Homeಮುಖಪುಟಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

- Advertisement -
- Advertisement -

ಗುರುವಾರ (ಅ.30) ನಡೆದ ಜನ ಸುರಾಜ್ ಕಾರ್ಯಕರ್ತ ದುಲಾರ್‌ಚಂದ್ ಯಾದವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಭಾನುವಾರ (ನ.2) ಮುಂಜಾನೆ ವಿವಾದಾತ್ಮಕ ಮಾಜಿ ಶಾಸಕ, ಮೊಕಾಮಾದ ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ಪಾಟ್ನಾ ಎಸ್‌ಎಸ್‌ಪಿ ನೇತೃತ್ವದಲ್ಲಿ ಬರ್ಹ್‌ನಲ್ಲಿರುವ ಸಿಂಗ್ ಅವರ ಮನೆಗೆ ತೆರಳಿದ ಪೊಲೀಸರು, ಅವರನ್ನು ಬಂಧಿಸಿದ್ದಾರೆ. ಯಾದವ್‌ ಹತ್ಯೆಯ ನಂತರ ಸಿಂಗ್ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಬಂಧನದ ಬಳಿಕ ವಿಚಾರಣೆಗಾಗಿ ಅವರನ್ನು ಪಾಟ್ನಾಕ್ಕೆ ಕರೆತರಲಾಗಿದೆ.

ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ ಎಂಬ ಇನ್ನಿಬ್ಬರು ವ್ಯಕ್ತಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಮೂವರನ್ನೂ ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪಾಟ್ನಾ ಬಳಿಯ ಮೊಕಾಮಾದಲ್ಲಿ ಚುನಾವಣಾ ಪ್ರಚಾರದ ವೇಳೆ ಶ್ವಾಸಕೋಶಕ್ಕೆ ಗಂಭೀರ ಹಾನಿ ಮತ್ತು ಪಕ್ಕೆಲುಬು ಮುರಿತಕ್ಕೊಳಗಾಗಿ ಯಾದವ್ ನಿಧನರಾಗಿದ್ದರು. ಗುರುವಾರ ಜನ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿತ್ತು.

ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ತ್ಯಾಗರಾಜನ್ ಎಸ್‌.ಎಂ ಅವರೊಂದಿಗೆ ತಡರಾತ್ರಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕೇಯ ಶರ್ಮಾ, “ದುಲಾರ್ ಚಂದ್ ಯಾದವ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನಂತ್ ಸಿಂಗ್, ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ” ಎಂದು ಹೇಳಿದ್ದಾರೆ.

“ಮರಣೋತ್ತರ ವರದಿ ಮತ್ತು ಪ್ರಾಥಮಿಕ ತನಿಖೆಯು ಯಾದವ್ ಅವರದ್ದು ಕೊಲೆ ಎಂಬುವುದನ್ನು ದೃಢಪಡಿಸಿದೆ” ಎಂದು ತಿಳಿಸಿದ್ದಾರೆ.

“ಮೊಕಾಮಾದಲ್ಲಿ ಜನ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಮತ್ತು ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ನಂತರ ಯಾದವ್ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಎರಡೂ ಕಡೆಯಿಂದ ಎಫ್‌ಐಆರ್‌ಗಳು ದಾಖಲಾಗಿದ್ದು, ತನಿಖೆಯ ಸಮಯದಲ್ಲಿ, ಘಟನೆ ನಡೆದಾಗ ಸಿಂಗ್ ಮತ್ತು ಅವರ ಸಹಚರರು ಸ್ಥಳದಲ್ಲಿದ್ದರು ಎಂಬುವುದು ಗೊತ್ತಾಗಿದೆ” ಎಂದು ಎಸ್‌ಎಸ್‌ಪಿ ಕಾರ್ತಿಕೇಯ ಶರ್ಮಾ ವಿವರಿಸಿದ್ದಾರೆ.

ಬಿಹಾರ ರಾಜಕೀಯದಲ್ಲಿ ಪ್ರಬಲ ವ್ಯಕ್ತಿ ಎಂದೇ ಗುರುತಿಸಿಕೊಂಡಿರುವ ಸಿಂಗ್‍ನನ್ನು ಇದೀಗ ಪೊಲೀಸರು ವಿಚಾರಣೆಗಾಗಿ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಹಲವು ಬಾರಿ ಶಾಸಕರಾಗಿರುವ ಸಿಂಗ್ ಅವರ ಪತ್ನಿ ನೀಲಂ ದೇವಿ ಪ್ರಸ್ತುತ ಮೊಕಾಮಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ವಿರುದ್ಧವೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಿಸಲಾಗಿದೆ. ದೊಡ್ಡ ತಂಡಗಳಲ್ಲಿ ಅವರು ಓಡಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಮತಗಳ್ಳತನದ ವಿರುದ್ಧ ‘ಮಹಾ’ರ‍್ಯಾಲಿ : 4,500 ಮಂದಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದ ರಾಜ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...