Homeಕರ್ನಾಟಕಹೆಚ್‌ಡಿಕೆ 'ರಿವರ್ಸ್ ಆಪರೇಷನ್' : ಮಂಡ್ಯ ನಗರಸಭೆ ಜೆಡಿಎಸ್ ಪಾಲು

ಹೆಚ್‌ಡಿಕೆ ‘ರಿವರ್ಸ್ ಆಪರೇಷನ್’ : ಮಂಡ್ಯ ನಗರಸಭೆ ಜೆಡಿಎಸ್ ಪಾಲು

- Advertisement -
- Advertisement -

ಭಾರೀ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಇಂದು (ಆ.28) ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳು ಜೆಡಿಎಸ್ ಪಾಲಾಗಿದೆ.

ಕಾಂಗ್ರೆಸ್‌ ನಾಯಕ ಹಾಗೂ ಸಚಿವ ಚೆಲುವರಾಯಸ್ವಾಮಿ ಮತ್ತು ಜೆಡಿಎಸ್‌ನ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ನಾಗೇಶ್ ಆಯ್ಕೆಯಾದರೆ, ಉಪಾಧ್ಕಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ.

ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ಮಾಡಿದ್ದ ಕಾಂಗ್ರೆಸ್ ಮುಖಂಡರು, ಜೆಡಿಎಸ್‌ನ ಎರಡು ಸದಸ್ಯರನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದರು. ಇದಕ್ಕೆ ಪ್ರತಿತಂತ್ರ ರೂಪಿಸಿದ ಕುಮಾರಸ್ವಾಮಿ, ‘ರಿವರ್ಸ್ ಆಪರೇಷನ್’ ಮಾಡಿ ಕಾಂಗ್ರೆಸ್‌ನ ಒಬ್ಬ ಪ್ರಭಾವಿ ನಾಯಕನನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಲ್ಲದೇ, ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರಸಭೆಯಲ್ಲಿ ಜೆಡಿಎಸ್‌ನಿಂದ 18, ಕಾಂಗ್ರೆಸ್‌ನಿಂದ 10, ಬಿಜೆಪಿಯಿಂದ 2 ಮತ್ತು ಐವರು ಪಕ್ಷೇತರರು ಸೇರಿ ಒಟ್ಟು 35 ಸದಸ್ಯರಿದ್ದಾರೆ. ಈ ಪೈಕಿ ಕಾಂಗ್ರೆಸ್‌ನಿಂದ ನಗರಸಭೆಯ ಮಾಜಿ ಅಧ್ಯಕ್ಷರಾದ ಹೆಚ್.ಎಸ್. ಮಂಜು ಅವರು ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಇದೇ ಸ್ಥಾನಕ್ಕೆ ಜೆಡಿಎಸ್‌ನಿಂದ ನಾಗೇಶ್ ಅವರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನಿಂದ ಅರುಣ್ ಕುಮಾರ್ ಹಾಗೂ ಕಾಂಗ್ರೆಸ್‌ನಿಂದ ಝಾಕಿರ್ ನಾಮಪತ್ರ ಸಲ್ಲಿಸಿದ್ದರು.

ಇಂದು ನಡೆದ ಚುನಾವಣೆಯಲ್ಲಿ ಸಂಸದ ಕುಮಾರಸ್ವಾಮಿ ಅವರ ಒಂದು ಮತ, ಮಂಡ್ಯ ನಗರ ಶಾಸಕ ಪಿ.ರವಿಕುಮಾರ್ ಅವರ ಒಂದು ಮತ ಹಾಗೂ 35 ಸದಸ್ಯರ ಮತಗಳು ಸೇರಿ ಒಟ್ಟು 37 ಮತಗಳು ಚಲಾವಣೆಯಾದವು. ಈ ಪೈಕಿ ಜೆಡಿಎಸ್ ಅಭ್ಯರ್ಥಿಗಳಿಗೆ ತಲಾ 19 ಮತಗಳು ಬಂದಿವೆ.

ಇದನ್ನೂ ಓದಿ : ವಿಶೇಷ ಆತಿಥ್ಯ ಆರೋಪ | ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ : ಒಂಬತ್ತು ಸಹಚರರು ಬೇರೆಡೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...