Homeಮುಖಪುಟವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

- Advertisement -
- Advertisement -

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ.

ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; ಇದನ್ನು ನಾನೇ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಪಂದ್ಯದ ಬಳಿಕ ನಡೆದ ಸಮಾರಂಭದಲ್ಲಿ ಹೇಳಿದರು. “ಆಟ ಆಡುವಾಗ ನಾನು ಬೈಬಲ್‌ ಗ್ರಂಥವನ್ನು ಉಲ್ಲೇಖಿಸುತ್ತಿದ್ದೆ, ಸ್ಥಿರವಾಗಿ ನಿಲ್ಲಲು ಮತ್ತು ದೇವರು ನನಗಾಗಿ ಹೋರಾಡುತ್ತಾನೆ” ಎಂದು ಹೇಳಿದ್ದರು.

ಜೆಮಿಮಾ ಅವರ ವೈಯಕ್ತಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಹೇಳಿಕೆಗಳಿಗೆ ಆನ್‌ಲೈನ್‌ನಲ್ಲಿ ಬಲಪಂಥೀಯವಾದಿ ಬಳಕೆದಾರರಿಂದ ನಿಂದನೆ ಎದುರಿಸುವಂತಾಗಿದೆ. “ಅವರು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುತ್ತಿದ್ದಾರೆ, ಮತಾಂತರಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.

ಹಲವಾರು ಬಲಪಂಥೀಯ ಖಾತೆಗಳಲ್ಲಿ, ಜೆಮಿಮಾ ಅವರು ತಮ್ಮ ತಂದೆ ಇವಾನ್ ರಾಡ್ರಿಗಸ್ ಅವರೊಂದಿಗೆ ಚರ್ಚ್ ಕಾರ್ಯಕ್ರಮಗಳಿಗೆ ಹಾಜರಾಗುತ್ತಿರುವ ಹಳೆಯ ವೀಡಿಯೊಗಳನ್ನು ಈಗ ವೈರಲ್ ಮಾಡಲಾಗುತ್ತಿದೆ. ಅವರು ಸಮುದಾಯ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಜೆಮಿಮಾ ರಾಡ್ರಿಗಸ್ ಕ್ರಿಕೆಟ್ ಅನ್ನು ಸಾಮೂಹಿಕ ಮತಾಂತರಕ್ಕೆ ಸಾಧನವಾಗಿ ಬಳಸಿದ್ದಾರೆ. ಧಾರ್ಮಿಕ ಮತಾಂತರಕ್ಕಾಗಿ ಅಂತಹ ನಾಟಕ ಮಾಡಿದ ಒಬ್ಬ ಭಾರತೀಯನನ್ನು ನನಗೆ ತೋರಿಸಿ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ಅವರನ್ನು ‘ಪಾಕಿಸ್ತಾನಿ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಅವರ  ಪ್ರತಿ’ ಎಂದು ಕರೆದು ಅಪಹಾಸ್ಯ ಮಾಡಿದ್ದಾರೆ. ಹಿಂದೂ ಆಟಗಾರರು ವಿಜಯಗಳ ನಂತರ ‘ಭಗವಾನ್ ಅಥವಾ ಭಗವದ್ಗೀತೆಯನ್ನು ಎಂದಿಗೂ ಪ್ರಾರ್ಥಿಸುವುದಿಲ್ಲ’ ಎಂದು ಆರೋಪಿಸಿದ್ದಾರೆ.

ಕೆಲವು ಬಳಕೆದಾರರು ರಾಡ್ರಿಗಸ್ ಕ್ರಿಶ್ಚಿಯನ್ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸುತ್ತಿರುವ ಹಳೆಯ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ಅವಹೇಳನಕಾರಿ ಶೀರ್ಷಿಕೆ ನೀಡಿದ್ದು, “ಅಕ್ಕಿ ಚೀಲ ಮತಾಂತರ” ದಂತಹ ನಿಂದನಾತ್ಮಕ ಪದ ಬಳಸಿದ್ದಾರೆ. ಭಾರತದ ವಿಶ್ವಕಪ್ ಗೆಲುವಿನ ನಂತರ ಕೆಲವರು ಅವರ ನಂಬಿಕೆಯನ್ನು ಅಪಹಾಸ್ಯ ಮಾಡಿದ್ದಾರೆ. ‘ಯೇಸು ಫೈನಲ್‌ನಲ್ಲಿ ಸಹಾಯ ಮಾಡಲು ಬರಲಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

ಆನ್‌ಲೈನ್ ಪ್ರತಿಕ್ರಿಯೆಯ ಹೊರತಾಗಿಯೂ, ರಾಡ್ರಿಗಸ್ ಅವರ ಆಟವು ಭಾರತದ ಅಭಿಯಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಅವರ ಅಜೇಯ ಶತಕವು ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು, ಅಲ್ಲಿ ಅವರು ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದರು.

299 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಲಾರಾ ವೋಲ್ವಾರ್ಡ್ ಅವರ ಹೋರಾಟದ ಶತಕದ ಹೊರತಾಗಿಯೂ 246 ರನ್‌ಗಳಿಗೆ ಆಲೌಟ್ ಆಯಿತು.

ಉತ್ತರ ಪ್ರದೇಶ| ದಲಿತ ಸಮುದಾಯದ ಕೃಷಿ ಕಾರ್ಮಿಕನನ್ನು ಥಳಿಸಿ ಕೊಂದ ಭೂಮಾಲೀಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...