Homeಮುಖಪುಟಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ "ಜೀವನದ ಹಕ್ಕನ್ನು" ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

- Advertisement -
- Advertisement -

ಕೊರೊನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪರೀಕ್ಷೆಗಳಾದ ಜೆಇಇ ಮತ್ತು ನೀಟ್ ಮುಂದೂಡುವ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಎರಡನೇ ಬಾರಿಗೆ ತಿರಸ್ಕರಿಸಿದೆ. ವಿರೋಧ ಪಕ್ಷದ ಆರು ರಾಜ್ಯಗಳು ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶವನ್ನು ಪರಿಶೀಲಿಸುವಂತೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದವು.

ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ನಡೆಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ತಮ್ಮ ನಿಲುವುಗಳನ್ನು ಬಿಟ್ಟುಕೊಡುತ್ತಿಲ್ಲ. ಈಗಾಗಲೇ ಸೆಪ್ಟಂಬರ್ 1 ರಿಂದ ಜೆಇಇ ಪರೀಕ್ಷೆ ಪ್ರಾರಂಭವಾಗಿತ್ತು. ಆದರೆ ಪರೀಕ್ಷೆಯ ಮೊದಲ ದಿನ, 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು.

ಬಿಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ. ಅಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದವು.

ಇದನ್ನೂ ಓದಿ: ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ವಿದ್ಯಾರ್ಥಿ ಸಂಘಟನೆಗಳು ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದವು. ಆದರೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿಯವರಿದ್ದ ನ್ಯಾಯಪೀಠ “ರಾಜ್ಯ ಸರ್ಕಾರಗಳ ಅರ್ಜಿ ಪರಿಶೀಲಿಸಿದ ನಂತರ ಅರ್ಜಿಯಲ್ಲಿ ಯಾವುದೇ ಪರಿಗಣಿಸುವ ಅಂಶಗಳಿಲ್ಲ, ನಮ್ಮ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಲು ಯಾವುದೇ ಉದಾಹರಣೆ ಇಲ್ಲ” ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸುತ್ತಿದ್ದಾರೆ.

PC: India.com

ಈ ಹಿಂದೆ 11 ರಾಜ್ಯಗಳ 11 ವಿದ್ಯಾರ್ಥಿಗಳು ಇದೇ ರೀತಿಯ ಮನವಿ ಸಲ್ಲಿಸಿದ್ದರು. ಆದರೆ ಆಗಸ್ಟ್ 17 ರಂದು ಸುಪ್ರೀಂ ಕೋರ್ಟ್ ಆ ಅರ್ಜಿ ತಿರಸ್ಕರಿಸಿತ್ತು. ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ “ಜೀವನದ ಹಕ್ಕನ್ನು” ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

ಆಗಸ್ಟ್ 17 ರ ಆದೇಶ ಪರಿಶೀಲಿಸದಿದ್ದರೆ ನಮ್ಮ ದೇಶದ ವಿದ್ಯಾರ್ಥಿ ಸಮುದಾಯಕ್ಕೆ ಗಂಭೀರ ಮತ್ತು ಸರಿಪಡಿಸಲಾಗದ ಹಾನಿ ಮತ್ತು ಗಾಯಗಳು ಉಂಟಾಗುತ್ತವೆ ಮತ್ತು ನೀಟ್‌ಗೆ ಹಾಜರಾಗುವ ವಿದ್ಯಾರ್ಥಿಗಳು / ಅಭ್ಯರ್ಥಿಗಳ ಆರೋಗ್ಯ, ಕಲ್ಯಾಣ ಮತ್ತು ಸುರಕ್ಷತೆ ಮಾತ್ರವಲ್ಲದೇ ಜೆಇಇ ಪರೀಕ್ಷೆಗಳು ದುರ್ಬಲಗೊಳ್ಳುತ್ತವೆ ಎಂದು ರಾಜ್ಯಗಳ ಮನವಿಯಲ್ಲಿ ತಿಳಿಸಲಾಗಿತ್ತು

ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಮಹಾರಾಷ್ಟ್ರ, ಬಂಗಾಳ, ಪಂಜಾಬ್, ರಾಜಸ್ತಾನ, ಜಾರ್ಖಂಡ್, ಛತ್ತಿಸ್‌ಗಢ ಮತ್ತು ಪುದುಚೇರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರಲು ನಿರ್ಧರಿಸಿದ್ದವು.

ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ, “ಜೀವನವು ಮುಂದುವರಿಯಬೇಕು” ಮತ್ತು “ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳು ಅಮೂಲ್ಯವಾದ ವರ್ಷವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ” ಎಂದು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು.

ಜೆಇಇ  ಪರೀಕ್ಷೆಯು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದೆ ಮತ್ತು ಸೆಪ್ಟೆಂಬರ್ 6 ರವರೆಗೆ ಮುಂದುವರಿಯಲಿದೆ. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದೆ. ನೀಟ್ ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...