂಡ. ಈ ಉಸಾಬರಿ ಸಿದ್ದರಾಮಯ್ಯ ಅವರಿಗೆ ಏಕೆ?” ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಅಭ್ಯರ್ಥಿ ಹಾಕಿದರೆ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಅಂತ ಆರೋಪ ಮಾಡುತ್ತಾರೆ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಜತೆ ಕೈ ಜೋಡಿಸಿದ್ದಾರೆ ಅನ್ನುತ್ತಾರೆ. ಓಬಿಸಿ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಹೊರಟಿದ್ದಾರೆ ಎನ್ನುತ್ತಾರೆ. ಹಾಗಾದರೆ ನಾವು ಯಾರನ್ನು ಅಭ್ಯರ್ಥಿ ಮಾಡಬೇಕು? ಬೇರೆಯವರ ಮರ್ಜಿಗೆ ತಕ್ಕಂತೆ ನಾವು ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕೆ? ಎಂದು ಕೇಳಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಟಿಕೆಟ್ ಕೊಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಆ ಸಮುದಾಯಕ್ಕೆ 20ಕ್ಕೂ ಹೆಚ್ಚು ಟಿಕೆಟ್ ನೀಡುತ್ತೇವೆ. ಯಾರನ್ನು ಅಭ್ಯರ್ಥಿ ಮಾಡಬೇಕು? ಮಾಡಬಾರದು? ಎನ್ನುವುದು ನಮ್ಮ ವಿವೇಚನೆ. ನಮಗೆ ಹಾಗೆ ಮಾಡಿ, ಹೀಗೆ ಮಾಡಿ ಎಂದು ಹೇಳುವುದಕ್ಕೆ ಸಿದ್ದರಾಮಯ್ಯ ಯಾರು ಎಂದಿದ್ದಾರೆ.

ಜಾತಿ ರಾಜಕೀಯ ಮಾಡಬಾರದು ಅಂತ ಅದೇ ಕಾಂಗ್ರೆಸ್ ಪಕ್ಷದವರೇ ಹೇಳುತ್ತಾರೆ. ಇವರು ನೋಡಿದರೆ ಮಾಡೋದು ಜಾತಿ ರಾಜಕೀಯವನ್ನೇ. ಒಕ್ಕಲಿಗ ಸಮುದಾಯದವರು ನಮ್ಮನ್ನು ಕೈ ಬಿಡೋದಿಲ್ಲ. ಇದು ಅವರಿಗೆ ಗೊತ್ತಿರಲಿ. ಈಗ ಮತ್ತೆ ನಮ್ಮ ಸಮುದಾಯದ ನಾಯಕರನ್ನು ಹೈಜಾಕ್ ಮಾಡಲು ಹೊರಟಿದ್ದಾರಲ್ಲ? ಅದನ್ನು ಏನಂತಾರೆ ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...