Homeಮುಖಪುಟನಾವೇ ಒರಿಜಿನಲ್‌ ಜೆಡಿಎಸ್, NDA ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ: ಸಿಎಂ ಇಬ್ರಾಹೀಂ

ನಾವೇ ಒರಿಜಿನಲ್‌ ಜೆಡಿಎಸ್, NDA ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ: ಸಿಎಂ ಇಬ್ರಾಹೀಂ

- Advertisement -
- Advertisement -

ಜನತಾದಳ ಒರಿಜಿನಲ್‌ ನಾವೇ, ನಾನು ಅದರ ಅಧ್ಯಕ್ಷ, ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, INDIA ಮೈತ್ರಿ ಒಕ್ಕೂಟಕ್ಕೆ ನಮ್ಮ ಬೆಂಬಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹೀಂ ಅವರು ಹೇಳಿದ್ದಾರೆ.

ಸೋಮವಾರ ಚಿಂತನ ಮಂಥನ ಸಭೆ ಬಳಿಕ ಮಾತನಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹೀಂ, ಜನತಾದಳ ಒರಿಜಿನಲ್‌ ನಾವೇ, ನಾನು ಅದರ ಅಧ್ಯಕ್ಷ,  ನನ್ನನ್ನು ಯಾರೂ ತೆಗೆಯಲು ಸಾಧ್ಯವಿಲ್ಲ, ಮೀಟಿಂಗ್ ಮಾಡಿ ಅಭಿಪ್ರಾಯ ತೆಗೆದು ತೆಗೆಯಬೇಕು. ಇಂಡಿಯಾ ಮೈತ್ರಿ ಕೂಟದ ನಾಯಕರು ನಮ್ಮ ಜೊತೆ ಮಾತನಾಡಿದ್ದಾರೆ. ಜೈಲಿನಲ್ಲಿ ಹುಟ್ಟಿದವರು ನಾವು, ಪ್ರಾಣ ಕೊಡುತ್ತೇವೆ ಆದರೆ ಸಿದ್ದಾಂತ ಎಂದು ಬಿಟ್ಟುಕೊಡಲ್ಲ ಎಂದು ಸಿಎಂ ಇಬ್ರಾಹೀಂ ಹೇಳಿದ್ದಾರೆ.

ಕುಮಾರಸ್ವಾಮಿಗೆ ಚೆನ್ನಪಟ್ಟಣದಲ್ಲಿ 20,000 ಜನ ಮುಸ್ಲಿಮರು ಮತ ಹಾಕಿದ್ದಾರೆ. ಎಂಎಲ್‌ಎ ಆಗಿದ್ದಕ್ಕೆ ಅಮಿತ್‌ ಶಾ ದೆಹಲಿಗೆ ಕರೆದಿದ್ದಾರೆ. ಇಲ್ಲದಿದ್ದರೆ ಅಮಿತ್‌ ಶಾ ಕರೆಯುತ್ತಿರಲಿಲ್ಲ. ನಿಮ್ಮ ಮಗ ನಿಂತಾಗ ಮುಸ್ಲಿಂ ಅಭ್ಯರ್ಥಿ ಕಾಂಗ್ರೆಸ್‌ನಲ್ಲಿ ಇದ್ದರೂ ನಿಮಗೆ ಮತ ಹಾಕಿದ್ದಾರೆ. ದೇವೇಗೌಡರ ಮನಸ್ಸಿನಲ್ಲಿ ನೋವು ಇದೆ. ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ಟೀಕೆ ಮಾಡಲ್ಲ. ಕೇರಳ, ತಮಿಳುನಾಡು ಜೆಡಿಎಸ್ ಎನ್‌ಡಿಎ ಜೊತೆ ಹೋಗಲ್ಲ ಎಂದು ತೀರ್ಮಾನ ಮಾಡಿದೆ. ಯಾವುದೇ ಕಾರಣಕ್ಕೂ ನಾವು ಕೂಡ ಎನ್‌ಡಿಎ ಜೊತೆ ಹೋಗಲ್ಲ ಎಂದು ಹೇಳಿದ್ದಾರೆ.

ಜೆಡಿಎಸ್ ಬಿಜೆಪಿ ಜೊತೆ ಹೋಗುವುದಿಲ್ಲ ಎಂದು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ತಿಳಿಸುತ್ತೇವೆ. ನೀವು ಯಾವುದೇ ಕಾರಣಕ್ಕೂ ಮೈತ್ರಿಗೆ ಒಪ್ಪಿಗೆ ಕೊಡಬಾರದು ಎಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಿಮ್ಮ ನಿಲುವು ಒಪ್ಪದೆ ಹೋದರೆ ಕುಮಾರಸ್ವಾಮಿಯನ್ನು ರಾಜ್ಯಾಧ್ಯಕ್ಷರಾಗಿ ಪಕ್ಷದಿಂದ ಉಚ್ಚಾಟನೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಉಚ್ಚಾಟನೆಗೆ ಕಾಲ ಪಕ್ವ ಆಗಿಲ್ಲ. ನಾನು ಸಹೋದರ ಇದ್ದಂತೆ, ನಾನೇ ಜೆಡಿಎಸ್ ಬಿಟ್ಟು ಹೋಗ್ತೀನಿ ಅಂತಾರೆ, ಏನ್ ಮಾಡಲಿ? ನಾನು ಜೆಡಿಎಸ್ ಬಿಟ್ಟು ಹೋಗುವುದಿಲ್ಲ. ಜಿಲ್ಲಾಧ್ಯಕ್ಷರು ನಿಮ್ಮ ಜೊತೆಗೆ ಇರುತ್ತೇವೆ ಎಂದು ಪತ್ರ ಬರೆದಿದ್ದಾರೆ. ನಮ್ಮ ಮನೆ ಬಿಟ್ಟು ನಾನು ಯಾಕೆ ಹೋಗಲಿ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಪ್ರಶ್ನೆ ಕೇಳಲು ಲಂಚ ಆರೋಪ: ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...