Homeಮುಖಪುಟಜೆಇಇ-ನೀಟ್ 'ಮನುನೀತಿ' ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

"ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ" ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ತಮಿಳುನಾಡಿನಲ್ಲಿ ಹಲವು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ಸೂರ್ಯ, ಈ ಪ್ರವೇಶ ಪರೀಕ್ಷೆಗಳನ್ನು “ಮನುನೀತಿ”ಯ ಪರೀಕ್ಷೆಗಳು ಎಂದು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಟ್ವೀಟ್ ಮಾಡಿರುವ ಪತ್ರದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ನೀಟ್ ಪರೀಕ್ಷೆ ಮುಗಿದ ಕೆಲವು ಗಂಟೆಗಳ ನಂತರ, ಭಾನುವಾರ ಸಂಜೆ ಪತ್ರವೊಂದನ್ನು ಟ್ವೀಟ್ ಮಾಡಿ, “ಸರ್ಕಾರದ ಮೇಲೆ ಭಾರೀ ಪ್ರಮಾಣದಲ್ಲಿ ಒತ್ತಡ ಹಾಕಿ, ನೀಟ್ ವಿರುದ್ಧ ಏಕೀಕೃತ ಧ್ವನಿಯೆತ್ತಲು” ಕರೆ ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಭಾನುವಾರ ಸಂಜೆ ಬಿಡುಗಡೆ ಮಾಡಿದ ಪತ್ರದಲ್ಲಿ, “ಜೀವಕ್ಕೆ ಅಪಾಯಕಾರಿಯಾದ ಸಾಂಕ್ರಾಮಿಕ ಸಮಯದಲ್ಲಿಯೂ ಸಹ ಪರೀಕ್ಷೆಯನ್ನು ಬರೆಯುವ ಮೂಲಕ ವಿದ್ಯಾರ್ಥಿಗಳು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಒತ್ತಾಯಿಸಲ್ಪಡುತ್ತಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ವಾರದಲ್ಲಿ ತಮಿಳುನಾಡಿನ ಐವರು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ!: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಜನರಲ್ಲಿನ ಅಸಮಾನತೆಗಳನ್ನು ಬಹಿರಂಗಗೊಳಿಸುವ ಕಾನೂನುಗಳನ್ನು ತಂದಿದ್ದಕ್ಕಾಗಿ ಸರ್ಕಾರವನ್ನು ದೂಷಿಸಿದ ಅವರು, “ಶಿಕ್ಷಣ ನೀತಿಗಳನ್ನು ರೂಪಿಸುವವರಿಗೆ ಬಡವರು ಮತ್ತು ದೀನ ದಲಿತರ ಬಗೆಗಿನ ವಾಸ್ತವಾಂಶಗಳ ಬಗ್ಗೆ ಅರಿವಿಲ್ಲ” ಎಂದು ಆರೋಪಿಸಿದ್ದಾರೆ.

“ದೇಶದ ನ್ಯಾಯಾಲಯಗಳಲ್ಲಿಯೇ, ಸೋಂಕಿನ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿರುವಾಗ, ಅದೇ ನ್ಯಾಯಾಲಯವು ನಿರ್ಭಯವಾಗಿ ಮತ್ತು ಖಡ್ಡಾಯವಾಗಿ ಪರೀಕ್ಷೆಯನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಆದೇಶಿಸಿದೆ” ಎಂದು ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಆತ್ಮಹತ್ಯೆಗಳ ಸುದ್ದಿ ಮಾಧ್ಯಮಗಳಲ್ಲಿ ನಿರ್ದಿಷ್ಟ ದಿನದ ಚರ್ಚೆಗಳಿಗೆ ಸೀಮಿತವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರು ಬರೆದಿರುವ ಟಿಪ್ಪಣಿಗಳಲ್ಲಿಯೂ ಸಹ ಕಾಗುಣಿತ ತಪ್ಪುಗಳನ್ನು ಹುಡುಕುವ ‘ಚಾಣಕ್ಯರು’ ಟಿವಿಯಲ್ಲಿ ಬಿಸಿ-ಬಿಸಿ ಚರ್ಚೆಗಳಲ್ಲಿ ತೊಡಗುತ್ತಿದ್ದಾರೆ” ಎಂದು ಮಾಧ್ಯಮಗಳ ವಿರುದ್ಧವೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಇಂತಹ ಪರೀಕ್ಷೆಗಳು ‘ಮನುನೀತಿ’ಯ ಪರೀಕ್ಷೆಗಳಾಗಿದ್ದು, ಇದು ವಿದ್ಯಾರ್ಥಿಗಳ ಅವಕಾಶಗಳನ್ನು ಮಾತ್ರವಲ್ಲದೇ, ಅವರ ಜೀವನವನ್ನೂ ಕಸಿದುಕೊಳ್ಳುತ್ತದೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಇದು ಜೀವಾವಧಿ ಶಿಕ್ಷೆಯಾಗಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

ಮಹಾಭಾರತದ ಕಥೆಯೊಂದನ್ನು ಉಲ್ಲೇಖಿಸಿ, ’’ಅಂದು ದ್ರೋಣಾಚಾರ್ಯರು ಏಕಲವ್ಯನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ಕೇಳಿದ್ದರು. ಇಂದಿನ ಆಧುನಿಕ ದ್ರೋಣಾಚಾರ್ಯರು, 6ನೇ ತರಗತಿಯ ಮಗುವನ್ನು ಪರೀಕ್ಷೆ ಬರೆದು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ. ಇದನ್ನು ಸಾಬೀತುಪಡಿಸಿ ಮುಂದೆ ಹಾದುಹೋಗುವವರಿಗೆ ನೀಟ್ ಎಂಬ ಶಸ್ತ್ರಾಸ್ತಗಳು ಎದುರಾಗುತ್ತವೆ” ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದ 5 ಜನ ವಿದ್ಯಾರ್ಥಿಗಳು ಕಳೆದೊಂದು ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊರೊನಾ ಮಧ್ಯೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿದ್ದರೂ ಸಹ ಕೇಂದ್ರ ಪರೀಕ್ಷೆ ನಡೆಸುತ್ತಿರುವುದರಿಂದ ಒತ್ತಡಕ್ಕೊಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಇದರ ನಂತರ ತಮಿಳುನಾಡಿನಲ್ಲಿ ಅಕ್ರೋಷ ಭುಗಿಲೆದ್ದು, ಹಲವರು ನೀಟ್ ವಿರುದ್ಧ ಧನಿಯೆತ್ತಿ, ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ನಿನ್ನೆ #Govt_Killed_NEET_Students ಎಂದು ಟ್ರೆಂಡಿಂಗ್ ಆಗಿತ್ತು.

ಈ ಮಧ್ಯೆ, ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣ್ಯಂ ಅವರು ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದು ನಟ ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ಪ್ರಾರಂಭಿಸಲು ಕೋರಿದ್ದಾರೆ.

ಇದನ್ನು ವಿರೋಧಿಸಿ ಟ್ವಿಟರ್‌ನಲ್ಲಿ #TNStandWithSuriya ಎಂದು ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 65 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.


ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...