Homeಮುಖಪುಟಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗೆ ಬೇಡಿಕೆ ಮುಂದಿಟ್ಟ ಎನ್‌ಡಿಎ ಮಿತ್ರಪಕ್ಷ ಜೆಡಿಯು

ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆಗೆ ಬೇಡಿಕೆ ಮುಂದಿಟ್ಟ ಎನ್‌ಡಿಎ ಮಿತ್ರಪಕ್ಷ ಜೆಡಿಯು

- Advertisement -
- Advertisement -

ಮೋದಿ ನೇತೃತ್ವದ ಎನ್‌ಡಿಎ ಸರಕಾರ ಈ ಹಿಂದೆ ಜಾರಿಗೆ ತಂದಿದ್ದ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ ಮಾಡುವಂತೆ ಎನ್‌ಡಿಎ ಮಿತ್ರಪಕ್ಷ ಜೆಡಿಯು ನಾಯಕ ಕೆ.ಸಿ.ತ್ಯಾಗಿ ಆಗ್ರಹಿಸಿದ್ದಾರೆ.

ಅಗ್ನಿವೀರ್ ಯೋಜನೆಯು ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಜನತಾ ದಳ (ಯುನೈಟೆಡ್) ನಂಬುತ್ತದೆ. ಈ ಯೋಜನೆಯಡಿ, ಯುವಕರನ್ನು ನಾಲ್ಕು ವರ್ಷಗಳವರೆಗೆ ನೇಮಿಸಿಕೊಳ್ಳಲಾಗುತ್ತದೆ. ಇದರ ನಂತರ, ಕೇವಲ 25% ಅಗ್ನಿವೀರ್‌ಗಳನ್ನಾಗಿ ಉಳಿಸಿಕೊಳ್ಳಲಾಗುತ್ತದೆ ಮತ್ತು ಉಳಿದವರನ್ನು ಬಿಡುಗಡೆ ಮಾಡಲಾಗುತ್ತದೆ. 2022ರಲ್ಲಿ ಅಗ್ನಿವೀರ್ ಯೋಜನೆ ಅನುಷ್ಠಾನಗೊಂಡಾಗಿನಿಂದ ಈ ಯೋಜನೆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

2024ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಈ ಹೊಸ ಸೇನಾ ನೇಮಕಾತಿ ಯೋಜನೆಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು.

ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಈ ಬಗ್ಗೆ ಮಾತನಾಡುತ್ತಾ, ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡು ಮಾಡುವಂತೆ ಆಗ್ರಹಿಸಿದ್ದಾರೆ. ಅಗ್ನಿವೀರ್ ಯೋಜನೆಯು ಮೊದಲಿನಿಂದಲೂ ಹೆಚ್ಚು ಟೀಕೆಗೊಳಗಾಗಿದೆ ಮತ್ತು ನಾವು ಚುನಾವಣೆಗಳಲ್ಲಿ ಅದರ ಪರಿಣಾಮವನ್ನು ನೋಡಿದ್ದೇವೆ. ಆದ್ದರಿಂದ ಸೇನಾ ನೇಮಕಾತಿಯಲ್ಲಿ ನಾವು ಬದಲಾವಣೆಗಳನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಅಗ್ನಿವೀರ್ ಯೋಜನೆ ಬಗ್ಗೆ ಒಂದು ವರ್ಗದ ಮತದಾರರು ಅಸಮಾಧಾನಗೊಂಡಿದ್ದಾರೆ. ಯೋಜನೆ ಬಗ್ಗೆ ಸಾರ್ವಜನಿಕರು ಎತ್ತಿತೋರಿಸಿರುವ ಲೋಪದೋಷಗಳನ್ನು ವಿಸ್ತೃತವಾಗಿ ಚರ್ಚಿಸಿ ತೆಗೆದುಹಾಕಬೇಕು ಎಂದು ನಮ್ಮ ಪಕ್ಷ ಬಯಸುತ್ತದೆ. ಯುಸಿಸಿ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾನೂನು ಆಯೋಗದ ಮುಖ್ಯಸ್ಥರಿಗೆ ಸಿಎಂ ಪತ್ರ ಬರೆದಿದ್ದರು. ನಾವು ಇದಕ್ಕೆ ವಿರುದ್ಧವಾಗಿಲ್ಲ ಆದರೆ ಎಲ್ಲರೊಂದಿಗೆ ಮಾತನಾಡುವ ಮೂಲಕ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ತ್ಯಾಗಿ ತಿಳಿಸಿದ್ದಾರೆ.

ಚುನಾವಣಾ ಪ್ರಚಾರದ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಯುಸಿಸಿಯನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದರು.

ಇನ್ನೊಂದು ಕಡೆ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಅಗ್ನಿವೀರ್ ಯೋಜನೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಸರ್ಕಾರ ತಾನು ತಪ್ಪು ಮಾಡಿದೆ ಎಂದು ಒಪ್ಪಿಕೊಳ್ಳಬೇಕು, ಅದು ಅಗ್ನಿವೀರ್ ವ್ಯವಸ್ಥೆಯನ್ನು ಪರಿಚಯಿಸಬಾರದಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...