Homeಮುಖಪುಟಒಳಉಡುಪಿನಲ್ಲಿ ಓಡಾಡಿದ್ದನ್ನು ಆಕ್ಷೇಪಿಸಿದ ಸಹ ಪ್ರಯಾಣಿಕನ ಚಿನ್ನದ ಸರ ಕಸಿದ ಶಾಸಕ: ದೂರು ದಾಖಲು

ಒಳಉಡುಪಿನಲ್ಲಿ ಓಡಾಡಿದ್ದನ್ನು ಆಕ್ಷೇಪಿಸಿದ ಸಹ ಪ್ರಯಾಣಿಕನ ಚಿನ್ನದ ಸರ ಕಸಿದ ಶಾಸಕ: ದೂರು ದಾಖಲು

- Advertisement -
- Advertisement -

ಚಲಿಸುತ್ತಿರುವ ರೈಲಿನಲ್ಲಿ ಅರೆಬೆತ್ತಲೆಯಾಗಿ ಓಡಾಡಿ ಸುದ್ದಿಯಾಗಿದ್ದ ಜೆಡಿಯು ಶಾಸಕ ಗೋಪಾಲ್‌ ಮಂಡಲ್‌ ವಿರುದ್ದ, ಅವರ ಸಹ ಪ್ರಯಾಣಿಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೇವಲ ಒಳಉಡುಪಿನಲ್ಲಿ ನಡೆದಾಡಿರುವುದನ್ನು ಆಕ್ಷೇಪಿಸಿದ್ದ ಸಹ ಪ್ರಯಾಣಿಕನ ಜೊತೆಗೆ ಜೆಡಿಯು ಶಾಸಕ ಅನುಚಿತವಾಗಿ ವರ್ತಿಸಿದ್ದು ಮಾತ್ರವಲ್ಲದೆ, ಅವರ ಚಿನ್ನದ ಉಂಗುರ ಮತ್ತು ಸರವನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಗುರುವಾರದಂದು ಬಿಹಾರ ಆಡಳಿತ ಪಕ್ಷವಾಗಿರುವ ಜೆಡಿಯುನ ಶಾಸಕರಾದ ನರೇಂದ್ರ ಕುಮಾರ್ ನೀರಜ್ ಅಲಿಯಾಸ್ ಗೋಪಾಲ್ ಮಂಡಲ್ ಅವರು ರೈಲಿನಲ್ಲಿ ಕೇವಲ ಒಳಉಡುಪಿನಲ್ಲಿ ಓಡಾಡಿರುವ ಘಟನೆ ಸುದ್ದಿಯಾಗಿತ್ತು. ಘಟನೆಯು ಕ್ಯಾಮಾರಾದಲ್ಲಿ ಸೆರೆಯಾಗಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗುವಂತೆ ನಡೆದುಕೊಂಡ ಬಗ್ಗೆ ಅವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ಸಹ-ಪ್ರಯಾಣಿಕ ಪ್ರಹ್ಲಾದ್ ಪಾಸ್ವಾನ್ ಎಂಬವರು ಶಾಸಕನ ವಿರುದ್ದ ದೆಹಲಿಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಅವರು, “ಎಂಎಲ್‌ಎ ಅವರು ರೈಲಿನ ಕೋಚ್‌ನಲ್ಲಿ ಒಳ ಉಡುಪಿನಲ್ಲಿ ತಿರುಗಾಡುತ್ತಿದ್ದರು. ಈ ಸಮಯದಲ್ಲಿ ಅವರು ಮದ್ಯಪಾನ ಮಾಡಿದ್ದರು. ಇದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾಗ, ಎಂಎಲ್‌ಎ ನನ್ನ ಚಿನ್ನದ ಉಂಗುರ ಮತ್ತು ಸರವನ್ನು ಕಸಿದುಕೊಂಡು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು” ಎಂದು ತಿಳಿಸಿದ್ದಾರೆ.

ಶಾಸಕರಾಗಿರುವ ಗೋಪಾಲ್‌ ಮಂಡಲ್ ಅವರು ಪಾಟ್ನಾದಿಂದ ದೆಹಲಿಗೆ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಎ -1 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಪಾಟ್ನಾದಿಂದ ಹೊರಟ ತಕ್ಷಣ, ಅವರು ತನ್ನ ಒಳ ಉಡುಪುಗಳಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದ್ದು, ಇದರ ವಿರುದ್ದ ಸಹ ಪ್ರಯಾಣಿಕರು ಪ್ರತಿಭಟಿಸಿದ ನಂತರವೂ, ಅವರು ಅದೇ ಉಡುಪಿನಲ್ಲಿ ಶೌಚಾಲಯದ ಕಡೆಗೆ ನಡೆಯುತ್ತಿದ್ದರು ಎಂದು ವರದಿಯಾಗಿದೆ.

ಆದರೆ ಶಾಸಕ ತನ್ನ ನಡೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. ರೈಲು ಹತ್ತಿದ ಕೆಲವೇ ನಿಮಿಷಗಳಲ್ಲಿ ತಾನು ಅನಾರೋಗ್ಯಕ್ಕೆ ಒಳಗಾದ ಕಾರಣ ತನಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

“ನಾನು ರೈಲು ಹತ್ತಿದ ತಕ್ಷಣ, ಬೇದಿ ಪ್ರಾರಂಭವಾಗಿತ್ತು. ಹಾಗಾಗಿ ನಾನು ನನ್ನ ಕುರ್ತಾ ಪೈಜಾಮಾವನ್ನು ತೆಗೆದು ಟವಲ್ ಅನ್ನು ನನ್ನ ಭುಜದ ಮೇಲೆ ಹಾಕಿಕೊಂಡೆ. ಅದನ್ನು ನನ್ನ ಸೊಂಟಕ್ಕೆ ಸುತ್ತಲು ನನಗೆ ಸಮಯವಿರಲಿಲ್ಲ. ಹಾಗಾಗಿ ನಾನು ಒಳ ಉಡುಪುಗಳನ್ನು ಮಾತ್ರ ಧರಿಸಿ ಓಡಾಡಿದ್ದೆ” ಎಂದು ಮಂಡಲ್ ಹೇಳಿದ್ದಾರೆ.

ಇದನ್ನೂಓದಿ: ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...