Homeಮುಖಪುಟಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

'ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವಂತೆ ಮಾಡುತ್ತಿರುವುದು ಸರಿಯಲ್ಲ. ಅದರಲ್ಲೂ ಕೊರೊನಾ ಮತ್ತು ಪ್ರವಾಹದಂತಹ ಕೆಟ್ಟ ಪರಿಸ್ಥಿತಿಯಲ್ಲಿ ಈ ನಿರ್ಧಾರ ತಪ್ಪು. ಹಾಗಾಗಿ ಈ ವಿದ್ಯಾರ್ಥಿಗಳ ಪರ ನಾನೂ ದನಿಯೆತ್ತುತ್ತೇನೆ' ಎಂದು ಗ್ರೇಟಾ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಪರಿಸರ ಕಾರ್ಯಕರ್ತೆ ಮತ್ತು ಜಾಗತಿಕ ಐಕಾನ್ ಗ್ರೆಟಾ ಥನ್‌ಬರ್ಗ್, ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ರಾಷ್ಟ್ರವ್ಯಾಪಿ ಜೆಇಇ-ನೀಟ್ ಪರೀಕ್ಷೆ ಮುಂದೂಡಿ #PostponeJEE_NEETinCOVID ಆಂದೋಲನಕ್ಕೆ ಬೆಂಬಲ ಸೂಚಿಸಿ ದನಿ ಎತ್ತಿದ್ದಾರೆ.

“ನಾನು #PostponeJEE_NEETinCOVID ಗೆ ಬೆಂಬಲ ನೀಡುತ್ತೇನೆ” ಎಂದು ಟ್ವಿಟರ್‌ನಲ್ಲಿ 4.1 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಗ್ರೇಟಾ ಥನ್‌ಬರ್ಗ್ ಬರೆದುಕೊಂಡಿದ್ದಾರೆ.

ಅಲ್ಲದೆ ಈಗಾಗಲೇ #MODIJI_POSTPONEJEENEET ಹ್ಯಾಶ್‌ಟ್ಯಾಗ್ ಟ್ವಿಟ್ಟರ್ ಟ್ರೆಂಡಿಂಗ್ ನಲ್ಲಿ 4 ನೇ ಸ್ಥಾನದಲ್ಲಿದೆ.

‘ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವಂತೆ ಮಾಡುತ್ತಿರುವುದು ಸರಿಯಲ್ಲ. ಅದರಲ್ಲೂ ಕೊರೊನಾ ಮತ್ತು ಪ್ರವಾಹದಂತಹ ಕೆಟ್ಟ ಪರಿಸ್ಥಿತಿಯಲ್ಲಿ ಈ ನಿರ್ಧಾರ ತಪ್ಪು. ಹಾಗಾಗಿ ಈ ವಿದ್ಯಾರ್ಥಿಗಳ ಪರ ನಾನೂ ದನಿಯೆತ್ತುತ್ತೇನೆ’ ಎಂದು ಗ್ರೇಟಾ ಟ್ವೀಟ್ ಮಾಡಿದ್ದಾರೆ.

ಇವರ ಟ್ವೀಟ್ ಅನ್ನು 50 ಸಾವಿರಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದು, ಸುಮಾರು 37 ಸಾವಿರ ರೀಟ್ವೀಟ್ ಗಳು ದಾಖಲಾಗಿವೆ.

ಈ ಆಂಧೋಲನಕ್ಕೆ ಪಕ್ಷಾತೀತವಾಗಿ ಹಲವಾರು ಬೆಂಬಲ ನಿಡಿದ್ದಾರೆ. ದೇಶದಾದ್ಯಂತ ಕೊರೊನಾ ಮತ್ತು ಪ್ರವಾಹದ ತೀವ್ರ ಒತ್ತಡವಿರುವುದರಿಮದ ಪೋಷಕರು ಮತ್ತು ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಕುರಿತು ಪ್ರಧಾನಮಂತ್ರಿಗೆ ಪತ್ರವೊಂದನ್ನು ಬರೆದು ಈ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿದ್ದಾರೆ.

“ವಿದ್ಯಾರ್ಥಿಗಳು ಮತ್ತು ಪೋಷಕರು ಅಪಾರ ಮಾನಸಿಕ ಒತ್ತಡದಲ್ಲಿದ್ದಾರೆ. ಸಾರ್ವಜನಿಕ ಸಾರಿಗೆಯ ಮೇಲಿನ ಪ್ರಸ್ತುತ ನಿರ್ಬಂಧಗಳನ್ನು ಪರಿಗಣಿಸಿ, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಎಲ್ಲಾ ಆಕಾಂಕ್ಷಿಗಳೂ ಪ್ರವೇಶಿಸಲಾಗುವುದಿಲ್ಲ” ಎಂದು ತಮಿಳುನಾಡಿನ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಕೇಂದ್ರ ಶಿಕ್ಷಣ ಸಚಿವ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ದನಿಯೆತ್ತಿದ್ದಾರೆ.

ಆದರೆ ಶಿಕ್ಷಣ ಸಚಿವಾಲಯವು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವುದಿಲ್ಲ ಎಂದು ಹೇಳಿದೆ. ಇವೆರಡೂ ಸೆಪ್ಟೆಂಬರ್ ಮೊದಲಾರ್ಧದಲ್ಲಿ ನಡೆಯಲಿವೆ. ಈ ವಿಷಯದ ಕುರಿತಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, “ಜೀವನವನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದೆ.

ಜೆಇಇ, ನೀಟ್ ಪರೀಕ್ಷೆಗಳನ್ನು ಮೇ ತಿಂಗಳಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಯಲ್ಲಿದ್ದಾಗ ರದ್ದುಪಡಿಸಲಾಯಿತು. ಆದರೆ ಆಗ ಒಟ್ಟು ಕೊರೊನಾ ವೈರಸ್ ಪ್ರಕರಣಗಳು ಕಡಿಮೆ ಇದ್ದವು. ಆಗಸ್ಟ್ 8 ರಿಂದ ಭಾರತವು ಕೊರೊನಾ ವೈರಸ್ ಅಂಕಿಅಂಶಗಳಲ್ಲಿ ವಿಶ್ವದ ಅತಿ ಹೆಚ್ಚು ದೈನಂದಿನ ಪ್ರಕರಣಗಳನ್ನು ದಾಖಲಿಸುತ್ತಿದೆ. ಈಗಾಗಲೇ 31 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಸಾವಿನ ಸಂಖ್ಯೆ 58,390 ಕ್ಕೆ ಏರಿದೆ. ಈಗ ಪರೀಕ್ಷೆ ನಡೆಸಿಯೇ ಸಿದ್ದ ಎಂದು ಸರ್ಕಾರ ನಿರ್ಧರಿಸಿದೆ.


ಇದನ್ನೂ ಓದಿ: ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆ ಮುಂದೂಡುವ ಮನವಿ ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...