Homeಕರ್ನಾಟಕಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

ಬೇರುಮಟ್ಟದಲ್ಲಿ ಜೆಡಿಎಸ್ ಸಂಘಟನೆ: ಐವತ್ತು ಕ್ಷೇತ್ರಗಳಿಗೆ ತಂಡ ಕಳುಹಿಸಿದ ಕುಮಾರ ಸ್ವಾಮಿ

- Advertisement -
- Advertisement -

ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಪಡಿಸಲು ಮುಂದಾಗಿದೆ. ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಅನ್ನು ದುರ್ಬಲಗೊಳಿಸುತ್ತಿರುವ ಮತ್ತು ಶಾಸಕರು ಪಕ್ಷ ತೊರೆಯುತ್ತಿರುವ ಹೊತ್ತಿನಲ್ಲಿ ತಳಮಟ್ಟದ ಸಂಘಟನೆಗೆ ಕಾರ್ಯಯೋಜನೆ ರೂಪಿಸಿ ರಂಗಕ್ಕೆ ಇಳಿದಿದೆ. ವಿಧಾನಸಭಾ ಚುನಾವಣೆ ವೇಳೆ ಅತಂತ್ರಸ್ಥಿತಿ ನಿರ್ಮಾಣಗೊಂಡು ಸರ್ಕಾರ ರಚನೆಗೆ ಬೆಂಬಲ ನೀಡುವ ಸಮಯದಲ್ಲಿ ಎರಡು ಬಾರಿ ತಾನೇ ನಿರ್ಣಾಯಕ ಪಾತ್ರ ವಹಿಸಿರುವುದನ್ನು ನಾವು ನೋಡಿದ್ದೇವೆ. ಅದೇ ಕಾರಣಕ್ಕೆ ಎಚ್.ಡಿ.ಕುಮಾರಸ್ವಾಮಿ ಪದೇಪದೇ ನಾವೇ ಕಿಂಗ್ ಮೇಕರ್ ಎಂದು ಹೇಳಿದ್ದಿದೆ ಮತ್ತು ಕಿಂಗ್ ಮೇಕರ್ ಆಗಿ ಎರಡು ಬಾರಿಯೂ ಹೊರಹೊಮ್ಮಿ ಅಧಿಕಾರ ನಡೆಸಿದರು.

ಕಾಂಗ್ರೆಸ್ ಜೊತೆ ಕೈಜೋಡಿಸಿದ್ದ ಜೆಡಿಎಸ್ ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ತನ್ನ ಒತ್ತಡಕ್ಕೆ ಮಣಿಯದಿದ್ದಾಗ ಬೆಂಬಲ ವಾಪಸ್ ಪಡೆಯಿತು. ರಾತ್ರಿ ಬೆಳಗಾಗುವುದರೊಳಗೆ ಬಿಜೆಪಿ ಜೊತೆ ಕೈಜೋಡಿಸಿದ ಜೆಡಿಎಸ್ ಮುಖ್ಯಮಂತ್ರಿ ಸ್ಥಾನವನ್ನು ತನ್ನದನ್ನಾಗಿಸಿಕೊಂಡಿತು. 20 ತಿಂಗಳ ನಂತರ ಅಧಿಕಾರ ಹಸ್ತಾಂತರದ ವಿವಾದ ಉಂಟಾಗಿ  ಕುಮಾರಸ್ವಾಮಿ ರಾಜಿನಾಮೆ ನೀಡಬೇಕಾಗಿ ಬಂದಿದ್ದು ಇತಿಹಾಶ. ಇದಾಗಿ ಐದು ವರ್ಷಗಳು ಪೂರೈಸಿದ ಮೇಲೆ ಕಾಂಗ್ರೆಸ್ ಪಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಈ ಎರಡು ಸಂದರ್ಭದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸುವ ಹುನ್ನಾರ ನಡೆಯುತ್ತಿದೆ ಎಂಬುದನ್ನು ಬಹಿರಂಗವಾಗಿ ಜೆಡಿಎಸ್ ನಾಯಕರು ಟೀಕಿಸಿದರೂ ಕೂಡ. ಇದೇ ವಿಷಯವನ್ನೇ ಜೆಡಿಎಸ್ ನಾಯಕರು ಪ್ರಮುಖ ವಿಷಯ ಮಾಡಿಕೊಂಡು ರಾಜ್ಯವನ್ನು ಸುತ್ತಿದರು.

ಈಗ ಗ್ರಾಮ ಪಂಚಾಯಿತಿ ಚುನಾವಣೆಗಳು ಎದುರಾಗಿವೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಇವೆ. ಇದಕ್ಕೆ ಸಜ್ಜುಗೊಳ್ಳಲು ಜೆಡಿಎಸ್ ಬೇರೊಂದು ತಂತ್ರವನ್ನು ಹೆಣೆದಂತೆ ಕಾಣುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಪ್ರಭಾವ ಇರುವ ಐವತ್ತು ಕ್ಷೇತ್ರಗಳಲ್ಲಿ ಮೂಲಕಾರ್ಯಕರ್ತರನ್ನು ಭೇಟಿ ಮಾಡಿ ತಳಮಟ್ಟದಲ್ಲಿ ಪಕ್ಷದ ಬೇರುಗಳನ್ನು ಗಟ್ಟಿಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಹಳೆ ಮೈಸೂರು ಭಾಗದ ಮಂಡ್ಯ, ತುಮಕೂರು, ಚಿಕ್ಕ ಬಳ್ಳಾಪುರ, ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ 50 ಕ್ಷೇತ್ರಗಳಿಗೆ ಕಾರ್ಯತಂತ್ರ ರೂಪಿಸುವ ತಂಡಗಳನ್ನು ಕಳಿಸಿಕೊಡಲಾಗಿದೆ. ಒಂದು ತಂಡದಲ್ಲಿ ಐವತ್ತು ಮಂದಿ ಕಾರ್ಯನಿರ್ವಹಿಸುತ್ತಿದ್ದು ಆ ತಂಡದ ಸದಸ್ಯರು ಪ್ರತಿ ಗ್ರಾಮ ಘಟಕವನ್ನೂ ಭೇಟಿ ಮಾಡಿ ಮಾಹಿತಿ ಸಂಗ್ರಹಿಸುತ್ತಿದೆ.

ಐವತ್ತು ತಂಡಗಳು ನಿರಂತರವಾಗಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು, ಪೋಷಕರು, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಅಧ್ಯಕ್ಷರನ್ನು ಭೇಟಿ ಮಾಡಿ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ 50 ಸ್ಥಾನಗಳಲ್ಲಿ ವಿಜಯಪತಾಕೆ ಹಾರಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ತಂಡದ ಸದಸ್ಯರು ವಿಧಾನಸಭಾ ಕ್ಷೇತ್ರದಾದ್ಯಂತ ಸುತ್ತುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವಂತೆ ನೋಡಿಕೊಳ್ಳುವುದು ಮತ್ತು ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ ಐವತ್ತು ಕ್ಷೇತ್ರಗಳನ್ನು ಗೆದ್ದುಕೊಳ್ಳುವುದು ಹೇಗೆ ಎಂಬ ಬಗ್ಗೆ ಈ ತಂಡಗಳು ಕಾರ್ಯತಂತ್ರ ರೂಪಿಸುತ್ತಿವೆ ಎಂದು ಜೆಡಿಎಸ್ ಮುಖಂಡರು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಮಾಜಿ ಪ್ರಧಾನಿ ದೇವೇಗೌಡರ ಧ್ವನಿ ಬದಲಾಗಿದೆ. ಪಕ್ಷವನ್ನು ಹೇಗೆ ಕಟ್ಟಬೇಕೆಂಬುದು ನನಗೆ ಗೊತ್ತಿದೆ. ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಸುತ್ತಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುತ್ತೇನೆ. ನಮ್ಮ ಪಕ್ಷವನ್ನು ಯಾರಿಂದಲೂ ಮುಗಿಸಲು ಆಗುವುದಿಲ್ಲ. ಮುಂದೆಯೂ ಜೆಡಿಎಸ್ ಅಸ್ತಿತ್ವದಲ್ಲಿರುತ್ತದೆ ಎಂದು ಗುಣುಗುತ್ತಿರುವುದನ್ನು ನೋಡುತ್ತಿದ್ದೇವೆ. ಅದೇ ಉದ್ದೇಶದಿಂದ ಪಕ್ಷದ ಸಂಘಟನೆಯೂ ಆಗಬೇಕು. ಪ್ರತಿಯೊಂದು ಚುನಾವಣೆ ಎದುರಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ತಂಡಗಳನ್ನು ಕ್ಷೇತ್ರದಲ್ಲಿ ತಿರುಗಾಡಲು ಜೆಡಿಎಸ್ ಬಿಟ್ಟಿದೆ. ಆದರೆ ಪಕ್ಷ ಈ ಕುರಿತು ಅಧಿಕೃತವಾಗಿ ಈವರೆಗು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಎಲ್ಲಾ 50 ಕ್ಷೇತ್ರಗಳಲ್ಲೂ ಒಂದು ವಾರದಿಂದ ಈ ತಂಡಗಳು ಮುಂದಿನ ಕಾರ್ಯತಂತ್ರ ರೂಪಿಸುತ್ತಿದ್ದು ಪಕ್ಷದ ವರಿಷ್ಟರಿಗೆ ಮಾಹಿತಿ ನೀಡುತ್ತಿವೆ ಎಂದು ತಿಳಿದುಬಂದಿದೆ.

2013ರ ವಿಧಾನಸಭಾ ಚುನಾಯಲ್ಲಿ 40 ಸ್ಥಾನ ಗಳಿಸಿದ್ದ ಜೆಡಿಎಸ್ 2018ರಲ್ಲಿ 37 ಸ್ಥಾನ ಪಡೆದು ಮೂರು ಸ್ಥಾನಗಳನ್ನು ಕಳೆದುಕೊಂಡಿತ್ತು. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಾಲ್ವರು ಶಾಸಕರು ರಾಜಿನಾಮೆ ನೀಡುವಂತಹ ಪರಿಸ್ಥಿತಿ ಬಂತು. ವಿಧಾನ ಪರಿಷತ್ ಸದಸ್ಯ, ರಮೇಶ್ ಬಾಬು ರಾಜಿನಾಮೆ ನೀಡಿದ್ದಾರೆ. ಅವರು ಯಾವ ಪಕ್ಷ ಸೇರುತ್ತಾರೋ ಇನ್ನು ಸ್ಪಷ್ಟವಾಗಿಲ್ಲ. ಹೀಗೆ ಒಬ್ಬೊಬ್ಬರೇ ಪಕ್ಷ ತೊರೆಯುತ್ತಿರುವ ಹಿನ್ನೆಲೆ ಯಲ್ಲಿ ಎಚ್ಚೆತ್ತುಕೊಂಡಿರುವ ಜೆಡಿಎಸ್ ತನ್ನ ಶಾಸಕರನ್ನು ಉಳಿಸಿಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಪಕ್ಷ ಚೇತರಿಕೆಗೆ ಮೊದಲೇ ಕಾರ್ಯಕ್ಷೇತ್ರಕ್ಕೆ ಇಳಿದಿದ್ದಾರೆ.  ಈ ಕಾರ್ಯತಂತ್ರ ವರ್ಕೌಟ್ ಆದರೆ ಮುಂದಿನ ವಿಭಾನಸಭಾ ಚುನಾವಣೆಯ ವೇಳೆಗೆ ಪಕ್ಷ ಬಲಿಷ್ಠಗೊಳ್ಳಲಿದೆ. ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಜೆಡಿಎಸ್ ಪಕ್ಷವನ್ನು ಎಲ್ಲರೂ ಕಡೆಗಣಿಸುತ್ತಿರುವುದರಿಂದ ಈ ವಿಷಯವನ್ನು ಪಕ್ಷದ ಮುಖಂಡರು ಪ್ರತಿಷ್ಟೆ ಯನ್ನಾಗಿ ತೆಗೆದುಕೊಂಡಂತೆ ಕಂಡುಬರುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...