Homeಮುಖಪುಟಜೆಇಇ-ನೀಟ್ 'ಮನುನೀತಿ' ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

"ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ" ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ತಮಿಳುನಾಡಿನಲ್ಲಿ ಹಲವು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ಸೂರ್ಯ, ಈ ಪ್ರವೇಶ ಪರೀಕ್ಷೆಗಳನ್ನು “ಮನುನೀತಿ”ಯ ಪರೀಕ್ಷೆಗಳು ಎಂದು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಟ್ವೀಟ್ ಮಾಡಿರುವ ಪತ್ರದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ನೀಟ್ ಪರೀಕ್ಷೆ ಮುಗಿದ ಕೆಲವು ಗಂಟೆಗಳ ನಂತರ, ಭಾನುವಾರ ಸಂಜೆ ಪತ್ರವೊಂದನ್ನು ಟ್ವೀಟ್ ಮಾಡಿ, “ಸರ್ಕಾರದ ಮೇಲೆ ಭಾರೀ ಪ್ರಮಾಣದಲ್ಲಿ ಒತ್ತಡ ಹಾಕಿ, ನೀಟ್ ವಿರುದ್ಧ ಏಕೀಕೃತ ಧ್ವನಿಯೆತ್ತಲು” ಕರೆ ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಭಾನುವಾರ ಸಂಜೆ ಬಿಡುಗಡೆ ಮಾಡಿದ ಪತ್ರದಲ್ಲಿ, “ಜೀವಕ್ಕೆ ಅಪಾಯಕಾರಿಯಾದ ಸಾಂಕ್ರಾಮಿಕ ಸಮಯದಲ್ಲಿಯೂ ಸಹ ಪರೀಕ್ಷೆಯನ್ನು ಬರೆಯುವ ಮೂಲಕ ವಿದ್ಯಾರ್ಥಿಗಳು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಒತ್ತಾಯಿಸಲ್ಪಡುತ್ತಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜನರಲ್ಲಿನ ಅಸಮಾನತೆಗಳನ್ನು ಬಹಿರಂಗಗೊಳಿಸುವ ಕಾನೂನುಗಳನ್ನು ತಂದಿದ್ದಕ್ಕಾಗಿ ಸರ್ಕಾರವನ್ನು ದೂಷಿಸಿದ ಅವರು, “ಶಿಕ್ಷಣ ನೀತಿಗಳನ್ನು ರೂಪಿಸುವವರಿಗೆ ಬಡವರು ಮತ್ತು ದೀನ ದಲಿತರ ಬಗೆಗಿನ ವಾಸ್ತವಾಂಶಗಳ ಬಗ್ಗೆ ಅರಿವಿಲ್ಲ” ಎಂದು ಆರೋಪಿಸಿದ್ದಾರೆ.

“ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ” ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಆತ್ಮಹತ್ಯೆಗಳ ಸುದ್ದಿ ಮಾಧ್ಯಮಗಳಲ್ಲಿ ನಿರ್ದಿಷ್ಟ ದಿನದ ಚರ್ಚೆಗಳಿಗೆ ಸೀಮಿತವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರು ಬರೆದಿರುವ ಟಿಪ್ಪಣಿಗಳಲ್ಲಿಯೂ ಸಹ ಕಾಗುಣಿತ ತಪ್ಪುಗಳನ್ನು ಹುಡುಕುವ ‘ಚಾಣಕ್ಯರು’ ಟಿವಿಯಲ್ಲಿ ಬಿಸಿ-ಬಿಸಿ ಚರ್ಚೆಗಳಲ್ಲಿ ತೊಡಗುತ್ತಿದ್ದಾರೆ” ಎಂದು ಮಾಧ್ಯಮಗಳ ವಿರುದ್ಧವೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಇಂತಹ ಪರೀಕ್ಷೆಗಳು ‘ಮನುನೀತಿ’ಯ ಪರೀಕ್ಷೆಗಳಾಗಿದ್ದು, ಇದು ವಿದ್ಯಾರ್ಥಿಗಳ ಅವಕಾಶಗಳನ್ನು ಮಾತ್ರವಲ್ಲದೇ, ಅವರ ಜೀವನವನ್ನೂ ಕಸಿದುಕೊಳ್ಳುತ್ತದೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಇದು ಜೀವಾವಧಿ ಶಿಕ್ಷೆಯಾಗಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಮಹಾಭಾರತದ ಕಥೆಯೊಂದನ್ನು ಉಲ್ಲೇಖಿಸಿ, ’’ಅಂದು ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ಕೇಳಿದ್ದರು. ಇಂದಿನ ಆಧುನಿಕ ದ್ರೋಣಾಚಾರ್ಯರು, 6ನೇ ತರಗತಿಯ ಮಗುವನ್ನು ಪರೀಕ್ಷೆ ಬರೆದು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ. ಇದನ್ನು ಸಾಬೀತುಪಡಿಸಿ ಮುಂದೆ ಹಾದುಹೋಗುವವರಿಗೆ ನೀಟ್ ಎಂಬ ಶಸ್ತ್ರಾಸ್ತಗಳು ಎದುರಾಗುತ್ತವೆ” ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದ 5 ಜನ ವಿದ್ಯಾರ್ಥಿಗಳು ಕಳೆದೊಂದು ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊರೊನಾ ಮಧ್ಯೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದರೂ ಸಹ ಕೇಂದ್ರ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಇದರ ನಂತರ ತಮಿಳುನಾಡಿನಲ್ಲಿ ಅಕ್ರೋಷ ಭುಗಿಲೆದ್ದು, ಹಲವರು ನೀಟ್ ವಿರುದ್ಧ ಧನಿಯೆತ್ತಿ, ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ನಿನ್ನೆ #Govt_Killed_NEET_Students ಎಂದು ಟ್ರೆಂಡಿಂಗ್ ಆಗಿತ್ತು.

ಈ ಮಧ್ಯೆ, ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ ಅವರು ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದು ನಟ ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ಪ್ರಾರಂಭಿಸಲು ಕೋರಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌ನಲ್ಲಿ #TNStandWithSuriya ಎಂದು ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 65 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.


ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...