Homeಮುಖಪುಟಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ "ಜೀವನದ ಹಕ್ಕನ್ನು" ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

- Advertisement -
- Advertisement -

ಕೊರೊನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪರೀಕ್ಷೆಗಳಾದ ಜೆಇಇ ಮತ್ತು ನೀಟ್ ಮುಂದೂಡುವ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಎರಡನೇ ಬಾರಿಗೆ ತಿರಸ್ಕರಿಸಿದೆ. ವಿರೋಧ ಪಕ್ಷದ ಆರು ರಾಜ್ಯಗಳು ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶವನ್ನು ಪರಿಶೀಲಿಸುವಂತೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದವು.

ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ನಡೆಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ತಮ್ಮ ನಿಲುವುಗಳನ್ನು ಬಿಟ್ಟುಕೊಡುತ್ತಿಲ್ಲ. ಈಗಾಗಲೇ ಸೆಪ್ಟಂಬರ್ 1 ರಿಂದ ಜೆಇಇ ಪರೀಕ್ಷೆ ಪ್ರಾರಂಭವಾಗಿತ್ತು. ಆದರೆ ಪರೀಕ್ಷೆಯ ಮೊದಲ ದಿನ, 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು.

ಬಿಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ. ಅಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದವು.

ಇದನ್ನೂ ಓದಿ: ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ವಿದ್ಯಾರ್ಥಿ ಸಂಘಟನೆಗಳು ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದವು. ಆದರೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿಯವರಿದ್ದ ನ್ಯಾಯಪೀಠ “ರಾಜ್ಯ ಸರ್ಕಾರಗಳ ಅರ್ಜಿ ಪರಿಶೀಲಿಸಿದ ನಂತರ ಅರ್ಜಿಯಲ್ಲಿ ಯಾವುದೇ ಪರಿಗಣಿಸುವ ಅಂಶಗಳಿಲ್ಲ, ನಮ್ಮ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಲು ಯಾವುದೇ ಉದಾಹರಣೆ ಇಲ್ಲ” ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸುತ್ತಿದ್ದಾರೆ.

PC: India.com

ಈ ಹಿಂದೆ 11 ರಾಜ್ಯಗಳ 11 ವಿದ್ಯಾರ್ಥಿಗಳು ಇದೇ ರೀತಿಯ ಮನವಿ ಸಲ್ಲಿಸಿದ್ದರು. ಆದರೆ ಆಗಸ್ಟ್ 17 ರಂದು ಸುಪ್ರೀಂ ಕೋರ್ಟ್ ಆ ಅರ್ಜಿ ತಿರಸ್ಕರಿಸಿತ್ತು. ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ “ಜೀವನದ ಹಕ್ಕನ್ನು” ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

ಆಗಸ್ಟ್ 17 ರ ಆದೇಶ ಪರಿಶೀಲಿಸದಿದ್ದರೆ ನಮ್ಮ ದೇಶದ ವಿದ್ಯಾರ್ಥಿ ಸಮುದಾಯಕ್ಕೆ ಗಂಭೀರ ಮತ್ತು ಸರಿಪಡಿಸಲಾಗದ ಹಾನಿ ಮತ್ತು ಗಾಯಗಳು ಉಂಟಾಗುತ್ತವೆ ಮತ್ತು ನೀಟ್‌ಗೆ ಹಾಜರಾಗುವ ವಿದ್ಯಾರ್ಥಿಗಳು / ಅಭ್ಯರ್ಥಿಗಳ ಆರೋಗ್ಯ, ಕಲ್ಯಾಣ ಮತ್ತು ಸುರಕ್ಷತೆ ಮಾತ್ರವಲ್ಲದೇ ಜೆಇಇ ಪರೀಕ್ಷೆಗಳು ದುರ್ಬಲಗೊಳ್ಳುತ್ತವೆ ಎಂದು ರಾಜ್ಯಗಳ ಮನವಿಯಲ್ಲಿ ತಿಳಿಸಲಾಗಿತ್ತು

ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಮಹಾರಾಷ್ಟ್ರ, ಬಂಗಾಳ, ಪಂಜಾಬ್, ರಾಜಸ್ತಾನ, ಜಾರ್ಖಂಡ್, ಛತ್ತಿಸ್‌ಗಢ ಮತ್ತು ಪುದುಚೇರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರಲು ನಿರ್ಧರಿಸಿದ್ದವು.

ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ, “ಜೀವನವು ಮುಂದುವರಿಯಬೇಕು” ಮತ್ತು “ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳು ಅಮೂಲ್ಯವಾದ ವರ್ಷವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ” ಎಂದು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು.

ಜೆಇಇ  ಪರೀಕ್ಷೆಯು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದೆ ಮತ್ತು ಸೆಪ್ಟೆಂಬರ್ 6 ರವರೆಗೆ ಮುಂದುವರಿಯಲಿದೆ. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದೆ. ನೀಟ್ ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...