Homeಕರ್ನಾಟಕಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

ಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

- Advertisement -
- Advertisement -

ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಪಡಿಸಲು ಮುಂದಾಗಿದೆ. ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಅನ್ನು ದುರ್ಬಲಗೊಳಿಸುತ್ತಿರುವ ಮತ್ತು ಶಾಸಕರು ಪಕ್ಷ ತೊರೆಯುತ್ತಿರುವ ಹೊತ್ತಿನಲ್ಲಿ ತಳಮಟ್ಟದ ಸಂಘಟನೆಗೆ ಕಾರ್ಯಯೋಜನೆ ರೂಪಿಸಿ ರಂಗಕ್ಕೆ ಇಳಿದಿದೆ. ವಿಧಾನಸಭಾ ಚುನಾವಣೆ ವೇಳೆ ಅತಂತ್ರಸ್ಥಿತಿ ನಿರ್ಮಾಣಗೊಂಡು ಸರ್ಕಾರ ರಚನೆಗೆ ಬೆಂಬಲ ನೀಡುವ ಸಮಯದಲ್ಲಿ ಎರಡು ಬಾರಿ ತಾನೇ ನಿರ್ಣಾಯಕ ಪಾತ್ರ ವಹಿಸಿರುವುದನ್ನು ನಾವು ನೋಡಿದ್ದೇವೆ. ಅದೇ ಕಾರಣಕ್ಕೆ ಎಚ್.ಡಿ.ಕುಮಾರಸ್ವಾಮಿ ಪದೇಪದೇ ನಾವೇ ಕಿಂಗ್ ಮೇಕರ್ ಎಂದು ಹೇಳಿದ್ದಿದೆ ಮತ್ತು ಕಿಂಗ್ ಮೇಕರ್ ಆಗಿ ಎರಡು ಬಾರಿಯೂ ಹೊರಹೊಮ್ಮಿ ಅಧಿಕಾರ ನಡೆಸಿದರು.

ಕಾಂಗ್ರೆಸ್ ಜೊತೆ ಕೈಜೋಡಿಸಿದ್ದ ಜೆಡಿಎಸ್ ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ತನ್ನ ಒತ್ತಡಕ್ಕೆ ಮಣಿಯದಿದ್ದಾಗ ಬೆಂಬಲ ವಾಪಸ್ ಪಡೆಯಿತು. ರಾತ್ರಿ ಬೆಳಗಾಗುವುದರೊಳಗೆ ಬಿಜೆಪಿ ಜೊತೆ ಕೈಜೋಡಿಸಿದ ಜೆಡಿಎಸ್ ಮುಖ್ಯಮಂತ್ರಿ ಸ್ಥಾನವನ್ನು ತನ್ನದನ್ನಾಗಿಸಿಕೊಂಡಿತು. 20 ತಿಂಗಳ ನಂತರ ಅಧಿಕಾರ ಹಸ್ತಾಂತರದ ವಿವಾದ ಉಂಟಾಗಿ  ಕುಮಾರಸ್ವಾಮಿ ರಾಜಿನಾಮೆ ನೀಡಬೇಕಾಗಿ ಬಂದಿದ್ದು ಇತಿಹಾಶ. ಇದಾಗಿ ಐದು ವರ್ಷಗಳು ಪೂರೈಸಿದ ಮೇಲೆ ಕಾಂಗ್ರೆಸ್ ಪಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಈ ಎರಡು ಸಂದರ್ಭದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸುವ ಹುನ್ನಾರ ನಡೆಯುತ್ತಿದೆ ಎಂಬುದನ್ನು ಬಹಿರಂಗವಾಗಿ ಜೆಡಿಎಸ್ ನಾಯಕರು ಟೀಕಿಸಿದರೂ ಕೂಡ. ಇದೇ ವಿಷಯವನ್ನೇ ಜೆಡಿಎಸ್ ನಾಯಕರು ಪ್ರಮುಖ ವಿಷಯ ಮಾಡಿಕೊಂಡು ರಾಜ್ಯವನ್ನು ಸುತ್ತಿದರು.

ಈಗ ಗ್ರಾಮ ಪಂಚಾಯಿತಿ ಚುನಾವಣೆಗಳು ಎದುರಾಗಿವೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಇವೆ. ಇದಕ್ಕೆ ಸಜ್ಜುಗೊಳ್ಳಲು ಜೆಡಿಎಸ್ ಬೇರೊಂದು ತಂತ್ರವನ್ನು ಹೆಣೆದಂತೆ ಕಾಣುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಪ್ರಭಾವ ಇರುವ ಐವತ್ತು ಕ್ಷೇತ್ರಗಳಲ್ಲಿ ಮೂಲಕಾರ್ಯಕರ್ತರನ್ನು ಭೇಟಿ ಮಾಡಿ ತಳಮಟ್ಟದಲ್ಲಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಹಳೆ ಮೈಸೂರು ಭಾಗದ ಮಂಡ್ಯ, ತುಮಕೂರು, ಚಿಕ್ಕ ಬಳ್ಳಾಪುರ, ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ 50 ಕ್ಷೇತ್ರಗಳಿಗೆ ಕಾರ್ಯತಂತ್ರ ರೂಪಿಸುವ ತಂಡಗಳನ್ನು ಕಳಿಸಿಕೊಡಲಾಗಿದೆ. ಒಂದು ತಂಡದಲ್ಲಿ ಐವತ್ತು ಮಂದಿ ಕಾರ್ಯನಿರ್ವಹಿಸುತ್ತಿದ್ದು ಆ ತಂಡದ ಸದಸ್ಯರು ಪ್ರತಿ ಗ್ರಾಮ ಘಟಕವನ್ನೂ ಭೇಟಿ ಮಾಡಿ ಮಾಹಿತಿ ಸಂಗ್ರಹಿಸುತ್ತಿದೆ.

ಐವತ್ತು ತಂಡಗಳು ನಿರಂತರವಾಗಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಪೋಷಕರು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಅಧ್ಯಕ್ಷರನ್ನು ಭೇಟಿ ಮಾಡಿ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ 50 ಸ್ಥಾನಗಳಲ್ಲಿ ವಿಜಯಪತಾಕೆ ಹಾರಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ತಂಡದ ಸದಸ್ಯರು ವಿಧಾನಸಭಾ ಕ್ಷೇತ್ರದಾದ್ಯಂತ ಸುತ್ತುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವಂತೆ ನೋಡಿಕೊಳ್ಳುವುದು ಮತ್ತು ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ಐವತ್ತು ಕ್ಷೇತ್ರಗಳನ್ನು ಗೆದ್ದುಕೊಳ್ಳುವುದು ಹೇಗೆ ಎಂಬ ಬಗ್ಗೆ ಈ ತಂಡಗಳು ಕಾರ್ಯತಂತ್ರ ರೂಪಿಸುತ್ತಿವೆ ಎಂದು ಜೆಡಿಎಸ್ ಮುಖಂಡರು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಮಾಜಿ ಪ್ರಧಾನಿ ದೇವೇಗೌಡರ ಧ್ವನಿ ಬದಲಾಗಿದೆ. ಪಕ್ಷವನ್ನು ಹೇಗೆ ಕಟ್ಟಬೇಕೆಂಬುದು ನನಗೆ ಗೊತ್ತಿದೆ. ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಸುತ್ತಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತೇನೆ. ನಮ್ಮ ಪಕ್ಷವನ್ನು ಯಾರಿಂದಲೂ ಮುಗಿಸಲು ಆಗುವುದಿಲ್ಲ. ಮುಂದೆಯೂ ಜೆಡಿಎಸ್ ಅಸ್ತಿತ್ವದಲ್ಲಿರುತ್ತದೆ ಎಂದು ಗುಣುಗುತ್ತಿರುವುದನ್ನು ನೋಡುತ್ತಿದ್ದೇವೆ. ಅದೇ ಉದ್ದೇಶದಿಂದ ಪಕ್ಷದ ಸಂಘಟನೆಯೂ ಆಗಬೇಕು. ಪ್ರತಿಯೊಂದು ಚುನಾವಣೆ ಎದುರಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ತಂಡಗಳನ್ನು ಕ್ಷೇತ್ರದಲ್ಲಿ ತಿರುಗಾಡಲು ಜೆಡಿಎಸ್ ಬಿಟ್ಟಿದೆ. ಆದರೆ ಪಕ್ಷ ಈ ಕುರಿತು ಅಧಿಕೃತವಾಗಿ ಈವರೆಗು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಎಲ್ಲಾ 50 ಕ್ಷೇತ್ರಗಳಲ್ಲೂ ಒಂದು ವಾರದಿಂದ ಈ ತಂಡಗಳು ಮುಂದಿನ ಕಾರ್ಯತಂತ್ರ ರೂಪಿಸುತ್ತಿದ್ದು ಪಕ್ಷದ ವರಿಷ್ಟರಿಗೆ ಮಾಹಿತಿ ನೀಡುತ್ತಿವೆ ಎಂದು ತಿಳಿದುಬಂದಿದೆ.

2013ರ ವಿಧಾನಸಭಾ ಚುನಾಯಲ್ಲಿ 40 ಸ್ಥಾನ ಗಳಿಸಿದ್ದ ಜೆಡಿಎಸ್ 2018ರಲ್ಲಿ 37 ಸ್ಥಾನ ಪಡೆದು ಮೂರು ಸ್ಥಾನಗಳನ್ನು ಕಳೆದುಕೊಂಡಿತ್ತು. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಾಲ್ವರು ಶಾಸಕರು ರಾಜಿನಾಮೆ ನೀಡುವಂತಹ ಪರಿಸ್ಥಿತಿ ಬಂತು. ವಿಧಾನ ಪರಿಷತ್ ಸದಸ್ಯ, ರಮೇಶ್ ಬಾಬು ರಾಜಿನಾಮೆ ನೀಡಿದ್ದಾರೆ. ಅವರು ಯಾವ ಪಕ್ಷ ಸೇರುತ್ತಾರೋ ಇನ್ನು ಸ್ಪಷ್ಟವಾಗಿಲ್ಲ. ಹೀಗೆ ಒಬ್ಬೊಬ್ಬರೇ ಪಕ್ಷ ತೊರೆಯುತ್ತಿರುವ ಹಿನ್ನೆಲೆ ಯಲ್ಲಿ ಎಚ್ಚೆತ್ತುಕೊಂಡಿರುವ ಜೆಡಿಎಸ್ ತನ್ನ ಶಾಸಕರನ್ನು ಉಳಿಸಿಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಪಕ್ಷ ಚೇತರಿಕೆಗೆ ಮೊದಲೇ ಕಾರ್ಯಕ್ಷೇತ್ರಕ್ಕೆ ಇಳಿದಿದ್ದಾರೆ.  ಈ ಕಾರ್ಯತಂತ್ರ ವರ್ಕೌಟ್ ಆದರೆ ಮುಂದಿನ ವಿಭಾನಸಭಾ ಚುನಾವಣೆಯ ವೇಳೆಗೆ ಪಕ್ಷ ಬಲಿಷ್ಠಗೊಳ್ಳಲಿದೆ. ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಜೆಡಿಎಸ್ ಪಕ್ಷವನ್ನು ಎಲ್ಲರೂ ಕಡೆಗಣಿಸುತ್ತಿರುವುದರಿಂದ ಈ ವಿಷಯವನ್ನು ಪಕ್ಷದ ಮುಖಂಡರು ಪ್ರತಿಷ್ಟೆ ಯನ್ನಾಗಿ ತೆಗೆದುಕೊಂಡಂತೆ ಕಂಡುಬರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...