Homeಮುಖಪುಟಒಳಉಡುಪಿನಲ್ಲಿ ಓಡಾಡಿದ್ದನ್ನು ಆಕ್ಷೇಪಿಸಿದ ಸಹ ಪ್ರಯಾಣಿಕನ ಚಿನ್ನದ ಸರ ಕಸಿದ ಶಾಸಕ: ದೂರು ದಾಖಲು

ಒಳಉಡುಪಿನಲ್ಲಿ ಓಡಾಡಿದ್ದನ್ನು ಆಕ್ಷೇಪಿಸಿದ ಸಹ ಪ್ರಯಾಣಿಕನ ಚಿನ್ನದ ಸರ ಕಸಿದ ಶಾಸಕ: ದೂರು ದಾಖಲು

- Advertisement -
- Advertisement -

ಚಲಿಸುತ್ತಿರುವ ರೈಲಿನಲ್ಲಿ ಅರೆಬೆತ್ತಲೆಯಾಗಿ ಓಡಾಡಿ ಸುದ್ದಿಯಾಗಿದ್ದ ಜೆಡಿಯು ಶಾಸಕ ಗೋಪಾಲ್‌ ಮಂಡಲ್‌ ವಿರುದ್ದ, ಅವರ ಸಹ ಪ್ರಯಾಣಿಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೇವಲ ಒಳಉಡುಪಿನಲ್ಲಿ ನಡೆದಾಡಿರುವುದನ್ನು ಆಕ್ಷೇಪಿಸಿದ್ದ ಸಹ ಪ್ರಯಾಣಿಕನ ಜೊತೆಗೆ ಜೆಡಿಯು ಶಾಸಕ ಅನುಚಿತವಾಗಿ ವರ್ತಿಸಿದ್ದು ಮಾತ್ರವಲ್ಲದೆ, ಅವರ ಚಿನ್ನದ ಉಂಗುರ ಮತ್ತು ಸರವನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಗುರುವಾರದಂದು ಬಿಹಾರ ಆಡಳಿತ ಪಕ್ಷವಾಗಿರುವ ಜೆಡಿಯುನ ಶಾಸಕರಾದ ನರೇಂದ್ರ ಕುಮಾರ್ ನೀರಜ್ ಅಲಿಯಾಸ್ ಗೋಪಾಲ್ ಮಂಡಲ್ ಅವರು ರೈಲಿನಲ್ಲಿ ಕೇವಲ ಒಳಉಡುಪಿನಲ್ಲಿ ಓಡಾಡಿರುವ ಘಟನೆ ಸುದ್ದಿಯಾಗಿತ್ತು. ಘಟನೆಯು ಕ್ಯಾಮಾರಾದಲ್ಲಿ ಸೆರೆಯಾಗಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗುವಂತೆ ನಡೆದುಕೊಂಡ ಬಗ್ಗೆ ಅವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ಸಹ-ಪ್ರಯಾಣಿಕ ಪ್ರಹ್ಲಾದ್ ಪಾಸ್ವಾನ್ ಎಂಬವರು ಶಾಸಕನ ವಿರುದ್ದ ದೆಹಲಿಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಅವರು, “ಎಂಎಲ್‌ಎ ಅವರು ರೈಲಿನ ಕೋಚ್‌ನಲ್ಲಿ ಒಳ ಉಡುಪಿನಲ್ಲಿ ತಿರುಗಾಡುತ್ತಿದ್ದರು. ಈ ಸಮಯದಲ್ಲಿ ಅವರು ಮದ್ಯಪಾನ ಮಾಡಿದ್ದರು. ಇದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾಗ, ಎಂಎಲ್‌ಎ ನನ್ನ ಚಿನ್ನದ ಉಂಗುರ ಮತ್ತು ಸರವನ್ನು ಕಸಿದುಕೊಂಡು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು” ಎಂದು ತಿಳಿಸಿದ್ದಾರೆ.

ಶಾಸಕರಾಗಿರುವ ಗೋಪಾಲ್‌ ಮಂಡಲ್ ಅವರು ಪಾಟ್ನಾದಿಂದ ದೆಹಲಿಗೆ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಎ -1 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಪಾಟ್ನಾದಿಂದ ಹೊರಟ ತಕ್ಷಣ, ಅವರು ತನ್ನ ಒಳ ಉಡುಪುಗಳಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದ್ದು, ಇದರ ವಿರುದ್ದ ಸಹ ಪ್ರಯಾಣಿಕರು ಪ್ರತಿಭಟಿಸಿದ ನಂತರವೂ, ಅವರು ಅದೇ ಉಡುಪಿನಲ್ಲಿ ಶೌಚಾಲಯದ ಕಡೆಗೆ ನಡೆಯುತ್ತಿದ್ದರು ಎಂದು ವರದಿಯಾಗಿದೆ.

ಆದರೆ ಶಾಸಕ ತನ್ನ ನಡೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. ರೈಲು ಹತ್ತಿದ ಕೆಲವೇ ನಿಮಿಷಗಳಲ್ಲಿ ತಾನು ಅನಾರೋಗ್ಯಕ್ಕೆ ಒಳಗಾದ ಕಾರಣ ತನಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

“ನಾನು ರೈಲು ಹತ್ತಿದ ತಕ್ಷಣ, ಬೇದಿ ಪ್ರಾರಂಭವಾಗಿತ್ತು. ಹಾಗಾಗಿ ನಾನು ನನ್ನ ಕುರ್ತಾ ಪೈಜಾಮಾವನ್ನು ತೆಗೆದು ಟವಲ್ ಅನ್ನು ನನ್ನ ಭುಜದ ಮೇಲೆ ಹಾಕಿಕೊಂಡೆ. ಅದನ್ನು ನನ್ನ ಸೊಂಟಕ್ಕೆ ಸುತ್ತಲು ನನಗೆ ಸಮಯವಿರಲಿಲ್ಲ. ಹಾಗಾಗಿ ನಾನು ಒಳ ಉಡುಪುಗಳನ್ನು ಮಾತ್ರ ಧರಿಸಿ ಓಡಾಡಿದ್ದೆ” ಎಂದು ಮಂಡಲ್ ಹೇಳಿದ್ದಾರೆ.

ಇದನ್ನೂಓದಿ: ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...