Homeಮುಖಪುಟಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ "ಜೀವನದ ಹಕ್ಕನ್ನು" ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

- Advertisement -
- Advertisement -

ಕೊರೊನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪರೀಕ್ಷೆಗಳಾದ ಜೆಇಇ ಮತ್ತು ನೀಟ್ ಮುಂದೂಡುವ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಎರಡನೇ ಬಾರಿಗೆ ತಿರಸ್ಕರಿಸಿದೆ. ವಿರೋಧ ಪಕ್ಷದ ಆರು ರಾಜ್ಯಗಳು ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶವನ್ನು ಪರಿಶೀಲಿಸುವಂತೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದವು.

ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ನಡೆಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ತಮ್ಮ ನಿಲುವುಗಳನ್ನು ಬಿಟ್ಟುಕೊಡುತ್ತಿಲ್ಲ. ಈಗಾಗಲೇ ಸೆಪ್ಟಂಬರ್ 1 ರಿಂದ ಜೆಇಇ ಪರೀಕ್ಷೆ ಪ್ರಾರಂಭವಾಗಿತ್ತು. ಆದರೆ ಪರೀಕ್ಷೆಯ ಮೊದಲ ದಿನ, 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು.

ಬಿಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ. ಅಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದವು.

ಇದನ್ನೂ ಓದಿ: ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ವಿದ್ಯಾರ್ಥಿ ಸಂಘಟನೆಗಳು ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದವು. ಆದರೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿಯವರಿದ್ದ ನ್ಯಾಯಪೀಠ “ರಾಜ್ಯ ಸರ್ಕಾರಗಳ ಅರ್ಜಿ ಪರಿಶೀಲಿಸಿದ ನಂತರ ಅರ್ಜಿಯಲ್ಲಿ ಯಾವುದೇ ಪರಿಗಣಿಸುವ ಅಂಶಗಳಿಲ್ಲ, ನಮ್ಮ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಲು ಯಾವುದೇ ಉದಾಹರಣೆ ಇಲ್ಲ” ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸುತ್ತಿದ್ದಾರೆ.

PC: India.com

ಈ ಹಿಂದೆ 11 ರಾಜ್ಯಗಳ 11 ವಿದ್ಯಾರ್ಥಿಗಳು ಇದೇ ರೀತಿಯ ಮನವಿ ಸಲ್ಲಿಸಿದ್ದರು. ಆದರೆ ಆಗಸ್ಟ್ 17 ರಂದು ಸುಪ್ರೀಂ ಕೋರ್ಟ್ ಆ ಅರ್ಜಿ ತಿರಸ್ಕರಿಸಿತ್ತು. ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ “ಜೀವನದ ಹಕ್ಕನ್ನು” ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

ಆಗಸ್ಟ್ 17 ರ ಆದೇಶ ಪರಿಶೀಲಿಸದಿದ್ದರೆ ನಮ್ಮ ದೇಶದ ವಿದ್ಯಾರ್ಥಿ ಸಮುದಾಯಕ್ಕೆ ಗಂಭೀರ ಮತ್ತು ಸರಿಪಡಿಸಲಾಗದ ಹಾನಿ ಮತ್ತು ಗಾಯಗಳು ಉಂಟಾಗುತ್ತವೆ ಮತ್ತು ನೀಟ್‌ಗೆ ಹಾಜರಾಗುವ ವಿದ್ಯಾರ್ಥಿಗಳು / ಅಭ್ಯರ್ಥಿಗಳ ಆರೋಗ್ಯ, ಕಲ್ಯಾಣ ಮತ್ತು ಸುರಕ್ಷತೆ ಮಾತ್ರವಲ್ಲದೇ ಜೆಇಇ ಪರೀಕ್ಷೆಗಳು ದುರ್ಬಲಗೊಳ್ಳುತ್ತವೆ ಎಂದು ರಾಜ್ಯಗಳ ಮನವಿಯಲ್ಲಿ ತಿಳಿಸಲಾಗಿತ್ತು

ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಮಹಾರಾಷ್ಟ್ರ, ಬಂಗಾಳ, ಪಂಜಾಬ್, ರಾಜಸ್ತಾನ, ಜಾರ್ಖಂಡ್, ಛತ್ತಿಸ್‌ಗಢ ಮತ್ತು ಪುದುಚೇರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರಲು ನಿರ್ಧರಿಸಿದ್ದವು.

ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ, “ಜೀವನವು ಮುಂದುವರಿಯಬೇಕು” ಮತ್ತು “ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳು ಅಮೂಲ್ಯವಾದ ವರ್ಷವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ” ಎಂದು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು.

ಜೆಇಇ  ಪರೀಕ್ಷೆಯು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದೆ ಮತ್ತು ಸೆಪ್ಟೆಂಬರ್ 6 ರವರೆಗೆ ಮುಂದುವರಿಯಲಿದೆ. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದೆ. ನೀಟ್ ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....