Homeಕರ್ನಾಟಕಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಇದೀಗ ಲೋಕಸಭೆ ಚುನಾವಣೆಗೆ ಒಗ್ಗಟ್ಟಾಗಲಿವೆ ಎನ್ನುವ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಬಹಳ ಚರ್ಚೆಯಾಗುತ್ತಿದೆ. ಈ ನಡುವೆ ಜೆಡಿಎಸ್ ಪಕ್ಷವು ಎನ್​ಡಿಎ ಮೈತ್ರಿಕೂಟವನ್ನು ಸೇರಲು ಸಜ್ಜಾಗುತ್ತಿದೆ ಎಂದು ವರದಿಯಾಗಿದೆ.

ಜೆಡಿಎಸ್ ಪಕ್ಷವು ಎನ್​ಡಿಎ ಮೈತ್ರಿಕೂಟ ಸೇರುವುದು ಬಹುತೇಕ ಖಚಿತ ೆನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಬಹಳ ಸದ್ದು ಮಾಡುತ್ತಿದೆ. ಸೋಮವಾರ ಅಥವಾ ಮಂಗಳವಾರ ಹೆಚ್​ಡಿ ಕುಮಾರಸ್ವಾಮಿ ಅವರು ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.

ದೆಹಲಿಯಲ್ಲಿ ಇದೇ 18ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಜೆಡಿಎಸ್‌ ಭಾಗಿಯಾಗುವುದೇ ಇಲ್ಲವೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಬಿರುಸುಗೊಂಡಿದೆ.

ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ, ಲೋಕಸಭೆ ಚುನಾವಣೆ ಹೊತ್ತಿಗಾದರೂ ಚೇತರಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಜೆಡಿಎಸ್ ಮೊರೆ ಹೋಗಿದೆ. ಕಾಂಗ್ರೆಸ್ ಜತೆ ಸಂಬಂಧ ಹಳಸಿರುವುದರಿಂದಾಗಿ, ಮತ್ತೆ ತಲೆ ಎತ್ತಬೇಕಾದರೆ ಬಿಜೆಪಿ ಆಸರೆಯೇ ಸೂಕ್ತ ಎಂಬ ತರ್ಕಕ್ಕೆ ದಳಪತಿಗಳೂ ಬಂದಿದ್ದಾರೆ. ಈ ಮಧ್ಯೆ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಕಠಿಣ ಸ್ಪರ್ಧೆ ಎದುರಿಸಬೇಕಾಗುತ್ತದೆ. ಹೀಗಾಗಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಿದರೆ ಆ ಪಕ್ಷದ ಪ್ರಾಬಲ್ಯ ಇರುವ ಕಡೆಯಲ್ಲಿ ಕಾಂಗ್ರೆಸ್ ಅನ್ನು ಒಟ್ಟಾಗಿ ಎದುರಿಸಬಹುದು ಎಂಬುದು ಬೆಜೆಪಿ ಲೆಕ್ಕಾಚಾರವಾಗಿದೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿ, ಈಗ ಚದುರಿಹೋಗಿರುವ ವಿವಿಧ ಪಕ್ಷಗಳ ನಾಯಕರಿಗೆ ಪತ್ರ ಬರೆದಿರುವ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಮತ್ತೆ ಕೂಟವನ್ನು ಒಗ್ಗೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಕುಮಾರಸ್ವಾಮಿಯವರ ಆಪ್ತ ಮೂಲಗಳು ಹೇಳುವಂತೆ, ”ಇಲ್ಲಿಯವರೆಗೆ ಬಿಜೆಪಿಯಿಂದ ಆಹ್ವಾನ ಬಂದಿಲ್ಲ, ಬಂದ ಬಳಿಕವಷ್ಟೇ, ಸಭೆಯಲ್ಲಿ ಪಾಲ್ಗೊಳ್ಳಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ” ಎಂದು ಹೇಳಲಾಗಿದೆ.

”ನಾವೇ ಏಕಾಂಗಿಯಾಗಿ ಸ್ಪರ್ಧಿಸಿದರೆ 2-4 ಸ್ಥಾನದಲ್ಲಾದರೂ ಗೆಲ್ಲಬಹುದು. ಬಿಜೆಪಿ ಜತೆಗೆ ಹೋದರೆ, 2019ರಲ್ಲಿ ಕಾಂಗ್ರೆಸ್‌ ಜತೆಗೆ ಹೋದಂತೆ ಆಗಿ, ಇರುವ ಸ್ಥಾನವನ್ನೂ ಕಳೆದುಕೊಳ್ಳಬೇಕಾಗಬಹುದೆಂಬ ಆತಂಕ ಇದೆ. ಈ ಗೊಂದಲ ಇರುವುದರಿಂದ ಯಾವುದೇ ತೀರ್ಮಾನವೂ ಆಗಿಲ್ಲ” ಎಂದು ಮೂಲಗಳು ವಿವರಿಸಿವೆ.

ಕಳೆದ ಒಂದು ತಿಂಗಳ ಹಿಂದೆ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯ ವಿಚಾರವಾಗಿ ದೆಹಲಿಯಲ್ಲಿ  ಬಿಜೆಪಿ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಹೀಗಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ.

ಇದನ್ನೂ ಓದಿ: ಕುಮಾರಸ್ವಾಮಿ ಹೇಳಿದ್ದೇ ಸರಿ..: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸುಳಿವು ನೀಡಿದ ಬಿಎಸ್‌ವೈ

ಕಮಲ-ದಳ ಒಂದಾಗುವ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಭಾರೀ ಚರ್ಚೆ

ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಕಂಡು ಅಧಿಕಾರ ಹಿಡಿದಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ 25 ಸ್ಥಾನಗಳನ್ನು ಮರಳಿ ಗಳಿಸುವುದು ಕಷ್ಟ. ಹಾಗಾಗಿ ಜೆಡಿಎಸ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಒಂದಾಗಿ ಚುನಾವಣೆಗೆ ಹೋದರೆ ಒಂದಷ್ಟು ಸ್ಥಾನಗಳನ್ನು ಗಳಿಸಬಹುದು ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ.

ಈ ಬಗ್ಗೆ ಬಿಜೆಪಿ ನಾಯಕರೊಬ್ಬರು ಮಾತನಾಡಿದ್ದು, ”’ಈ ವಿಷಯದಲ್ಲಿ ಕುಮಾರಸ್ವಾಮಿ ಜತೆಗೆ ಬಿಜೆಪಿ ವರಿಷ್ಠರು ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಒಂದು ಪಕ್ಷವನ್ನು ಬಿಜೆಪಿ ಜತೆ ವಿಲೀನಗೊಳಿಸುವುದು. ಆಗ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುತ್ತೇವೆ. ನಿಮ್ಮ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ವರಿಷ್ಠರು ಭರವಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

”ಈ ಪ್ರಸ್ತಾವಕ್ಕೆ ಕುಮಾರಸ್ವಾಮಿ ಒಪ್ಪಿಲ್ಲ. ಕರ್ನಾಟಕದಲ್ಲಿ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಜತೆ ಸೆಣಸಬೇಕಾಗಿರುವುದರಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಮೈತ್ರಿಕೂಟವನ್ನು ಸೇರಲು ಸಾಧ್ಯವೇ ಇಲ್ಲ. ಹೀಗಾಗಿ, ನಮ್ಮ ಅಸ್ತಿತ್ವ ಉಳಿಸಿಕೊಂಡು, ಎನ್‌ಡಿಎ ಮೈತ್ರಿಕೂಟ ಸೇರಲು ಸಿದ್ಧ. ವಿರೋಧ ಪಕ್ಷ ನಾಯಕ ಸ್ಥಾನದ ಬದಲು ಕೇಂದ್ರ ಸಚಿವ ಸ್ಥಾನ ಕೊಟ್ಟರೆ, ಕರ್ನಾಟಕದಲ್ಲೂ ನಿಮ್ಮ ಪಕ್ಷಕ್ಕೆ ಬಲ ತಂದುಕೊಡುತ್ತೇನೆ ಎಂದು ಕುಮಾರಸ್ವಾಮಿ ಪ್ರತಿಪಾದಿಸುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ಇದೇ ಕಾರಣಕ್ಕೆ ರಾಜ್ಯದಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಆಯ್ಕೆ ನಡೆದಿಲ್ಲ. ಕುಮಾರಸ್ವಾಮಿ ವಿಲೀನಕ್ಕೆ ಒಪ್ಪಿದರೆ ಅವರೇ ಆ ಸ್ಥಾನಕ್ಕೆ ಬರುವ ಸಾಧ್ಯತೆ ಹೆಚ್ಚು. ಕರ್ನಾಟಕದ ನಾಯಕರ ಜತೆಗೆ ಚರ್ಚೆ ನಡೆದಿಲ್ಲ. ದೆಹಲಿ ವರಿಷ್ಠರ ಹಂತದಲ್ಲೇ ಈ ಸಮಾಲೋಚನೆ ನಡೆದಿದೆ. ತೀರ್ಮಾನವನ್ನು ಅವರೇ ತೆಗೆದುಕೊಳ್ಳಬೇಕಿದೆ. ಎನ್‌ಡಿಎ ಮೈತ್ರಿಕೂಟದ ಸಭೆ ಮುಗಿದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಕೊಡಬೇಕು. ಅನೇಕ ಪಕ್ಷಗಳು ಬೆಂಬಲಿಸುತ್ತಿದ್ದು, ಜೆಡಿಎಸ್​ನಿಂದಲೂ ನಾವು ಅಪೇಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...