Homeಕರ್ನಾಟಕಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

ಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

- Advertisement -
- Advertisement -

ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಪಡಿಸಲು ಮುಂದಾಗಿದೆ. ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಅನ್ನು ದುರ್ಬಲಗೊಳಿಸುತ್ತಿರುವ ಮತ್ತು ಶಾಸಕರು ಪಕ್ಷ ತೊರೆಯುತ್ತಿರುವ ಹೊತ್ತಿನಲ್ಲಿ ತಳಮಟ್ಟದ ಸಂಘಟನೆಗೆ ಕಾರ್ಯಯೋಜನೆ ರೂಪಿಸಿ ರಂಗಕ್ಕೆ ಇಳಿದಿದೆ. ವಿಧಾನಸಭಾ ಚುನಾವಣೆ ವೇಳೆ ಅತಂತ್ರಸ್ಥಿತಿ ನಿರ್ಮಾಣಗೊಂಡು ಸರ್ಕಾರ ರಚನೆಗೆ ಬೆಂಬಲ ನೀಡುವ ಸಮಯದಲ್ಲಿ ಎರಡು ಬಾರಿ ತಾನೇ ನಿರ್ಣಾಯಕ ಪಾತ್ರ ವಹಿಸಿರುವುದನ್ನು ನಾವು ನೋಡಿದ್ದೇವೆ. ಅದೇ ಕಾರಣಕ್ಕೆ ಎಚ್.ಡಿ.ಕುಮಾರಸ್ವಾಮಿ ಪದೇಪದೇ ನಾವೇ ಕಿಂಗ್ ಮೇಕರ್ ಎಂದು ಹೇಳಿದ್ದಿದೆ ಮತ್ತು ಕಿಂಗ್ ಮೇಕರ್ ಆಗಿ ಎರಡು ಬಾರಿಯೂ ಹೊರಹೊಮ್ಮಿ ಅಧಿಕಾರ ನಡೆಸಿದರು.

ಕಾಂಗ್ರೆಸ್ ಜೊತೆ ಕೈಜೋಡಿಸಿದ್ದ ಜೆಡಿಎಸ್ ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ತನ್ನ ಒತ್ತಡಕ್ಕೆ ಮಣಿಯದಿದ್ದಾಗ ಬೆಂಬಲ ವಾಪಸ್ ಪಡೆಯಿತು. ರಾತ್ರಿ ಬೆಳಗಾಗುವುದರೊಳಗೆ ಬಿಜೆಪಿ ಜೊತೆ ಕೈಜೋಡಿಸಿದ ಜೆಡಿಎಸ್ ಮುಖ್ಯಮಂತ್ರಿ ಸ್ಥಾನವನ್ನು ತನ್ನದನ್ನಾಗಿಸಿಕೊಂಡಿತು. 20 ತಿಂಗಳ ನಂತರ ಅಧಿಕಾರ ಹಸ್ತಾಂತರದ ವಿವಾದ ಉಂಟಾಗಿ  ಕುಮಾರಸ್ವಾಮಿ ರಾಜಿನಾಮೆ ನೀಡಬೇಕಾಗಿ ಬಂದಿದ್ದು ಇತಿಹಾಶ. ಇದಾಗಿ ಐದು ವರ್ಷಗಳು ಪೂರೈಸಿದ ಮೇಲೆ ಕಾಂಗ್ರೆಸ್ ಪಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಈ ಎರಡು ಸಂದರ್ಭದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸುವ ಹುನ್ನಾರ ನಡೆಯುತ್ತಿದೆ ಎಂಬುದನ್ನು ಬಹಿರಂಗವಾಗಿ ಜೆಡಿಎಸ್ ನಾಯಕರು ಟೀಕಿಸಿದರೂ ಕೂಡ. ಇದೇ ವಿಷಯವನ್ನೇ ಜೆಡಿಎಸ್ ನಾಯಕರು ಪ್ರಮುಖ ವಿಷಯ ಮಾಡಿಕೊಂಡು ರಾಜ್ಯವನ್ನು ಸುತ್ತಿದರು.

ಈಗ ಗ್ರಾಮ ಪಂಚಾಯಿತಿ ಚುನಾವಣೆಗಳು ಎದುರಾಗಿವೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಇವೆ. ಇದಕ್ಕೆ ಸಜ್ಜುಗೊಳ್ಳಲು ಜೆಡಿಎಸ್ ಬೇರೊಂದು ತಂತ್ರವನ್ನು ಹೆಣೆದಂತೆ ಕಾಣುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಪ್ರಭಾವ ಇರುವ ಐವತ್ತು ಕ್ಷೇತ್ರಗಳಲ್ಲಿ ಮೂಲಕಾರ್ಯಕರ್ತರನ್ನು ಭೇಟಿ ಮಾಡಿ ತಳಮಟ್ಟದಲ್ಲಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಹಳೆ ಮೈಸೂರು ಭಾಗದ ಮಂಡ್ಯ, ತುಮಕೂರು, ಚಿಕ್ಕ ಬಳ್ಳಾಪುರ, ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ 50 ಕ್ಷೇತ್ರಗಳಿಗೆ ಕಾರ್ಯತಂತ್ರ ರೂಪಿಸುವ ತಂಡಗಳನ್ನು ಕಳಿಸಿಕೊಡಲಾಗಿದೆ. ಒಂದು ತಂಡದಲ್ಲಿ ಐವತ್ತು ಮಂದಿ ಕಾರ್ಯನಿರ್ವಹಿಸುತ್ತಿದ್ದು ಆ ತಂಡದ ಸದಸ್ಯರು ಪ್ರತಿ ಗ್ರಾಮ ಘಟಕವನ್ನೂ ಭೇಟಿ ಮಾಡಿ ಮಾಹಿತಿ ಸಂಗ್ರಹಿಸುತ್ತಿದೆ.

ಐವತ್ತು ತಂಡಗಳು ನಿರಂತರವಾಗಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಪೋಷಕರು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಅಧ್ಯಕ್ಷರನ್ನು ಭೇಟಿ ಮಾಡಿ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ 50 ಸ್ಥಾನಗಳಲ್ಲಿ ವಿಜಯಪತಾಕೆ ಹಾರಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ತಂಡದ ಸದಸ್ಯರು ವಿಧಾನಸಭಾ ಕ್ಷೇತ್ರದಾದ್ಯಂತ ಸುತ್ತುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವಂತೆ ನೋಡಿಕೊಳ್ಳುವುದು ಮತ್ತು ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ಐವತ್ತು ಕ್ಷೇತ್ರಗಳನ್ನು ಗೆದ್ದುಕೊಳ್ಳುವುದು ಹೇಗೆ ಎಂಬ ಬಗ್ಗೆ ಈ ತಂಡಗಳು ಕಾರ್ಯತಂತ್ರ ರೂಪಿಸುತ್ತಿವೆ ಎಂದು ಜೆಡಿಎಸ್ ಮುಖಂಡರು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಮಾಜಿ ಪ್ರಧಾನಿ ದೇವೇಗೌಡರ ಧ್ವನಿ ಬದಲಾಗಿದೆ. ಪಕ್ಷವನ್ನು ಹೇಗೆ ಕಟ್ಟಬೇಕೆಂಬುದು ನನಗೆ ಗೊತ್ತಿದೆ. ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಸುತ್ತಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತೇನೆ. ನಮ್ಮ ಪಕ್ಷವನ್ನು ಯಾರಿಂದಲೂ ಮುಗಿಸಲು ಆಗುವುದಿಲ್ಲ. ಮುಂದೆಯೂ ಜೆಡಿಎಸ್ ಅಸ್ತಿತ್ವದಲ್ಲಿರುತ್ತದೆ ಎಂದು ಗುಣುಗುತ್ತಿರುವುದನ್ನು ನೋಡುತ್ತಿದ್ದೇವೆ. ಅದೇ ಉದ್ದೇಶದಿಂದ ಪಕ್ಷದ ಸಂಘಟನೆಯೂ ಆಗಬೇಕು. ಪ್ರತಿಯೊಂದು ಚುನಾವಣೆ ಎದುರಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ತಂಡಗಳನ್ನು ಕ್ಷೇತ್ರದಲ್ಲಿ ತಿರುಗಾಡಲು ಜೆಡಿಎಸ್ ಬಿಟ್ಟಿದೆ. ಆದರೆ ಪಕ್ಷ ಈ ಕುರಿತು ಅಧಿಕೃತವಾಗಿ ಈವರೆಗು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಎಲ್ಲಾ 50 ಕ್ಷೇತ್ರಗಳಲ್ಲೂ ಒಂದು ವಾರದಿಂದ ಈ ತಂಡಗಳು ಮುಂದಿನ ಕಾರ್ಯತಂತ್ರ ರೂಪಿಸುತ್ತಿದ್ದು ಪಕ್ಷದ ವರಿಷ್ಟರಿಗೆ ಮಾಹಿತಿ ನೀಡುತ್ತಿವೆ ಎಂದು ತಿಳಿದುಬಂದಿದೆ.

2013ರ ವಿಧಾನಸಭಾ ಚುನಾಯಲ್ಲಿ 40 ಸ್ಥಾನ ಗಳಿಸಿದ್ದ ಜೆಡಿಎಸ್ 2018ರಲ್ಲಿ 37 ಸ್ಥಾನ ಪಡೆದು ಮೂರು ಸ್ಥಾನಗಳನ್ನು ಕಳೆದುಕೊಂಡಿತ್ತು. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಾಲ್ವರು ಶಾಸಕರು ರಾಜಿನಾಮೆ ನೀಡುವಂತಹ ಪರಿಸ್ಥಿತಿ ಬಂತು. ವಿಧಾನ ಪರಿಷತ್ ಸದಸ್ಯ, ರಮೇಶ್ ಬಾಬು ರಾಜಿನಾಮೆ ನೀಡಿದ್ದಾರೆ. ಅವರು ಯಾವ ಪಕ್ಷ ಸೇರುತ್ತಾರೋ ಇನ್ನು ಸ್ಪಷ್ಟವಾಗಿಲ್ಲ. ಹೀಗೆ ಒಬ್ಬೊಬ್ಬರೇ ಪಕ್ಷ ತೊರೆಯುತ್ತಿರುವ ಹಿನ್ನೆಲೆ ಯಲ್ಲಿ ಎಚ್ಚೆತ್ತುಕೊಂಡಿರುವ ಜೆಡಿಎಸ್ ತನ್ನ ಶಾಸಕರನ್ನು ಉಳಿಸಿಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಪಕ್ಷ ಚೇತರಿಕೆಗೆ ಮೊದಲೇ ಕಾರ್ಯಕ್ಷೇತ್ರಕ್ಕೆ ಇಳಿದಿದ್ದಾರೆ.  ಈ ಕಾರ್ಯತಂತ್ರ ವರ್ಕೌಟ್ ಆದರೆ ಮುಂದಿನ ವಿಭಾನಸಭಾ ಚುನಾವಣೆಯ ವೇಳೆಗೆ ಪಕ್ಷ ಬಲಿಷ್ಠಗೊಳ್ಳಲಿದೆ. ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಜೆಡಿಎಸ್ ಪಕ್ಷವನ್ನು ಎಲ್ಲರೂ ಕಡೆಗಣಿಸುತ್ತಿರುವುದರಿಂದ ಈ ವಿಷಯವನ್ನು ಪಕ್ಷದ ಮುಖಂಡರು ಪ್ರತಿಷ್ಟೆ ಯನ್ನಾಗಿ ತೆಗೆದುಕೊಂಡಂತೆ ಕಂಡುಬರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...