Homeಕರ್ನಾಟಕಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

ಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

- Advertisement -
- Advertisement -

ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಪಡಿಸಲು ಮುಂದಾಗಿದೆ. ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಅನ್ನು ದುರ್ಬಲಗೊಳಿಸುತ್ತಿರುವ ಮತ್ತು ಶಾಸಕರು ಪಕ್ಷ ತೊರೆಯುತ್ತಿರುವ ಹೊತ್ತಿನಲ್ಲಿ ತಳಮಟ್ಟದ ಸಂಘಟನೆಗೆ ಕಾರ್ಯಯೋಜನೆ ರೂಪಿಸಿ ರಂಗಕ್ಕೆ ಇಳಿದಿದೆ. ವಿಧಾನಸಭಾ ಚುನಾವಣೆ ವೇಳೆ ಅತಂತ್ರಸ್ಥಿತಿ ನಿರ್ಮಾಣಗೊಂಡು ಸರ್ಕಾರ ರಚನೆಗೆ ಬೆಂಬಲ ನೀಡುವ ಸಮಯದಲ್ಲಿ ಎರಡು ಬಾರಿ ತಾನೇ ನಿರ್ಣಾಯಕ ಪಾತ್ರ ವಹಿಸಿರುವುದನ್ನು ನಾವು ನೋಡಿದ್ದೇವೆ. ಅದೇ ಕಾರಣಕ್ಕೆ ಎಚ್.ಡಿ.ಕುಮಾರಸ್ವಾಮಿ ಪದೇಪದೇ ನಾವೇ ಕಿಂಗ್ ಮೇಕರ್ ಎಂದು ಹೇಳಿದ್ದಿದೆ ಮತ್ತು ಕಿಂಗ್ ಮೇಕರ್ ಆಗಿ ಎರಡು ಬಾರಿಯೂ ಹೊರಹೊಮ್ಮಿ ಅಧಿಕಾರ ನಡೆಸಿದರು.

ಕಾಂಗ್ರೆಸ್ ಜೊತೆ ಕೈಜೋಡಿಸಿದ್ದ ಜೆಡಿಎಸ್ ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ತನ್ನ ಒತ್ತಡಕ್ಕೆ ಮಣಿಯದಿದ್ದಾಗ ಬೆಂಬಲ ವಾಪಸ್ ಪಡೆಯಿತು. ರಾತ್ರಿ ಬೆಳಗಾಗುವುದರೊಳಗೆ ಬಿಜೆಪಿ ಜೊತೆ ಕೈಜೋಡಿಸಿದ ಜೆಡಿಎಸ್ ಮುಖ್ಯಮಂತ್ರಿ ಸ್ಥಾನವನ್ನು ತನ್ನದನ್ನಾಗಿಸಿಕೊಂಡಿತು. 20 ತಿಂಗಳ ನಂತರ ಅಧಿಕಾರ ಹಸ್ತಾಂತರದ ವಿವಾದ ಉಂಟಾಗಿ  ಕುಮಾರಸ್ವಾಮಿ ರಾಜಿನಾಮೆ ನೀಡಬೇಕಾಗಿ ಬಂದಿದ್ದು ಇತಿಹಾಶ. ಇದಾಗಿ ಐದು ವರ್ಷಗಳು ಪೂರೈಸಿದ ಮೇಲೆ ಕಾಂಗ್ರೆಸ್ ಪಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಈ ಎರಡು ಸಂದರ್ಭದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸುವ ಹುನ್ನಾರ ನಡೆಯುತ್ತಿದೆ ಎಂಬುದನ್ನು ಬಹಿರಂಗವಾಗಿ ಜೆಡಿಎಸ್ ನಾಯಕರು ಟೀಕಿಸಿದರೂ ಕೂಡ. ಇದೇ ವಿಷಯವನ್ನೇ ಜೆಡಿಎಸ್ ನಾಯಕರು ಪ್ರಮುಖ ವಿಷಯ ಮಾಡಿಕೊಂಡು ರಾಜ್ಯವನ್ನು ಸುತ್ತಿದರು.

ಈಗ ಗ್ರಾಮ ಪಂಚಾಯಿತಿ ಚುನಾವಣೆಗಳು ಎದುರಾಗಿವೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಇವೆ. ಇದಕ್ಕೆ ಸಜ್ಜುಗೊಳ್ಳಲು ಜೆಡಿಎಸ್ ಬೇರೊಂದು ತಂತ್ರವನ್ನು ಹೆಣೆದಂತೆ ಕಾಣುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಪ್ರಭಾವ ಇರುವ ಐವತ್ತು ಕ್ಷೇತ್ರಗಳಲ್ಲಿ ಮೂಲಕಾರ್ಯಕರ್ತರನ್ನು ಭೇಟಿ ಮಾಡಿ ತಳಮಟ್ಟದಲ್ಲಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಹಳೆ ಮೈಸೂರು ಭಾಗದ ಮಂಡ್ಯ, ತುಮಕೂರು, ಚಿಕ್ಕ ಬಳ್ಳಾಪುರ, ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ 50 ಕ್ಷೇತ್ರಗಳಿಗೆ ಕಾರ್ಯತಂತ್ರ ರೂಪಿಸುವ ತಂಡಗಳನ್ನು ಕಳಿಸಿಕೊಡಲಾಗಿದೆ. ಒಂದು ತಂಡದಲ್ಲಿ ಐವತ್ತು ಮಂದಿ ಕಾರ್ಯನಿರ್ವಹಿಸುತ್ತಿದ್ದು ಆ ತಂಡದ ಸದಸ್ಯರು ಪ್ರತಿ ಗ್ರಾಮ ಘಟಕವನ್ನೂ ಭೇಟಿ ಮಾಡಿ ಮಾಹಿತಿ ಸಂಗ್ರಹಿಸುತ್ತಿದೆ.

ಐವತ್ತು ತಂಡಗಳು ನಿರಂತರವಾಗಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಪೋಷಕರು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಅಧ್ಯಕ್ಷರನ್ನು ಭೇಟಿ ಮಾಡಿ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ 50 ಸ್ಥಾನಗಳಲ್ಲಿ ವಿಜಯಪತಾಕೆ ಹಾರಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ತಂಡದ ಸದಸ್ಯರು ವಿಧಾನಸಭಾ ಕ್ಷೇತ್ರದಾದ್ಯಂತ ಸುತ್ತುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವಂತೆ ನೋಡಿಕೊಳ್ಳುವುದು ಮತ್ತು ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ಐವತ್ತು ಕ್ಷೇತ್ರಗಳನ್ನು ಗೆದ್ದುಕೊಳ್ಳುವುದು ಹೇಗೆ ಎಂಬ ಬಗ್ಗೆ ಈ ತಂಡಗಳು ಕಾರ್ಯತಂತ್ರ ರೂಪಿಸುತ್ತಿವೆ ಎಂದು ಜೆಡಿಎಸ್ ಮುಖಂಡರು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಮಾಜಿ ಪ್ರಧಾನಿ ದೇವೇಗೌಡರ ಧ್ವನಿ ಬದಲಾಗಿದೆ. ಪಕ್ಷವನ್ನು ಹೇಗೆ ಕಟ್ಟಬೇಕೆಂಬುದು ನನಗೆ ಗೊತ್ತಿದೆ. ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಸುತ್ತಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತೇನೆ. ನಮ್ಮ ಪಕ್ಷವನ್ನು ಯಾರಿಂದಲೂ ಮುಗಿಸಲು ಆಗುವುದಿಲ್ಲ. ಮುಂದೆಯೂ ಜೆಡಿಎಸ್ ಅಸ್ತಿತ್ವದಲ್ಲಿರುತ್ತದೆ ಎಂದು ಗುಣುಗುತ್ತಿರುವುದನ್ನು ನೋಡುತ್ತಿದ್ದೇವೆ. ಅದೇ ಉದ್ದೇಶದಿಂದ ಪಕ್ಷದ ಸಂಘಟನೆಯೂ ಆಗಬೇಕು. ಪ್ರತಿಯೊಂದು ಚುನಾವಣೆ ಎದುರಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ತಂಡಗಳನ್ನು ಕ್ಷೇತ್ರದಲ್ಲಿ ತಿರುಗಾಡಲು ಜೆಡಿಎಸ್ ಬಿಟ್ಟಿದೆ. ಆದರೆ ಪಕ್ಷ ಈ ಕುರಿತು ಅಧಿಕೃತವಾಗಿ ಈವರೆಗು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಎಲ್ಲಾ 50 ಕ್ಷೇತ್ರಗಳಲ್ಲೂ ಒಂದು ವಾರದಿಂದ ಈ ತಂಡಗಳು ಮುಂದಿನ ಕಾರ್ಯತಂತ್ರ ರೂಪಿಸುತ್ತಿದ್ದು ಪಕ್ಷದ ವರಿಷ್ಟರಿಗೆ ಮಾಹಿತಿ ನೀಡುತ್ತಿವೆ ಎಂದು ತಿಳಿದುಬಂದಿದೆ.

2013ರ ವಿಧಾನಸಭಾ ಚುನಾಯಲ್ಲಿ 40 ಸ್ಥಾನ ಗಳಿಸಿದ್ದ ಜೆಡಿಎಸ್ 2018ರಲ್ಲಿ 37 ಸ್ಥಾನ ಪಡೆದು ಮೂರು ಸ್ಥಾನಗಳನ್ನು ಕಳೆದುಕೊಂಡಿತ್ತು. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಾಲ್ವರು ಶಾಸಕರು ರಾಜಿನಾಮೆ ನೀಡುವಂತಹ ಪರಿಸ್ಥಿತಿ ಬಂತು. ವಿಧಾನ ಪರಿಷತ್ ಸದಸ್ಯ, ರಮೇಶ್ ಬಾಬು ರಾಜಿನಾಮೆ ನೀಡಿದ್ದಾರೆ. ಅವರು ಯಾವ ಪಕ್ಷ ಸೇರುತ್ತಾರೋ ಇನ್ನು ಸ್ಪಷ್ಟವಾಗಿಲ್ಲ. ಹೀಗೆ ಒಬ್ಬೊಬ್ಬರೇ ಪಕ್ಷ ತೊರೆಯುತ್ತಿರುವ ಹಿನ್ನೆಲೆ ಯಲ್ಲಿ ಎಚ್ಚೆತ್ತುಕೊಂಡಿರುವ ಜೆಡಿಎಸ್ ತನ್ನ ಶಾಸಕರನ್ನು ಉಳಿಸಿಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಪಕ್ಷ ಚೇತರಿಕೆಗೆ ಮೊದಲೇ ಕಾರ್ಯಕ್ಷೇತ್ರಕ್ಕೆ ಇಳಿದಿದ್ದಾರೆ.  ಈ ಕಾರ್ಯತಂತ್ರ ವರ್ಕೌಟ್ ಆದರೆ ಮುಂದಿನ ವಿಭಾನಸಭಾ ಚುನಾವಣೆಯ ವೇಳೆಗೆ ಪಕ್ಷ ಬಲಿಷ್ಠಗೊಳ್ಳಲಿದೆ. ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಜೆಡಿಎಸ್ ಪಕ್ಷವನ್ನು ಎಲ್ಲರೂ ಕಡೆಗಣಿಸುತ್ತಿರುವುದರಿಂದ ಈ ವಿಷಯವನ್ನು ಪಕ್ಷದ ಮುಖಂಡರು ಪ್ರತಿಷ್ಟೆ ಯನ್ನಾಗಿ ತೆಗೆದುಕೊಂಡಂತೆ ಕಂಡುಬರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...