Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...