Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...