Homeಮುಖಪುಟಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

'ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವಂತೆ ಮಾಡುತ್ತಿರುವುದು ಸರಿಯಲ್ಲ. ಅದರಲ್ಲೂ ಕೊರೊನಾ ಮತ್ತು ಪ್ರವಾಹದಂತಹ ಕೆಟ್ಟ ಪರಿಸ್ಥಿತಿಯಲ್ಲಿ ಈ ನಿರ್ಧಾರ ತಪ್ಪು. ಹಾಗಾಗಿ ಈ ವಿದ್ಯಾರ್ಥಿಗಳ ಪರ ನಾನೂ ದನಿಯೆತ್ತುತ್ತೇನೆ' ಎಂದು ಗ್ರೇಟಾ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಪರಿಸರ ಕಾರ್ಯಕರ್ತೆ ಮತ್ತು ಜಾಗತಿಕ ಐಕಾನ್ ಗ್ರೆಟಾ ಥನ್‌ಬರ್ಗ್, ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ರಾಷ್ಟ್ರವ್ಯಾಪಿ ಜೆಇಇ-ನೀಟ್ ಪರೀಕ್ಷೆ ಮುಂದೂಡಿ #PostponeJEE_NEETinCOVID ಆಂದೋಲನಕ್ಕೆ ಬೆಂಬಲ ಸೂಚಿಸಿ ದನಿ ಎತ್ತಿದ್ದಾರೆ.

“ನಾನು #PostponeJEE_NEETinCOVID ಗೆ ಬೆಂಬಲ ನೀಡುತ್ತೇನೆ” ಎಂದು ಟ್ವಿಟರ್‌ನಲ್ಲಿ 4.1 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಗ್ರೇಟಾ ಥನ್‌ಬರ್ಗ್ ಬರೆದುಕೊಂಡಿದ್ದಾರೆ.

ಅಲ್ಲದೆ ಈಗಾಗಲೇ #MODIJI_POSTPONEJEENEET ಹ್ಯಾಶ್‌ಟ್ಯಾಗ್ ಟ್ವಿಟ್ಟರ್ ಟ್ರೆಂಡಿಂಗ್ ನಲ್ಲಿ 4 ನೇ ಸ್ಥಾನದಲ್ಲಿದೆ.

‘ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವಂತೆ ಮಾಡುತ್ತಿರುವುದು ಸರಿಯಲ್ಲ. ಅದರಲ್ಲೂ ಕೊರೊನಾ ಮತ್ತು ಪ್ರವಾಹದಂತಹ ಕೆಟ್ಟ ಪರಿಸ್ಥಿತಿಯಲ್ಲಿ ಈ ನಿರ್ಧಾರ ತಪ್ಪು. ಹಾಗಾಗಿ ಈ ವಿದ್ಯಾರ್ಥಿಗಳ ಪರ ನಾನೂ ದನಿಯೆತ್ತುತ್ತೇನೆ’ ಎಂದು ಗ್ರೇಟಾ ಟ್ವೀಟ್ ಮಾಡಿದ್ದಾರೆ.

ಇವರ ಟ್ವೀಟ್ ಅನ್ನು 50 ಸಾವಿರಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದು, ಸುಮಾರು 37 ಸಾವಿರ ರೀಟ್ವೀಟ್ ಗಳು ದಾಖಲಾಗಿವೆ.

ಈ ಆಂಧೋಲನಕ್ಕೆ ಪಕ್ಷಾತೀತವಾಗಿ ಹಲವಾರು ಬೆಂಬಲ ನಿಡಿದ್ದಾರೆ. ದೇಶದಾದ್ಯಂತ ಕೊರೊನಾ ಮತ್ತು ಪ್ರವಾಹದ ತೀವ್ರ ಒತ್ತಡವಿರುವುದರಿಮದ ಪೋಷಕರು ಮತ್ತು ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಕುರಿತು ಪ್ರಧಾನಮಂತ್ರಿಗೆ ಪತ್ರವೊಂದನ್ನು ಬರೆದು ಈ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿದ್ದಾರೆ.

“ವಿದ್ಯಾರ್ಥಿಗಳು ಮತ್ತು ಪೋಷಕರು ಅಪಾರ ಮಾನಸಿಕ ಒತ್ತಡದಲ್ಲಿದ್ದಾರೆ. ಸಾರ್ವಜನಿಕ ಸಾರಿಗೆಯ ಮೇಲಿನ ಪ್ರಸ್ತುತ ನಿರ್ಬಂಧಗಳನ್ನು ಪರಿಗಣಿಸಿ, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಎಲ್ಲಾ ಆಕಾಂಕ್ಷಿಗಳೂ ಪ್ರವೇಶಿಸಲಾಗುವುದಿಲ್ಲ” ಎಂದು ತಮಿಳುನಾಡಿನ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಕೇಂದ್ರ ಶಿಕ್ಷಣ ಸಚಿವ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ದನಿಯೆತ್ತಿದ್ದಾರೆ.

ಆದರೆ ಶಿಕ್ಷಣ ಸಚಿವಾಲಯವು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವುದಿಲ್ಲ ಎಂದು ಹೇಳಿದೆ. ಇವೆರಡೂ ಸೆಪ್ಟೆಂಬರ್ ಮೊದಲಾರ್ಧದಲ್ಲಿ ನಡೆಯಲಿವೆ. ಈ ವಿಷಯದ ಕುರಿತಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, “ಜೀವನವನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದೆ.

ಜೆಇಇ, ನೀಟ್ ಪರೀಕ್ಷೆಗಳನ್ನು ಮೇ ತಿಂಗಳಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಯಲ್ಲಿದ್ದಾಗ ರದ್ದುಪಡಿಸಲಾಯಿತು. ಆದರೆ ಆಗ ಒಟ್ಟು ಕೊರೊನಾ ವೈರಸ್ ಪ್ರಕರಣಗಳು ಕಡಿಮೆ ಇದ್ದವು. ಆಗಸ್ಟ್ 8 ರಿಂದ ಭಾರತವು ಕೊರೊನಾ ವೈರಸ್ ಅಂಕಿಅಂಶಗಳಲ್ಲಿ ವಿಶ್ವದ ಅತಿ ಹೆಚ್ಚು ದೈನಂದಿನ ಪ್ರಕರಣಗಳನ್ನು ದಾಖಲಿಸುತ್ತಿದೆ. ಈಗಾಗಲೇ 31 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಸಾವಿನ ಸಂಖ್ಯೆ 58,390 ಕ್ಕೆ ಏರಿದೆ. ಈಗ ಪರೀಕ್ಷೆ ನಡೆಸಿಯೇ ಸಿದ್ದ ಎಂದು ಸರ್ಕಾರ ನಿರ್ಧರಿಸಿದೆ.


ಇದನ್ನೂ ಓದಿ: ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆ ಮುಂದೂಡುವ ಮನವಿ ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...