Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...