Homeಮುಖಪುಟಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆ: ವಿರೋಧ ಪಕ್ಷಗಳ ಅರ್ಜಿ ವಜಾಗೊಳಿಸಿದ ಸುಪ್ರೀಂ

ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ "ಜೀವನದ ಹಕ್ಕನ್ನು" ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

- Advertisement -
- Advertisement -

ಕೊರೊನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪರೀಕ್ಷೆಗಳಾದ ಜೆಇಇ ಮತ್ತು ನೀಟ್ ಮುಂದೂಡುವ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಎರಡನೇ ಬಾರಿಗೆ ತಿರಸ್ಕರಿಸಿದೆ. ವಿರೋಧ ಪಕ್ಷದ ಆರು ರಾಜ್ಯಗಳು ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶವನ್ನು ಪರಿಶೀಲಿಸುವಂತೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದವು.

ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ನಡೆಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ತಮ್ಮ ನಿಲುವುಗಳನ್ನು ಬಿಟ್ಟುಕೊಡುತ್ತಿಲ್ಲ. ಈಗಾಗಲೇ ಸೆಪ್ಟಂಬರ್ 1 ರಿಂದ ಜೆಇಇ ಪರೀಕ್ಷೆ ಪ್ರಾರಂಭವಾಗಿತ್ತು. ಆದರೆ ಪರೀಕ್ಷೆಯ ಮೊದಲ ದಿನ, 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು.

ಬಿಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ. ಅಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದವು.

ಇದನ್ನೂ ಓದಿ: ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ವಿದ್ಯಾರ್ಥಿ ಸಂಘಟನೆಗಳು ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದವು. ಆದರೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿಯವರಿದ್ದ ನ್ಯಾಯಪೀಠ “ರಾಜ್ಯ ಸರ್ಕಾರಗಳ ಅರ್ಜಿ ಪರಿಶೀಲಿಸಿದ ನಂತರ ಅರ್ಜಿಯಲ್ಲಿ ಯಾವುದೇ ಪರಿಗಣಿಸುವ ಅಂಶಗಳಿಲ್ಲ, ನಮ್ಮ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಲು ಯಾವುದೇ ಉದಾಹರಣೆ ಇಲ್ಲ” ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸುತ್ತಿದ್ದಾರೆ.

PC: India.com

ಈ ಹಿಂದೆ 11 ರಾಜ್ಯಗಳ 11 ವಿದ್ಯಾರ್ಥಿಗಳು ಇದೇ ರೀತಿಯ ಮನವಿ ಸಲ್ಲಿಸಿದ್ದರು. ಆದರೆ ಆಗಸ್ಟ್ 17 ರಂದು ಸುಪ್ರೀಂ ಕೋರ್ಟ್ ಆ ಅರ್ಜಿ ತಿರಸ್ಕರಿಸಿತ್ತು. ಉನ್ನತ ನ್ಯಾಯಾಲಯದ ಆದೇಶವು ವಿದ್ಯಾರ್ಥಿಗಳ “ಜೀವನದ ಹಕ್ಕನ್ನು” ಭದ್ರಪಡಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ರಾಜ್ಯಗಳು ಹೇಳಿವೆ.

ಆಗಸ್ಟ್ 17 ರ ಆದೇಶ ಪರಿಶೀಲಿಸದಿದ್ದರೆ ನಮ್ಮ ದೇಶದ ವಿದ್ಯಾರ್ಥಿ ಸಮುದಾಯಕ್ಕೆ ಗಂಭೀರ ಮತ್ತು ಸರಿಪಡಿಸಲಾಗದ ಹಾನಿ ಮತ್ತು ಗಾಯಗಳು ಉಂಟಾಗುತ್ತವೆ ಮತ್ತು ನೀಟ್‌ಗೆ ಹಾಜರಾಗುವ ವಿದ್ಯಾರ್ಥಿಗಳು / ಅಭ್ಯರ್ಥಿಗಳ ಆರೋಗ್ಯ, ಕಲ್ಯಾಣ ಮತ್ತು ಸುರಕ್ಷತೆ ಮಾತ್ರವಲ್ಲದೇ ಜೆಇಇ ಪರೀಕ್ಷೆಗಳು ದುರ್ಬಲಗೊಳ್ಳುತ್ತವೆ ಎಂದು ರಾಜ್ಯಗಳ ಮನವಿಯಲ್ಲಿ ತಿಳಿಸಲಾಗಿತ್ತು

ಇದನ್ನೂ ಓದಿ: ಜೆಇಇ, ನೀಟ್ ಪರೀಕ್ಷೆಗಳ ಬಗ್ಗೆ ಚರ್ಚಿಸಿ ಎಂದರೆ, ಪ್ರಧಾನಿ, ಗೊಂಬೆಗಳ ಬಗ್ಗೆ ಮಾತನಾಡಿದ್ದಾರೆ: ರಾಹುಲ್ ಗಾಂಧಿ

ಮಹಾರಾಷ್ಟ್ರ, ಬಂಗಾಳ, ಪಂಜಾಬ್, ರಾಜಸ್ತಾನ, ಜಾರ್ಖಂಡ್, ಛತ್ತಿಸ್‌ಗಢ ಮತ್ತು ಪುದುಚೇರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರಲು ನಿರ್ಧರಿಸಿದ್ದವು.

ಸುಪ್ರೀಂಕೋರ್ಟ್ ತನ್ನ ಹಿಂದಿನ ಆದೇಶದಲ್ಲಿ, “ಜೀವನವು ಮುಂದುವರಿಯಬೇಕು” ಮತ್ತು “ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳು ಅಮೂಲ್ಯವಾದ ವರ್ಷವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ” ಎಂದು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು.

ಜೆಇಇ  ಪರೀಕ್ಷೆಯು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದೆ ಮತ್ತು ಸೆಪ್ಟೆಂಬರ್ 6 ರವರೆಗೆ ಮುಂದುವರಿಯಲಿದೆ. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದೆ. ನೀಟ್ ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...