Homeಮುಖಪುಟಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗೆ ಬೇಡಿಕೆ ಮುಂದಿಟ್ಟ ಎನ್‌ಡಿಎ ಮಿತ್ರಪಕ್ಷ ಜೆಡಿಯು

ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗೆ ಬೇಡಿಕೆ ಮುಂದಿಟ್ಟ ಎನ್‌ಡಿಎ ಮಿತ್ರಪಕ್ಷ ಜೆಡಿಯು

- Advertisement -
- Advertisement -

ಮೋದಿ ನೇತೃತ್ವದ ಎನ್‌ಡಿಎ ಸರಕಾರ ಈ ಹಿಂದೆ ಜಾರಿಗೆ ತಂದಿದ್ದ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ ಮಾಡುವಂತೆ ಎನ್‌ಡಿಎ ಮಿತ್ರಪಕ್ಷ ಜೆಡಿಯು ನಾಯಕ ಕೆ.ಸಿ.ತ್ಯಾಗಿ ಆಗ್ರಹಿಸಿದ್ದಾರೆ.

ಅಗ್ನಿವೀರ್ ಯೋಜನೆಯು ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಜನತಾ ದಳ (ಯುನೈಟೆಡ್) ನಂಬುತ್ತದೆ. ಈ ಯೋಜನೆಯಡಿ, ಯುವಕರನ್ನು ನಾಲ್ಕು ವರ್ಷಗಳವರೆಗೆ ನೇಮಿಸಿಕೊಳ್ಳಲಾಗುತ್ತದೆ. ಇದರ ನಂತರ, ಕೇವಲ 25% ಅಗ್ನಿವೀರ್‌ಗಳನ್ನಾಗಿ ಉಳಿಸಿಕೊಳ್ಳಲಾಗುತ್ತದೆ ಮತ್ತು ಉಳಿದವರನ್ನು ಬಿಡುಗಡೆ ಮಾಡಲಾಗುತ್ತದೆ. 2022ರಲ್ಲಿ ಅಗ್ನಿವೀರ್ ಯೋಜನೆ ಅನುಷ್ಠಾನಗೊಂಡಾಗಿನಿಂದ ಈ ಯೋಜನೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

2024ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಈ ಹೊಸ ಸೇನಾ ನೇಮಕಾತಿ ಯೋಜನೆಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು.

ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಈ ಬಗ್ಗೆ ಮಾತನಾಡುತ್ತಾ, ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡು ಮಾಡುವಂತೆ ಆಗ್ರಹಿಸಿದ್ದಾರೆ. ಅಗ್ನಿವೀರ್ ಯೋಜನೆಯು ಮೊದಲಿನಿಂದಲೂ ಹೆಚ್ಚು ಟೀಕೆಗೊಳಗಾಗಿದೆ ಮತ್ತು ನಾವು ಚುನಾವಣೆಗಳಲ್ಲಿ ಅದರ ಪರಿಣಾಮವನ್ನು ನೋಡಿದ್ದೇವೆ. ಆದ್ದರಿಂದ ಸೇನಾ ನೇಮಕಾತಿಯಲ್ಲಿ ನಾವು ಬದಲಾವಣೆಗಳನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಅಗ್ನಿವೀರ್ ಯೋಜನೆ ಬಗ್ಗೆ ಒಂದು ವರ್ಗದ ಮತದಾರರು ಅಸಮಾಧಾನಗೊಂಡಿದ್ದಾರೆ. ಯೋಜನೆ ಬಗ್ಗೆ ಸಾರ್ವಜನಿಕರು ಎತ್ತಿತೋರಿಸಿರುವ ಲೋಪದೋಷಗಳನ್ನು ವಿಸ್ತೃತವಾಗಿ ಚರ್ಚಿಸಿ ತೆಗೆದುಹಾಕಬೇಕು ಎಂದು ನಮ್ಮ ಪಕ್ಷ ಬಯಸುತ್ತದೆ. ಯುಸಿಸಿ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾನೂನು ಆಯೋಗದ ಮುಖ್ಯಸ್ಥರಿಗೆ ಸಿಎಂ ಪತ್ರ ಬರೆದಿದ್ದರು. ನಾವು ಇದಕ್ಕೆ ವಿರುದ್ಧವಾಗಿಲ್ಲ ಆದರೆ ಎಲ್ಲರೊಂದಿಗೆ ಮಾತನಾಡುವ ಮೂಲಕ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ತ್ಯಾಗಿ ತಿಳಿಸಿದ್ದಾರೆ.

ಚುನಾವಣಾ ಪ್ರಚಾರದ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಯುಸಿಸಿಯನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದರು.

ಇನ್ನೊಂದು ಕಡೆ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಅಗ್ನಿವೀರ್ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಸರ್ಕಾರ ತಾನು ತಪ್ಪು ಮಾಡಿದೆ ಎಂದು ಒಪ್ಪಿಕೊಳ್ಳಬೇಕು, ಅದು ಅಗ್ನಿವೀರ್ ವ್ಯವಸ್ಥೆಯನ್ನು ಪರಿಚಯಿಸಬಾರದಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...